ಬೆಂಗಳೂರು : ನೀರಿನ ಸಂಪ್ಗೆ ಬಿದ್ದು ಬಾಲಕಿ ಮೃತ್ಯು

ಸಾಂದರ್ಭಿಕ ಚಿತ್ರ
ಬೆಂಗಳೂರು, ಮಾ.9: ನೀರಿನ ಸಂಪ್ಗೆ ಬಿದ್ದು ಆರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಇಲ್ಲಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.
ಶ್ರೀಗಂಧ ನಗರದ ಹೆಗ್ಗನಹಳ್ಳಿಯ ದೇವೇಂದ್ರ ಮತ್ತು ಅಂಜಲಿ ಎಂಬುವರ ಪುತ್ರಿ ಹರಿಪ್ರಿಯಾ(6) ಮೃತಪಟ್ಟ ಬಾಲಕಿ ಎಂದು ತಿಳಿದುಬಂದಿದೆ. ಈ ಸಂಬಂಧ ರಾಜಗೋಪಾಲ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





