Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಪ್ತಚರ ಆಯುಕ್ತರ ವರದಿಯ ಬಗ್ಗೆ ವಕೀಲ...

ಗುಪ್ತಚರ ಆಯುಕ್ತರ ವರದಿಯ ಬಗ್ಗೆ ವಕೀಲ ದುಷ್ಯಂತ್ ದವೆ ವ್ಯಕ್ತಪಡಿಸಿದ ಸಂಶಯಗಳೇನು?

ನ್ಯಾ. ಲೋಯಾ ಸಾವು ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ9 March 2018 4:02 PM IST
share
ಗುಪ್ತಚರ ಆಯುಕ್ತರ ವರದಿಯ ಬಗ್ಗೆ ವಕೀಲ ದುಷ್ಯಂತ್ ದವೆ ವ್ಯಕ್ತಪಡಿಸಿದ ಸಂಶಯಗಳೇನು?

ಹೊಸದಿಲ್ಲಿ, ಮಾ.9: ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‍ಕೌಂಟರ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸಿಬಿಐ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಬಿ.ಎಚ್. ಲೋಯಾ ಅವರ ಸಾವಿನ ಕುರಿತು ರಹಸ್ಯ ತನಿಖಾ ವರದಿ ತಯಾರಿಸುವಲ್ಲಿ ಮಹಾರಾಷ್ಟ್ರ ಗುಪ್ತಚರ ಆಯುಕ್ತರ ಪಾತ್ರವನ್ನು ಈ ಪ್ರಕರಣದ ದೂರುದಾರರ ವಕೀಲ ದುಷ್ಯಂತ್ ದವೆ ಗುರುವಾರ ನಡೆದ ವಿಚಾರಣೆಯ ವೇಳೆ ಉಲ್ಲೇಖಿಸಿದ್ದಾರೆ. 

ಕಾರವಾನ್ ಮ್ಯಾಗಝಿನ್ ನಲ್ಲಿ ಲೋಯಾ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಪ್ರಕಟವಾದ ವರದಿಯ ನಂತರ ಗುಪ್ತಚರ ಆಯುಕ್ತರು ತಮ್ಮ ಕಚೇರಿಯಿಂದ ಹೊರಗೆ ಕಾಲಿರಿಸದೆಯೇ ಈ ಪ್ರಕರಣದ  ಅವಸರದ ವರದಿ ತಯಾರಿಸಿದ್ದನ್ನು ದವೆ ಅವರು ಪ್ರಶ್ನಿಸಿದರು. ಬೇರೆ ಯಾವುದೇ ತನಿಖೆ ನಡೆಯುವುದನ್ನು ತಡೆಯಲೆಂದೇ ಅವಸರವಸರವಾಗಿ ತನಿಖೆ ನಡೆಸಲಾಗಿತ್ತು, ಎಂದು ದವೆ ಆರೋಪಿಸಿದ್ದಾರೆ. ಕಾರವಾನ್ ವರದಿ ಸುಳ್ಳೆಂದು ಮಹಾರಾಷ್ಟ್ರ ಸರಕಾರ ಹೇಳುತ್ತಿದೆ, ಹಾಗಾದರೆ ಇಷ್ಟೊಂದು ಅವಸರದಲ್ಲಿ ವರದಿ ಏಕೆ  ತಯಾರಿಸಲಾಯಿತು ಎಂದೂ ಅವರು ಪ್ರಶ್ನಿಸಿದ್ದಾರೆ.

ಕಾರವಾನ್  ಪ್ರಕಟಿಸಿದ ಮೊದಲ ವರದಿಯಲ್ಲಿ ಲೋಯಾ ಅವರೊಂದಿಗೆ ನವೆಂಬರ್ 29ರಿಂದ ಡಿಸೆಂಬರ್ 1, 2014ರ ತನಕ ಇದ್ದ ನಾಲ್ಕು ಮಂದಿ ನ್ಯಾಯಾಧೀಶರುಗಳ ಹೆಸರು ಉಲ್ಲೇಖಿಸದೇ ಇದ್ದರೂ ಯಾವುದೇ ತನಿಖೆ ನಡೆಸದೆ ಗುಪ್ತಚರ ಆಯುಕ್ತರಿಗೆ ಅವರ ಹೆಸರುಗಳು ಹೇಗೆ ದೊರಕಿತ್ತು ಎಂದು ಪ್ರಶ್ನಿಸಿದರು. ಈ ನ್ಯಾಯಾಧೀಶರುಗಳ ಹೇಳಿಕೆ ದಾಖಲಿಸಲು  ಆಯುಕ್ತರು ಅನುಮತಿ ಕೋರಿದ ದಿನವೇ ಬಾಂಬೆ ಹೈಕೋರ್ಟ್ ಅದಕ್ಕೆ  ನ್ಯಾಯಾಲಯದ ಕಲಾಪ ನಡೆಸದೆಯೇ ಹೇಗೆ ಅನುಮತಿ ನೀಡಿತು ಎಂದು ದವೆ ಕೇಳಿದರಲ್ಲದೆ ಈ ವರದಿಯನ್ನು ತಿರಸ್ಕರಿಸಬೇಕೆಂದೂ ಆಗ್ರಹಿಸಿದರು.

ಲೋಯಾ ಸಾವು ಪ್ರಕರಣದ ಸ್ವತಂತ್ರ ತನಿಖೆ ಕೋರಿ ಸಲ್ಲಿಸಲಾಗಿರುವ ಅಪೀಲಿನ ಮೇಲಿನ ವಿಚಾರಣೆ ಇಂದೂ ಮುಂದುವರಿಯುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X