Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರಿ ಪ್ರಶಸ್ತಿಯನ್ನು ಸ್ವೀಕರಿಸುವ...

ಸರಕಾರಿ ಪ್ರಶಸ್ತಿಯನ್ನು ಸ್ವೀಕರಿಸುವ ಮೂಲಕ ಅಲಿಖಿತ ನಿಯಮ ಮುರಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ

ವಾರ್ತಾಭಾರತಿವಾರ್ತಾಭಾರತಿ8 March 2018 11:32 PM IST
share
ಸರಕಾರಿ ಪ್ರಶಸ್ತಿಯನ್ನು ಸ್ವೀಕರಿಸುವ ಮೂಲಕ ಅಲಿಖಿತ ನಿಯಮ ಮುರಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ

 ಹೊಸದಿಲ್ಲಿ,ಮಾ.8: ಕೇಂದ್ರ ಸರಕಾರದ ನಾರಿಶಕ್ತಿ ಪುರಸ್ಕಾರವನ್ನು ಸ್ವೀಕರಿಸುವ ದಿಲ್ಲಿ ಉಚ್ಚ ನ್ಯಾಯಾಲಯದ ಪ್ರಭಾರ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಅವರ ನಿರ್ಧಾರ ಕಾನೂನು ತಜ್ಞರಿಗೆ ಪಥ್ಯವಾಗಿಲ್ಲ. ಇದನ್ನು ಹಿತಾಸಕ್ತಿಗಳ ಸಂಘರ್ಷದ ಸಂಭಾವ್ಯತೆ ಎಂದು ಪರಿಗಣಿಸಬಹುದಾಗಿದೆ ಎನ್ನುವುದು ಅವರ ಅಭಿಪ್ರಾಯವಾಗಿದೆ.

ಈ ವರ್ಷದ 30 ಪ್ರಶಸ್ತಿ ಪುರಸ್ಕೃತರಲ್ಲಿ ಓರ್ವರಾಗಿರುವ ನ್ಯಾ.ಮಿತ್ತಲ್ ಅವರು ಬಹುಶಃ ಸರಕಾರಿ ಪ್ರಶಸ್ತಿಯನ್ನು ಸ್ವೀಕರಿಸಿದ ಮೊದಲ ಹಾಲಿ ನ್ಯಾಯಾಧೀಶರಾಗಿದ್ದಾರೆ.

ನ್ಯಾಯಾಂಗ ನೀತಿ ಸಂಹಿತೆಯು ನ್ಯಾಯಾಧೀಶರು ಪ್ರಶಸ್ತಿಯೊಂದನ್ನು ಸ್ವೀಕರಿಸುವುದನ್ನು ಸ್ಪಷ್ಟವಾಗಿ ನಿಷೇಧಿಸಿಲ್ಲವಾದರೂ ಯಾವುದೇ ಹಾಲಿ ನ್ಯಾಯಾಧೀಶರನ್ನು ಈವರೆಗೆ ಪ್ರಶಸ್ತಿಗಳಿಗೆ ಪರಿಗಣಿಸಲಾಗಿರಲಿಲ್ಲ.

ಸರ್ವೋಚ್ಚ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಮೂರ್ತಿಗಳಾದ ಪಿ.ಎನ್.ಭಗವತಿ ಮತ್ತು ಎಂ.ಎನ್.ವೆಂಕಟಾಚಲಯ್ಯ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಗಳನ್ನು ಅವರ ನಿವೃತ್ತಿಯ ಬಳಿಕವೇ ನೀಡಲಾಗಿತ್ತು. ಇನ್ನೋರ್ವ ಮಾಜಿ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ವರ್ಮಾ ಅವರಿಗೆ ಮರಣೋತ್ತರವಾಗಿ ಪದ್ಮಭೂಷಣ ಪ್ರಶಸ್ತಿಯನ್ನು ಪ್ರಕಟಿಸಲಾಗಿತ್ತಾದರೂ ಅವರ ಕುಟುಂಬವು ಅದನ್ನು ನಿರಾಕರಿಸಿತ್ತು.

ಇದೇ ಒಂದು ಪ್ರವೃತ್ತಿಯಾಗಿ ಬೆಳೆದರೆ ಅದು ಅಪಾಯಕಾರಿಯಾಗಲಿದೆ ಎಂದು ಹೇಳಿದ ಹಿರಿಯ ನ್ಯಾಯವಾದಿ ಸಂಜಯ ಹೆಗ್ಡೆ ಅವರು, ನ್ಯಾಯಾಂಗವು ಸ್ವತಂತ್ರವಾಗಿ ರಬೇಕು ಮಾತ್ರವಲ್ಲ, ಅದು ಸ್ವತಂತ್ರವೆಂದು ಪರಿಗಣಿಸಲೂ ಬೇಕು. ಇದು ಹೆಚ್ಚಾಗಿ ದೃಷ್ಟಿಕೋನದ ವಿಷಯವಾಗಿದೆ ಎಂದು ಹೇಳಿದರು.

ನ್ಯಾ.ಮಿತ್ತಲ್ ಅವರು ಸರಕಾರದ ಪ್ರಶಸ್ತಿಯನ್ನು ಸ್ವೀಕರಿಸಿರುವುದರಿಂದ ಸರಕಾರವು ಕಕ್ಷಿಯಾಗಿರುವ ಯಾವುದೇ ಪ್ರಕರಣದ ವಿಚಾರಣೆಯಿಂದ ಅವರನ್ನು ಅನರ್ಹಗೊಳಿಸಬೇಕು ಎಂದು ಹಿರಿಯ ನ್ಯಾಯವಾದಿ ಇಂದಿರಾ ಜೈಸಿಂಗ್ ಟ್ವೀಟಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಕೊಡಮಾಡಿರುವ ಪ್ರಶಸ್ತಿಯು ಪ್ರಶಂಸಾಪತ್ರದ ಜೊತೆಗೆ ಒಂದು ಲಕ್ಷ ರೂ.ನಗದು ಬಹುಮಾನವನ್ನು ಒಳಗೊಂಡಿದೆ. ನ್ಯಾ.ಮಿತ್ತಲ್ ಅವರು ಹಾಲಿ ವಿಚಾರಣೆ ನಡೆಸುತ್ತಿರುವ ಹಲವಾರು ಪ್ರಕರಣಗಳಲ್ಲಿ ಇದೇ ಸಚಿವಾಲಯವು ಕಕ್ಷಿದಾರನಾಗಿದೆ.

ನಗದು ಬಹುಮಾನವನ್ನು ದತ್ತಿಕಾರ್ಯಗಳಿಗೆ ದೇಣಿಗೆ ನೀಡುವುದಾಗಿ ನ್ಯಾ.ಮಿತ್ತಲ್ ಅವರು ಈಗಾಗಲೇ ಹೇಳಿದ್ದಾರಾದರೂ, ಇದು ಟೀಕಾಕಾರರ ಮೇಲೆ ಯಾವುದೇ ಪ್ರಭಾವವನ್ನು ಬೀರಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X