Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚುನಾವಣೆ ವೇಳೆ ನನ್ನ ಮೇಲೆ ಇಲ್ಲಸಲ್ಲದ...

ಚುನಾವಣೆ ವೇಳೆ ನನ್ನ ಮೇಲೆ ಇಲ್ಲಸಲ್ಲದ ಆರೋಪ: ಹೆಚ್.ಕೆ. ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ10 March 2018 9:34 PM IST
share
ಚುನಾವಣೆ ವೇಳೆ ನನ್ನ ಮೇಲೆ ಇಲ್ಲಸಲ್ಲದ ಆರೋಪ: ಹೆಚ್.ಕೆ. ಕುಮಾರಸ್ವಾಮಿ

ಹಾಸನ,ಮಾ.10: ಚುನಾವಣೆ ಸಮೀಪವಿರುವಂತೆ ರಾಜಕೀಯ ಪಿತೂರಿ ಮಾಡಿ ನನ್ನ ಮೇಲೆ ಭೂ ಕಬಳಿಕೆಯ ಆರೋಪ ಮಾಡಿದ್ದು, ಇದು ಸಂಪೂರ್ಣ ಸುಳ್ಳು ಎಂದು ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಹೆಚ್.ಕೆ. ಕುಮಾರಸ್ವಾಮಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಆಲೂರು ತಾಲೂಕಿನ ಕೆ. ಹೊಸಕೋಟೆ ಹೋಬಳಿಯ ಹಳ್ಳಿಯೂರು ಗ್ರಾಮದಲ್ಲಿ ಸರ್ವೆ ನಂ.62ರಲ್ಲಿ 10 ಎಕರೆ ಭೂಮಿ ನಾನು ವಕೀಲನಾಗಿದ್ದಾಗ (1982ರಲ್ಲಿ) ಭೂಮಿ ಮಂಜೂರಾಗಿದೆ. ನಂತರ ಬೇಲೂರು ಶಾಸಕನಾಗಿದ್ದಾಗ 1986-87ರಲ್ಲಿ ಹಕ್ಕು ಪತ್ರವನ್ನು ಪಡೆದಿದ್ದೇನೆ. ನಾನು ಯಾವುದೇ ರೀತಿಯ ಸುಳ್ಳು ದಾಖಲೆಗಳನ್ನು ನೀಡಿ, ಅಧಿಕಾರಿಗಳ ಮೇಲೆ ಪ್ರಭಾವವನ್ನುಬೀರಿ ಭೂಮಿಯನ್ನು ಮಂಜೂರು ಮಾಡಿಸಿಕೊಂಡಿಲ್ಲ ಎಂದರು.

ಇದರ ಜೊತೆಗೆ ಶಾಸಕರ ತಂಗಿ ಮಹದೇವಮ್ಮ  ಹಾಗೂ ಅವರ ಸಂಬಂದ ದ್ಯಾವಮ್ಮ ಎಂಬುವರಿಗೆ ಕಾನೂನು ಬಾಹಿರವಾಗಿ ಮಂಜೂರು ಮಾಡಿಸಿಕೊಂಡಿದ್ದಾರೆ ಅನ್ನೋದು ಸಹ ಸುಳ್ಳು. ಅವರಿಗೆ ಕಾನೂನು ಬದ್ಧವಾಗಿಯೇ ಮಂಜೂರಾಗಿದೆ ಅಷ್ಟೇ ಎಂದು ಹೇಳಿದರು. ಆದರೆ ಸುಳ್ಳು ದಾಖಲೆ ನೀಡಿ ಸರ್ಕಾರದಿಂದ ಭೂಮಿ ಮಂಜೂರು ಮಾಡಿಸಿಕೊಂಡಿರುವುದಲ್ಲದೇ, ಅಕ್ಕ ಪಕ್ಕದ ಬಡವರಿಗೆ ಮಂಜೂರಾಗಿದ್ದ ಭೂಮಿಯನ್ನು ಸಹ ಒತ್ತುವರಿ ಮಾಡಿದ್ದಾರೆ ಎಂದು ಜಿಪಂ ಮಾಜಿ ಸದಸ್ಯ ಡಿ.ಸಿ. ಸಣ್ಣಸ್ವಾಮಿ ಮಾಡಿರುವ ಆರೋಪ ಸುಳ್ಳಾಗಿದೆ ಎಂದರು.

ನಮಗೆ ಮಂಜೂರಾಗಿರುವ ಭೂಮಿಯು ಸಂಪೂರ್ಣವಾಗಿ ಗುಡ್ಡ ಪ್ರದೇಶವಾಗಿದ್ದರಿಂದ ನಾವು 12 ವರ್ಷಗಳ ಕಾಲ ಉಳುಮೆಯನ್ನು ಮಾಡಿರಲಿಲ್ಲ. ನಂತರ ನಾನು ಉಳುಮೆ ಮಾಡಿಸಲು ಪ್ರಾರಂಭಿಸಿದ್ದೇನೆ. ಅಕ್ಕಪಕ್ಕದ ಬಡವರ ಜಮೀನನ್ನು ನಾನು ಹೆದರಿಸಿ, ಬೆದರಿಸಿ ಭೂಮಿಯನ್ನು ಒತ್ತುವರಿ ಮಾಡಿಲ್ಲ ಎಂದು ಸ್ವಷ್ಟಪಡಿಸಿದರು. ಚುನಾವಣೆಯ ಸಂದರ್ಭದಲ್ಲಿ ಸುಳ್ಳು ಆರೋಪಗಳನ್ನು ಮಾಡಿ ತೊಂದರೆ ಕೊಡುವುದಕ್ಕಾಗಿ ತಮ್ಮ ವಿರುದ್ಧ ರಾಜಕೀಯ ಪಿತೂರಿಯನ್ನು ನಡೆಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಬೆಂಗಳೂರು ಮತ್ತು ಬಳ್ಳಾರಿಯ ಸಂಸ್ಕೃತಿ ಈಗ ಸಕಲೇಶಪುರದಲ್ಲೂ ವ್ಯಾಪಿಸಿದೆ. ಯುವಕರನ್ನು ದಾರಿತಪ್ಪಿಸಲು ಪ್ರತಿ ಹಳ್ಳಿಗಳಿಗೂ ತೆರಳಿ ಹಣ ಮತ್ತು ಹೆಂಡವನ್ನು ಹಂಚಲಾಗುತ್ತಿದೆ ಎಂದು ದೂರಿದರು. ನಾರ್ವೆ ಸೋಮಶೇಖರ್ ಎಂಬುವರು ಪ್ರತಿ ಹಳ್ಳಿಯಲ್ಲಿ ದೇವಾಲಯದ ಜೀಣೋದ್ದಾರಕ್ಕೆ ಹಣ ನೀಡುವುದು, 40 ಕಡೆ ಕೊಳವೆ ಬಾವಿ ಕೊರೆಸಿರುವ ವಿಚಾರ ಜಿಲ್ಲಾಡಳಿತದ ಗಮನಕ್ಕೆ ತಂದಿದ್ದರೂ ಸಹ ಯಾಕಾಗಿ ಕಣ್ಮುಚ್ಚಿ ಕುಳಿತಿದೆ ಎಂದು ಪ್ರಶ್ನೆ ಮಾಡಿದರು.

ಅರ್ಧ ಡಜನ್ ಗನ್ ಮ್ಯಾನ್‍ಗಳನ್ನು ತನ್ನ ಜೊತೆಗೆ ಇಟ್ಟುಕೊಂಡು ತಿರುಗಾಡುವಂತ ಇವರು ಕ್ಷೇತ್ರದ ಜನತೆಗೆ ಯಾವ ರೀತಿಯ ರಕ್ಷಣೆಯನ್ನು ನೀಡಬಹುದು? ಸಕಲೇಶಪುರ-ಆಲೂರು ವಿಧಾನಸಭಾ ಕ್ಷೇತ್ರವು ಈ ಬಾರಿ ಸೂಕ್ಷ್ಮವಾಗಿರುವುದರಿಂದ ಮತದಾರರನ್ನು ಹೆದರಿಸುವಂತಹ ಬೆಳವಣಿಗೆಗಳು ನಡೆಯುವ ಸಾಧ್ಯತೆ ಹೆಚ್ಚಿದೆ. ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುತ್ತದೆ ಮತ್ತು ಮತದಾರರು ಭಯವಿಲ್ಲದೆ ಮತ ಹಾಕಲು ಕೂಡಲೇ ಕ್ಷೇತ್ರದಲ್ಲಿ ವಿಶೇಷ ಕಣ್ಗಾವಲು ಅಧಿಕಾರಿಯನ್ನು ನೇಮಿಸುವಂತೆ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಪಂ ಮಾಜಿ ಸದಸ್ಯ ಪುರುಷೋತ್ತಮ್, ಹಳ್ಳಿಯೂರು ಗ್ರಾಮಸ್ಥರಾದ ಗಂಗಬಸವಯ್ಯ, ಗ್ರಾಪಂ ಮಾಜಿ ಸದಸ್ಯ ದೊಡ್ಡಯ್ಯ, ಗ್ರಾಪಂ ಸದಸ್ಯ ವಿಜಯಕುಮಾರ್ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X