Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ವಿಫಲ ದೇಶ’ದಿಂದ ಭಾರತಕ್ಕೆ ಉಪದೇಶ...

‘ವಿಫಲ ದೇಶ’ದಿಂದ ಭಾರತಕ್ಕೆ ಉಪದೇಶ ಬೇಕಾಗಿಲ್ಲ

ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ತಿರುಗೇಟು ನೀಡಿದ ಭಾರತ

ವಾರ್ತಾಭಾರತಿವಾರ್ತಾಭಾರತಿ10 March 2018 10:00 PM IST
share
‘ವಿಫಲ ದೇಶ’ದಿಂದ ಭಾರತಕ್ಕೆ ಉಪದೇಶ ಬೇಕಾಗಿಲ್ಲ

ವಿಶ್ವಸಂಸ್ಥೆ, ಮಾ. 10: ಜಿನೇವದಲ್ಲಿ ನಡೆದ ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿಯ ಸಭೆಯ ಎರಡನೆ ದಿನವಾದ ಶುಕ್ರವಾರವೂ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಲು ಪ್ರಯತ್ನಿಸಿದ ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ.

 ಪಾಕಿಸ್ತಾನವು ‘ವಿಫಲ ದೇಶ’ವಾಗಿದ್ದು, ಅಲ್ಲಿ ಭಯೋತ್ಪಾದಕರು ವಿಜೃಂಭಿಸುತ್ತಿದ್ದಾರೆ ಹಾಗೂ ಭಯೋತ್ಪಾದಕ ಉಸಾಮ ಬಿನ್ ಲಾದನ್ ಆಶ್ರಯ ಪಡೆದಿದ್ದನು ಎಂದು ಭಾರತ ಹೇಳಿದೆ ಹಾಗೂ ಮುಂಬೈ, ಪಠಾಣ್‌ಕೋಟ್ ಮತ್ತು ಉರಿ ದಾಳಿಗಳಲ್ಲಿ ಶಾಮೀಲಾದವರನ್ನು ಶಿಕ್ಷಿಸುವಂತೆ ಆ ದೇಶವನ್ನು ಒತ್ತಾಯಿಸಿದೆ.

‘‘ಪಾಕಿಸ್ತಾನದಲ್ಲಿ ಭಯೋತ್ಪಾದಕರು ವಿಜೃಂಭಿಸುತ್ತಿದ್ದು, ಅಲ್ಲಿನ ಬೀದಿಗಳಲ್ಲಿ ಯಾವುದೇ ಹೆದರಿಕೆಯಿಲ್ಲದೆ ಓಡಾಡುತ್ತಿರುವಾಗ, ಭಾರತದಲ್ಲಿ ಮಾನವಹಕ್ಕು ರಕ್ಷಣೆ ಬಗ್ಗೆ ಅದು ಪಾಠ ಮಾಡುತ್ತಿರುವುದನ್ನು ನಾವು ಕೇಳುತ್ತಿದ್ದೇವೆ’’ ಎಂದು ಜಿನೇವದಲ್ಲಿರುವ ಭಾರತೀಯ ವಿಶ್ವಸಂಸ್ಥೆ ನಿಯೋಗದ ದ್ವಿತೀಯ ಕಾರ್ಯದರ್ಶಿ ಮಿನಿ ದೇವಿ ಕುಮಮ್ ಹೇಳಿದರು.

‘‘2008ರ ಮುಂಬೈ ಭಯೋತ್ಪಾದಕ ದಾಳಿ ಹಾಗೂ 2016ರ ಪಠಾಣ್‌ಕೋಟ್ ಮತ್ತು ಉರಿ ದಾಳಿಗಳಲ್ಲಿ ಶಾಮೀಲಾದ ಭಯೋತ್ಪಾದಕರನ್ನು ಶಿಕ್ಷಿಸಲು ಪಾಕಿಸ್ತಾನ ಸರಕಾರ ವಿಶ್ವಾಸಾರ್ಹ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ನೋಡಲು ನಾವು ಕಾಯುತ್ತಿದ್ದೇವೆ’’ ಎಂದರು.

‘‘ವಿಫಲ ದೇಶ ಎಂಬುದಾಗಿ ಬಣ್ಣಿಸಲ್ಪಟ್ಟಿರುವ ದೇಶವೊಂದರಿಂದ ಪ್ರಜಾಪ್ರಭುತ್ವ ಮತ್ತು ಮಾನವಹಕ್ಕುಗಳ ಬಗ್ಗೆ ಪಾಠ ಕೇಳಲು ಜಗತ್ತು ತಯಾರಿಲ್ಲ’’ ಎಂದು ಭಾರತೀಯ ಪ್ರತಿನಿಧಿ ಹೇಳಿದರು.

ಕಾಶ್ಮೀರದಲ್ಲಿ ಜನಮತಗಣನೆಗೆ ಒತ್ತಾಯಿಸಿದ ಪಾಕ್

ಇದಕ್ಕೂ ಮೊದಲು ಮಾತನಾಡಿದ ಜಿನೇವ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಉಪ ಖಾಯಂ ಪ್ರತಿನಿಧಿ ತಾಹಿರ್ ಅಂದ್ರಾಬಿ, ಕಾಶ್ಮೀರದಲ್ಲಿ ಜನಮತಗಣನೆ ನಡೆಯಬೇಕೆಂದು ಒತ್ತಾಯಿಸಿದರು.

 ‘‘ಕಾಶ್ಮೀರ ವಿವಾದದ ಕೇಂದ್ರದಲ್ಲಿ ಇರುವುದು ಸ್ವನಿರ್ಣಯದ ಹಕ್ಕು. ಇದನ್ನು ಜನಮತಗಣನೆ ಮೂಲಕ ನಿರ್ಧರಿಸಲು ಭಾರತದ ಪ್ರಥಮ ಪ್ರಧಾನಿ ಹಾಗೂ ಭಾರತದ ಸ್ಥಾಪಕರಲ್ಲಿ ಓರ್ವರಾಗಿರುವ ಜವಾಹರಲಾಲ್ ನೆಹರು ಒಪ್ಪಿಗೆ ನೀಡಿದ್ದರು ಹಾಗೂ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯೂ ಈ ಪ್ರಸ್ತಾಪಕ್ಕೆ ಅಂಗೀಕಾರ ನೀಡಿತ್ತು’’ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X