Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೊರಬ: ಲವಕುಶ ಪೌರಾಣಿಕ ಯಕ್ಷಗಾನ...

ಸೊರಬ: ಲವಕುಶ ಪೌರಾಣಿಕ ಯಕ್ಷಗಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ8 March 2018 10:15 PM IST
share
ಸೊರಬ: ಲವಕುಶ ಪೌರಾಣಿಕ ಯಕ್ಷಗಾನ ಕಾರ್ಯಕ್ರಮ

ಸೊರಬ,ಮಾ.8: ತಾಲೂಕಿನ ಇತಿಹಾಸದಲ್ಲಿಯೇ ಕಡಿಮೆ ದಿನಗಳಲ್ಲಿ ಅತ್ಯುತ್ತಮ ಸಂಘಟನೆಮಾಡಿ ದಾಖಲೆ ಸಂಖ್ಯೆಯಲ್ಲಿ ಯಕ್ಷಗಾನ ಅಭಿಮಾನಿಗಳನ್ನು ಸೇರಿಸಿದ ಕೀರ್ತಿ ಸತೀಶ್ ಹೆಗಡೆ ಶಾಂತಗೇರಿ ಅವರಿಗೆ ಸಲ್ಲುತ್ತದೆ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವೈದ್ಯ ಡಾ.ಎಂ.ಕೆ.ಭಟ್ ಅಭಿಪ್ರಾಯ ಪಟ್ಟರು.

ಪಟ್ಟಣದ ವಿವೇಕಾನಂದ ಶಾಲಾ ಆವರಣದಲ್ಲಿ ಹಮ್ಮಿಕೊಂಡ ಲವಕುಶ ಪೌರಾಣಿಕ ಯಕ್ಷಗಾನ ಕಾರ್ಯಕ್ರಮದಲ್ಲಿ ಬೆಂಗಳೂರಿನ ಸಿರಿ ಕಲಾಮೇಳದ ಸಂಯೋಜಕರಾದ ಸುರೇಶ್ ಹೆಗಡೆ ಕಡತೋಕ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಆಧುನಿಕತೆಯ ಬರಾಟೆಯಲ್ಲಿ ಯಕ್ಷಗಾನ ಸೇರಿದಂತೆ ಹಲವು ಕಲೆಗಳು ಕಣ್ಮರೆಯಾಗುತ್ತಿದ್ದು ಜನರು ಎಚ್ಚೆತ್ತುಕೊಂಡು ನಾಡಿನ ಸಂಸ್ಕೃತಿಯ ಪ್ರತೀಕಗಳಾದ ಜಾನಪದ ಕಲೆಗಳನ್ನು ಉಳಿಸುವತ್ತ ಮುಂದಾಗಬೇಕು. ಯಕ್ಷಗಾನ ಕಲಾಸಕ್ತರು ಕಡಿಮೆ ಇರುವ ಸಂದರ್ಭದಲ್ಲಿಯೂ ಹೆಚ್ಚು ಜನರು ಸೇರಿಸುವುದು ಕಲೆಗಳನ್ನು ಪ್ರೋತ್ಸಾಹಿಸುವ ಹಾಗೂ ಆಸ್ವಾದಿಸುವವರು ಇದ್ದಾರೆ ಎಂಬುದನ್ನು ಬಿಂಬಿಸುತ್ತದೆ. ತಾಲೂಕಿನ ಸಾಂಸ್ಕೃತಿಕ ಬೆಳವಣಿಗೆಗೆ ನಿರಂತರವಾಗಿ ಸಾಹಿತ್ಯಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಅಗತ್ಯವಿದೆ ಎಂದರು.

ಕಾರ್ಯಕ್ರಮ ಸಂಯೋಜಕ ಸತೀಶ್ ಹೆಗಡೆ ಶಾಂತಗೇರಿ ಮಾತನಾಡಿ, ತಾಲೂಕು ಸಾಂಸ್ಕೃತಿಕವಾಗಿ ಮುನ್ನಲೆಯಲ್ಲಿದ್ದರೂ ಕೂಡ ಗುರುತಿಸಿ ಪ್ರೋತ್ಸಾಹಿಸುವ ಕೊರತೆ ಎದ್ದುಕಾಣುತ್ತಿದೆ. ಪಟ್ಟಣದಲ್ಲಿ ನಿರ್ಮಾಣ ಮಾಡಿದ ರಂಗಮಂದಿರ ಮೂಲಭೂತ ಸೌಕರ್ಯಗಳ ಕೊರತೆಯಿಂದ ಬಳಸಲಾಗದ ದುಸ್ಥಿತಿ ಎದುರಾಗಿದೆ. ಯಕ್ಷಗಾನದ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದವರು ಮಹಿಳೆಯರೇ ಆಗಿರುವುದು ವಿಶೇಷ ಎಂದರು.

ವಿದ್ವಾನ್ ಎಂ.ಗೋಪಾಲ ಅವರ ಶಿಷ್ಯೆ ಪೃಥ್ವಿ ಜಾಣ ಅವರು ಭರತನಾಟ್ಯ ಪ್ರದರ್ಶಿಸಿದರು. ಯಕ್ಷಗಾನದ ಪಾತ್ರಗಳು, ಸುರೇಶ್ ಶೆಟ್ಟಿ ಅವರ ಹಾಡುಗಾರಿಕೆ, ಹಿಮ್ಮೇಳಗಳು ಜನರ ಮನಸೂರೆಗೊಂಡವು.

ಯಕ್ಷಗಾನದಲ್ಲಿ ಕಲಾವಿದರಾದ ಸುರೇಶ ಶೆಟ್ಟಿ ಶಂಕರನಾರಾಯಣ, ಶರತ್ ಹೆಗಡೆ ಜಾನಕೈ, ಭಾರ್ಗವ ಹೆಗ್ಗೋಡು, ಕುಮಾರಿ ಅರ್ಪಿತಾ ಹೆಗಡೆ ಬೆಂಗಳೂರು, ಸೌಮ್ಯ ಅರುಣ, ಕಿರಣ ಪೈ ಶಿವಮೊಗ್ಗ, ಕುಮಾರಿ ನಾಗಶ್ರೀ ಗೀಜಗಾರ್, ನಾಗೇಂದ್ರ ಮೂರೂರು, ಅವಿನಾಶ್ ಕೊಪ್ಪ ಅಭಿನಯಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X