Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಕ್ಸಲ್ ಭೀತಿ; ಬಂದೂಕು ಠೇವಣಿಗೆ ಅವಕಾಶ...

ನಕ್ಸಲ್ ಭೀತಿ; ಬಂದೂಕು ಠೇವಣಿಗೆ ಅವಕಾಶ ಬೇಡ :ಮಡಿಕೇರಿ ತಾ.ಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ9 March 2018 6:04 PM IST
share
ನಕ್ಸಲ್ ಭೀತಿ; ಬಂದೂಕು ಠೇವಣಿಗೆ ಅವಕಾಶ ಬೇಡ :ಮಡಿಕೇರಿ ತಾ.ಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರ ಆಗ್ರಹ

ಮಡಿಕೇರಿ,ಮಾ.9 :ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ನಕ್ಸಲ್ ಭೀತಿ ಇರುವುದರಿಂದ ಚುನಾವಣೆ ಸಂದರ್ಭ ಬಂದೂಕು ಠೇವಣಿಗೆ ಅವಕಾಶ ನೀಡಬಾರದೆಂದು ತಾ.ಪಂ ಸದಸ್ಯರು ಆಗ್ರಹಿಸಿದ್ದಾರೆ.

ತಾ.ಪಂ.ಅಧ್ಯಕ್ಷೆ ತೆಕ್ಕಡೆ ಶೋಭ ಮೋಹನ್ ಅವರ ಅಧ್ಯಕ್ಷತೆಯಲ್ಲಿ ನಡೆದ ತಾ.ಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರು ನಕ್ಸಲರ ಭೇಟಿ ಕುರಿತು ಆತಂಕ ವ್ಯಕ್ತಪಡಿಸಿದರು. ತಾಲ್ಲೂಕಿನಲ್ಲಿ ಕೋವಿ ಹಕ್ಕು ಹೊಂದಿರುವವರು ಚುನಾವಣೆ ಸಂದರ್ಭ ನಿಯಮಾನುಸಾರ ತಮ್ಮ ತಮ್ಮ ಕೋವಿಗಳನ್ನು ಪೊಲೀಸ್ ಠಾಣೆಯಲ್ಲಿ ಠೇವಣಿ ಇಡುವುದು ಸಾಮಾನ್ಯ. ಆದರೆ ಈ ಬಾರಿ ನಕ್ಸಲರ ಓಡಾಟ ಹೆಚ್ಚಾಗಿರುವುದರಿಂದ ಕೋವಿ ಠೇವಣಿ ಕ್ರಮಕ್ಕೆ ರಿಯಾಯಿತಿ ನೀಡಬೇಕು ಎಂದು ಸದಸ್ಯ ನಾಗೇಶ್ ಕುಂದಲ್ಪಾಡಿ ಒತ್ತಾಯಿಸಿದರು. 

ಮಡಿಕೇರಿ ತಾ.ಪಂ ವ್ಯಾಪ್ತಿಯಲ್ಲಿ ನಕ್ಸಲ್ ಸಮಸ್ಯೆ ಹೆಚ್ಚಾಗಿದ್ದು, ಜನತೆ ಆತಂಕದಲ್ಲಿದ್ದಾರೆ. ತಾಲೂಕು ಪಂಚಾಯತ್ ವ್ಯಾಪ್ತಿಗೆ ಸಂಬಂಧಿಸಿದಂತೆ ನಕ್ಸಲ್ ಹಾವಳಿ ಇರುವ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್‍ನಡಿ ಅನುದಾನ ಲಭ್ಯವಿದೆ. ಸಂಪಾಜೆ, ಕಕ್ಕಬ್ಬೆ ಸೇರಿದಂತೆ ಮಡಿಕೇರಿ ತಾಲೂಕಿನ ನಕ್ಸಲ್ ಗ್ರಾಮ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಒದಗಿಸಬೇಕು ಎಂದು ಕುಂದಲ್ಪಾಡಿ ಒತ್ತಾಯಿಸಿದರು. ಈ ಸಲಹೆಗೆ ಇತರ ಸದಸ್ಯರು ಕೂಡ ಧ್ವನಿಗೂಡಿಸಿದರು. 

ವರ್ಗಾವಣೆಗೆ ಸೂಚನೆ
ಒಂದೇ ಶಾಲೆಯಲ್ಲಿ ಹತ್ತು ವರ್ಷಕ್ಕಿಂತ ಹೆಚ್ಚು ಕಾಲ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ವರ್ಗಾವಣೆಗೊಳಿಸುವಂತೆ ಅಧ್ಯಕ್ಷರಾದ ಶೋಭಾ ಮೋಹನ್ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ರಾಯ್ ತಮ್ಮಯ್ಯ ಮಾತನಾಡಿ ಯಾವುದಾದರು ಶಿಕ್ಷಕರ ವಿರುದ್ಧ ದೂರುಗಳಿದ್ದರೂ ವರ್ಗಾವಣೆಗೆ ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಿದರು. 

ಮಡಿಕೇರಿ ತಾಲೂಕಿನಲ್ಲಿ 2018-19 ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯಿದೆಯಡಿ ಪ್ರವೇಶ ಪ್ರಕ್ರಿಯೆಯನ್ನು ಆನ್‍ಲೈನ್ ಮೂಲಕ ನಡೆಸಲಾಗುತ್ತದೆ.  ಫೆ.20 ರಿಂದ ಮಾ. 20 ರೊಳಗೆ ದಾಖಲಾತಿ ಕೋರಿ ಪೋಷಕರು ತಾವು ಇಚ್ಛಿಸಿರುವ ಶಾಲೆಗಳಿಗೆ ಆನ್‍ಲೈನ್ ಮೂಲಕ ಅಗತ್ಯ ದಾಖಲಾತಿಗಳ ಸಹಿತ ಗರಿಷ್ಠ 5 ಶಾಲೆಗಳಿಗೆ ಆದ್ಯತೆ ಗುರುತಿಸಿ ಒಂದು ಅರ್ಜಿ ಸಲ್ಲಿಸಬಹುದು ಎಂದು ಬಿಇಒ ಸಭೆಯ ಗಮನ ಸೆಳೆದರು.

ಮಡಿಕೇರಿ ತಾಲೂಕಿನಲ್ಲಿ  ಮಾತೃಪೂರ್ಣ ಯೋಜನೆಗೆ ಸ್ಪಂದನೆ ದೊರೆಯುತ್ತಿಲ್ಲವೆಂದು ಅಸಹಾಯಕತೆ ವ್ಯಕ್ತಪಡಿಸಿದ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿ ದಮಯಂತಿ ಕೇವಲ ಶೇ.20 ರಷ್ಟು ಸಾಧನೆಯಾಗಿದೆ ಎಂದರು. 

ಹಮ್ಮಿಯಾಲ ಮುಟ್ಲು ಭಾಗದಲ್ಲಿ ಕಳೆದ 15 ದಿನಗಳಿಂದ ವಿದ್ಯುತ್ ಸಮಸ್ಯೆಯಿದೆ. ಜನತೆ   ಕತ್ತಲಲ್ಲಿ  ದಿನಕಳೆಯುವಂತೆ ಆಗಿದೆ ಎಂದು ಸಾಮಾಜಿಕ ನ್ಯಾಯ ಸಮಿತಿ ಸದಸ್ಯ ರಾಯ್ ತಮ್ಮಯ್ಯ ಅಧಿಕಾರಿಯ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿ ದೊಡ್ಡಮನಿ, ಈ ಬಗ್ಗೆ ಯಾವುದೇ ದೂರು ಬಂದಿಲ್ಲ ಎಂದು ಹಾರಿಕೆಯ ಉತ್ತರ ನೀಡಲು ಮುಂದಾದರು. ಈ ಸಂದರ್ಭ ಅಧಿಕಾರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸದಸ್ಯರು ತಾಲೂಕಿನ ವಿವಿಧೆಡೆ ವಿದ್ಯುತ್ ಸಮಸ್ಯೆ ಗಂಭೀರವಾಗಿದ್ದರೂ ಇಲಾಖೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಅಧಿಕಾರಿಗಳು ತಳಮಟ್ಟದ ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳುತ್ತಿಲ್ಲವೆಂದು ಆರೋಪಿಸಿದರು. 

ಮುಟ್ಲು ಹಮಿಯಾಲ ಭಾಗದಲ್ಲಿ  ರಸ್ತೆ ಅಗಲೀಕರಣವಾಗುತ್ತಿರುವ ಕಾರಣ ಬೆಳಗ್ಗಿನ ಸಮಯದಲ್ಲಿ  ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು  ಅಧಿಕಾರಿ ದೊಡ್ಡಮನಿ ಸ್ಪಷ್ಟಪಡಿಸಿದರು. 

ಅಧ್ಯಕ್ಷೆ ಶೋಭಾ ಮೋಹನ್ ಮಾತನಾಡಿ ಇಲಾಖೆಯಲ್ಲಿ ವಿವಿಧ ಯೋಜನೆಗಳು ಜಾರಿಯಲ್ಲಿದ್ದರೂ ಅನುಷ್ಠಾನಗೊಳಿಸುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.

ಉಪಾಧ್ಯಕ್ಷರಾದ ಸಂತು ಸುಬ್ರಮಣಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೀವನ್ ಕುಮಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. ಇದೇ ಸಂದರ್ಭ ಮೀನುಗಾರಿಕೆ ಇಲಾಖೆಯಲ್ಲಿ 2017-18 ಅರ್ಹ ಫಲಾನುಭವಿಗಳಿಗೆ ಮೀನುಗಾರಿಕೆ ಕಿಟ್ ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X