Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೌಚಾಲಯವಿದ್ದರೂ ಬಳಕೆಗೆ ನೀರಿಲ್ಲ :...

ಶೌಚಾಲಯವಿದ್ದರೂ ಬಳಕೆಗೆ ನೀರಿಲ್ಲ : ಸ್ಮಾರ್ಟ್‍ಸಿಟಿಯಲ್ಲಿ ಹಳ್ಳ ಹಿಡಿದ ಸ್ವಚ್ಚಭಾರತ್ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ9 March 2018 10:49 PM IST
share

ತುಮಕೂರು,ಮಾ.9:ಲಕ್ಷಾಂತರ ರೂ ಖರ್ಚು ಮಾಡಿ ಶಾಲಾ ಮಕ್ಕಳಿಗಾಗಿ ನಿರ್ಮಿಸಿರುವ ಶೌಚಾಲಯಕ್ಕೆ ನೀರಿನ ಸಂಪರ್ಕವಿಲ್ಲದೆ, ಸ್ವಚ್ಚಭಾರತ ಅಭಿಯಾನ ಸ್ಮಾರ್ಟ್‍ಸಿಟಿಯಾಗಿರುವ ತುಮಕೂರು ನಗರದಲ್ಲಿಯೇ ಹಳ್ಳ ಹಿಡಿದಿರುವುದು ವಿಪರ್ಯಾಸದ ಸಂಗತಿಯಾಗಿದೆ.

ತುಮಕೂರು ನಗರದ ಎನ್.ಆರ್.ಕಾಲೋನಿಯ ಬೆಳಗುಂಬ ರಸ್ತೆಯಿಂದ ಅಣ್ಣೇತೋಟಕ್ಕೆ ಹೋಗುವ ರಸ್ತೆಯಲ್ಲಿ ಜೆ.ಪಿ.ಹಿರಿಯ ಪ್ರಾಥಮಿಕ ಶಾಲೆಯಿದೆ. ಎನ್.ಆರ್.ಕಾಲೋನಿ, ಬೆಳಗುಂಬ, ಅಣ್ಣೇತೋಟ, ಅಂಬೇಡ್ಕರ್ ನಗರ, ಶಾರದಾದೇವಿ ನಗರ ಹಾಗೂ ಸುತ್ತ ಮುತ್ತಲ ಸಮಾರು 250ಕ್ಕೂ ಹೆಚ್ಚು ಮಕ್ಕಳು ಸದರಿ ಶಾಲೆಯಲ್ಲಿ ಕಲಿಯುತ್ತಿದ್ದು, ಇದುವರೆಗೂ ಈ ಮಕ್ಕಳು ಶಾಲಾ ಸಿಬ್ಬಂದಿ ಮತ್ತು ಮಕ್ಕಳಿಗಾಗಿ ಇದ್ದ ಏಕೈಕ ಶೌಚಾಲಯವನ್ನೇ ಉಪಯೋಗಿಸುತ್ತಿದ್ದರು.ಇದಕ್ಕೆ ಬೇಕಾದ ನೀರನ್ನು ಶಾಲೆಯ ಆವರಣದಲ್ಲಿ ಇರುವ ತೊಟ್ಟಿಯಿಂದ ತೆಗೆದುಕೊಂಡು ಹೋಗಬೇಕಾಗಿತ್ತು. ಮಧ್ಯಾಹ್ನ ಬಿಸಿಯೂಟಕ್ಕೂ, ಶೌಚಾಲಯಕ್ಕೂ ಒಂದೇ ನೀರನ್ನು ಬಳಸುತ್ತಿದ್ದು, ಒಂದು ರೀತಿಯ ಆನಾರೋಗ್ಯಕರ ವಾತಾವರಣಕ್ಕೆ ಕಾರಣವಾಗಿತ್ತು.

ಶಾಲೆಯಲ್ಲಿ ಶೌಚಾಲಯದ ಸಮಸ್ಯೆ ಇರುವುದನ್ನು ಮನಗಂಡ ತುಮಕೂರು ನಗರ ಶಾಸಕರಾದ ಡಾ.ರಫೀಕ್ ಅಹಮದ್ ತಮ್ಮ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿಯಲ್ಲಿ ಶಾಲೆಗೆ ಹೊಸದಾಗಿ 3 ಶೌಚಾಲಯಗಳನ್ನು ನಿರ್ಮಿಸಿಕೊಟ್ಟಿದ್ದಾರೆ. ಆದರೆ ನೀರಿನ ಸಂಪರ್ಕ ಕಲ್ಪಿಸಿಲ್ಲ. ಇದರಿಂದಾಗಿ ಹೊಸದಾಗಿ ನಿರ್ಮಾಣವಾದ ಶೌಚಾಲಯಗಳು ಬಳಕೆಗೆ ಬಾರದಂತಾಗಿವೆ. ಈ ಬಗ್ಗೆ ನಗರಪಾಲಿಕೆಯ ವಾರ್ಡಿನ ಕೌನ್ಸಿಲರ್, ಅಧಿಕಾರಿಗಳಿಗೆ ದೂರು ನೀಡಿದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ.

ಮಹಾನಗರ ಪಾಲಿಕೆಯ 19ನೇ ವಾರ್ಡ್‍ನಲ್ಲಿರುವ ಈ ಶಾಲೆಗೆ ಬರುವುದು ಬಹುತೇಕ ಕೊಳಗೇರಿಯ ಮಕ್ಕಳೇ, ಪ್ರೌಢಶಾಲಾ ವಿಭಾಗದಲ್ಲಿ 100ಕ್ಕೂ ಹೆಚ್ಚು ಮಕ್ಕಳು ಹಾಗೂ ಪ್ರಾಥಮಿಕ ಶಾಲಾ ವಿಭಾಗದಲ್ಲಿ 150 ಮಕ್ಕಳು ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ.ಮಕ್ಕಳ ಅಪೌಷ್ಠಿಕತೆಗೆ ಕಾರಣಗಳಲ್ಲಿ ಬಯಲು ಶೌಚಾಲಯ ಸಮಸ್ಯೆಯೇ ಮುಖ್ಯವಾಗಿದ್ದು, ಇರುವ ಒಂದು ಶೌಚಾಲಯವನ್ನು ಬಳಸಲು ಮಕ್ಕಳು ಸರದಿ ನಿಲ್ಲಬೇಕಾಗಿದೆ. ಪ್ರಾಥಮಿಕ ಶಾಲೆಯ ಮಕ್ಕಳು ಬಯಲನ್ನು ಆಶ್ರಯಿಸಿದ್ದರೆ, ಪ್ರೌಢಶಾಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಹೆಣ್ಣು ಮಕ್ಕಳ ಸ್ಥಿತಿ ಶೋಚನೀಯವಾಗಿದೆ. ಇರುವ ಒಂದು ಶೌಚಾಲಯವನ್ನು ಬಳಸಲು ಆಗುತ್ತಿಲ್ಲ, ಇನ್ನೂ ಹೊಸದಾಗಿ ನಿರ್ಮಾಣಗೊಂಡಿರುವ ಶೌಚಾಲಯವೂ ಉದ್ಘಾಟನೆಯಾಗುತ್ತಿಲ್ಲ.

ನೀರಿನದ್ದೇ ದೊಡ್ಡ ಸಮಸ್ಯೆ: ಅಣ್ಣೇತೋಟಕ್ಕೆ ಹೋಗುವ ರಸ್ತೆಯ ಪಕ್ಕದಲ್ಲಿಯೇ ಇರುವ ಜೆಪಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿರುವ ಶೌಚಾಲಯಗಳಿಗೆ ನೀರಿನ ಪೈಪ್‍ಲೈನ್ ವ್ಯವಸ್ಥೆ ಇಲ್ಲ, ತೊಟ್ಟಿಯಲ್ಲಿನ ನೀರನ್ನೇ ಶೌಚಾಲಯಕ್ಕೂ, ಬಿಸಿಯೂಟಕ್ಕೂ ಬಳಸಲಾಗುತ್ತಿದೆ. ಶೌಚಾಲಯಗಳಿಗೆ ನೀರಿನ ಸಂಪರ್ಕ ಕಲ್ಪಿಸುವಂತೆ ಪಾಲಿಕೆ ಸಿಬ್ಬಂದಿಗಳಿಗೆ, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗುತ್ತಿಲ್ಲ ಎನ್ನುತ್ತಾರೆ ಇಲ್ಲಿನ ನಾಗರೀಕರು.

ಮುಖ್ಯ ರಸ್ತೆಯಲ್ಲಿರುವ ಪೈಪ್ ಸಂಪರ್ಕದಿಂದ ಶೌಚಾಲಯದವರೆಗೂ ನೀರಿನ ಪೈಪ್ ಅಳವಡಿಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಬಹುದಾಗಿದೆ.ಇದರಿಂದ ಮಕ್ಕಳು ತೊಟ್ಟಿಯಿಂದ ನೀರನ್ನು ತೆಗೆದುಕೊಂಡು ಶೌಚಾಲಯಕ್ಕೆ ಹೋಗುವುದು ತಪ್ಪುತ್ತದೆ.ಈ ಹಿಂದೆ ಸದಸ್ಯರಾದ ಬಾಲಕೃಷ್ಣ ಅವರಿಗೆ ಮನವಿ ಸಲ್ಲಿಸಿದಾಗ, ನಾಲ್ಕೈದು ದಿನಗಳಲ್ಲಿ ನೀರಿನ ಸಂಪರ್ಕ ಕಲ್ಪಿಸುವುದಾಗಿ ಭರವಸೆ ನೀಡಿ ತಿಂಗಳಾದರು ನೀರಿನ ಸಂಪರ್ಕ ಸಾಧ್ಯವಾಗಿಲ್ಲ.

ಮಕ್ಕಳ ಪೋಷಕರಲ್ಲಿ ಒಬ್ಬರಾಗಿರುವ ಡಾ.ಮನಿತ ಹೇಳುವಂತೆ ಮಕ್ಕಳಿಗೆ ಅವಶ್ಯಕವಾದ ಶೌಚಾಲಯವನ್ನು ಕೇವಲ ನಿರ್ಮಾಣ ಮಾಡಿದರೆ ಹೇಗೆ? ಅದಕ್ಕೆ ನೀರಿನ ವ್ಯವಸ್ಥೆಯೇ ಇಲ್ಲ ಎಂದರೆ ಮಕ್ಕಳು ಶೌಚಾಲಯಗಳನ್ನು ಹೇಗೆ ಬಳಸುತ್ತಾರೆ. ಮಕ್ಕಳಿಗೆ ಶೌಚಾಲಯದ ಅರಿವು ಮೂಡಿಸಲು ಹಾಗೂ ಸ್ವಚ್ಛ ತುಮಕೂರಿಗಾಗಿ ಮೂಲ ಸೌಕರ್ಯಗಳನ್ನು ಒದಗಿಸಬೇಕಿದೆ. ಅಷ್ಟೇ ಅಲ್ಲದೇ ಇಲ್ಲಿನ ಬಯಲು ಶೌಚದ ಸಮಸ್ಯೆಯಿಂದ ಈ ಶಾಲೆಯ ಮಕ್ಕಳು ಅನಾರೋಗ್ಯಕ್ಕೇ ಈಡಾದರೆ ವಾಸಿಯಾಗಲು ಕಷ್ಟಪಡಬೇಕಿದೆ. ಸರಕಾರಿ ಶಾಲೆಗಳ ಬಗ್ಗೆ ಈ ರೀತಿಯ ನಿರ್ಲಕ್ಷ್ಯ ವಹಿಸಿದರೆ ಕನ್ನಡ ಶಾಲೆಗಳು ಮುಚ್ಚದೆ ಇನ್ನೇನು ಎಂಬುದು ಇವರ ಪ್ರಶ್ನೆಯಾಗಿದೆ. ನಗರಪಾಲಿಕೆ, ಪಾಲಿಕೆಯ ಸ್ಥಳೀಯ ಸದಸ್ಯರು ಹಾಗೂ ಅಧಿಕಾರಿಗಳು ಎಚ್ಚೆತ್ತು ಮಕ್ಕಳು ಹೊಸದಾಗಿ ನಿರ್ಮಾಣವಾಗಿರುವ ಶೌಚಾಲಯ ಬಳಸುವಂತೆ ನೀರಿನ ಸಂಪರ್ಕ ಕಲ್ಪಿಸಬೇಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X