Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜೀವ್ ಗಾಂಧಿ ರಾಜಕೀಯ ಪ್ರವೇಶಿಸಬಾರದು...

ರಾಜೀವ್ ಗಾಂಧಿ ರಾಜಕೀಯ ಪ್ರವೇಶಿಸಬಾರದು ಎಂದು ಸೋನಿಯಾ ಬಯಸಿದ್ದೇಕೆ?

ಈ ಬಗ್ಗೆ ಸ್ವತಃ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ9 March 2018 4:56 PM IST
share
ರಾಜೀವ್ ಗಾಂಧಿ ರಾಜಕೀಯ ಪ್ರವೇಶಿಸಬಾರದು ಎಂದು ಸೋನಿಯಾ ಬಯಸಿದ್ದೇಕೆ?

ಮುಂಬೈ,ಮಾ.9: ತಮ್ಮ ಪತಿ ರಾಜೀವ್ ಗಾಂಧಿ ಅವರು ರಾಜಕೀಯಕ್ಕೆ ಪ್ರವೇಶಿಸುವುದು ಸೋನಿಯಾ ಗಾಂಧಿ ಅವರಿಗೆ ಇಷ್ಟವಿಲ್ಲದೇ ಇರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇಂಡಿಯಾ ಟುಡೇ ಕಾಂಕ್ಲೇವ್ - 2018ರ ಮೊದಲ ದಿನದಂದು ಮಾತನಾಡಿದ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ, ರಾಜೀವ್ ಆವರ ರಾಜಕೀಯ ಪ್ರವೇಶದ ಬಗ್ಗೆ ತಮಗಿದ್ದಿದ್ದ ಭಯದ ವಿಚಾರದ ಬಗ್ಗೆ ಮನಬಿಚ್ಚಿ ಮಾತನಾಡಿದರು.

"ನನ್ನ ಪತಿ ರಾಜಕೀಯ ಪ್ರವೇಶಿಸಬಾರದೆಂಬುದಕ್ಕೆ ನನಗೆ ನನ್ನದೇ ಆದ ಕಾರಣಗಳಿದ್ದವು. ರಾಜೀವ್ ರಾಜಕೀಯ ಪ್ರವೇಶಿಸಿದರೆ ನಮ್ಮ ಕುಟುಂಬ ಜೀವನ ಬಾಧಿತವಾಗುವುದು ಎಂಬ ಭಯ ನನಗಿತ್ತು,'' ಎಂದು ಸೋನಿಯಾ ಹೇಳಿಕೊಂಡರು.

1984ರಲ್ಲಿ ಸೋನಿಯಾ ಅವರ ಅತ್ತೆ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯೇ ರಾಜೀವ್ ಅವರು ರಾಜಕೀಯ ಪ್ರವೇಶಿಸುವುದು ಸೋನಿಯಾ ಆತಂಕಕ್ಕೆ ಕಾರಣವಾಗಿತ್ತು. "ಒಂದು ವೇಳೆ ರಾಜೀವ್ ರಾಜಕೀಯ ಪ್ರವೇಶಿಸುವುದಕ್ಕೆ ನನ್ನ ವಿರೋಧ ಸ್ವಾರ್ಥದಿಂದ ಕೂಡಿದ್ದಾಗಿರಬಹುದು. ಆದರೂ ಅವರು ಹೇಗಾದರೂ ಮಾಡಿ ಅವರನ್ನು ಕೊಲ್ಲುತ್ತಿದ್ದರು ಎಂದೂ ನನಗನಿಸಿತ್ತು,'' ಎಂದು ಸೋನಿಯಾ ತಿಳಿಸಿದು. "ನಾನು ಸರಿಯಾಗಿಯೇ ಯೋಚಿಸಿದ್ದೆ, ನನ್ನ ಭಯ ನಿಜವಾಗಿತ್ತು,'' ಎಂದರು ಸೋನಿಯಾ.

"ಹಾಗಾದರೆ ನಿಮಗೆ ಪೂರ್ವಸೂಚನೆಯ ಅನುಭವವಾಗಿತ್ತೇ ?'' ಎಂದು ಇಂಡಿಯಾ ಟುಡೆ ಸಮೂಹದ ಅಧ್ಯಕ್ಷ ಹಾಗೂ ಮುಖ್ಯ ಸಂಪಾದಕ ಅರುಣ್ ಪುರಿ ಪ್ರಶ್ನಿಸಿದಾಗ "ಇಲ್ಲ, ಆದರೆ ನಮ್ಮ ಸುತ್ತಮುತ್ತ ಏನು ನಡೆಯುತ್ತಿತ್ತು ಎಂದು ನನಗೆ ಗೊತ್ತಿತ್ತು. ಆದರೆ ಆ ಹಂತದಲ್ಲಿ ಅದು (ರಾಜೀವ್ ರಾಜಕೀಯ ಪ್ರವೇಶ) ಅನಿವಾರ್ಯವಾಗಿತ್ತು. ಅವರು ಕಾಲು ಹಿಂದಕ್ಕಿಡುವ ಹಾಗಿರಲಿಲ್ಲ, ಅವರು ಅದಾಗಲೇ ರಾಜಕೀಯದಲ್ಲಿದ್ದರು,'' ಎಂದು ಸೋನಿಯಾ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X