Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಜನಹಿತಕ್ಕಾಗಿ, ಅಭಿವೃದ್ಧಿ ಪರ...

ಬಿಜೆಪಿ ಜನಹಿತಕ್ಕಾಗಿ, ಅಭಿವೃದ್ಧಿ ಪರ ಕೆಲಸಕ್ಕಾಗಿ ದುಡಿಯುವ ಪಕ್ಷ: ಸಂಸದ ಜಿ.ಎಂ.ಸಿದ್ದೇಶ್ವರ್

ವಾರ್ತಾಭಾರತಿವಾರ್ತಾಭಾರತಿ10 March 2018 10:16 PM IST
share
ಬಿಜೆಪಿ ಜನಹಿತಕ್ಕಾಗಿ, ಅಭಿವೃದ್ಧಿ ಪರ ಕೆಲಸಕ್ಕಾಗಿ ದುಡಿಯುವ ಪಕ್ಷ: ಸಂಸದ ಜಿ.ಎಂ.ಸಿದ್ದೇಶ್ವರ್

ದಾವಣಗೆರೆ,ಮಾ.10: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಜಯಭೇರಿಸುವ ಮೂಲಕ ಕಾಂಗ್ರೆಸ್ ತಕ್ಕ ಉತ್ತರ ನೀಡಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಈಗಿನಿಂದಲೇ ಸನ್ನದರಾಗಬೇಕು ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ಕರೆ ನೀಡಿದರು. 

ಇಲ್ಲಿನ ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಶನಿವಾರ ಉತ್ತರ ಕ್ಷೇತ್ರದ ನವಶಕ್ತಿ ಸಮಾವೇಶ ಉದ್ಘಾಟಿಸಿ ಮಾತ ನಾಡಿದರು. ಮಾಜಿ ಸಚಿವ ರವೀಂದ್ರನಾಥ್ ಗೆಲುವಿನೊಂದಿಗೆ ಬಿಜೆಪಿ ಶುಭಾರಂಭ ಮಾಡಲಿದ್ದು, ಕಾರ್ಯಕರ್ತರು ಶ್ರಮದಿಂದ ಚುನಾವಣೆಗೆ ಸಜ್ಜಾದಾಗ ಮಾತ್ರ ಇಂತಹ ಸಾಧನೆ ಸಾಧ್ಯ. ಜನಹಿತಕ್ಕಾಗಿ, ಅಭಿವೃದ್ಧಿ ಪರ ಕೆಲಸಕ್ಕಾಗಿ ದುಡಿಯುವ ಪಕ್ಷ ನಮ್ಮದು ಎಂದರು.  

ದಾವಣಗೆರೆ ಅಭಿವೃದ್ಧಿಗೆ ಕಾಂಗ್ರೆಸ್ಸಿನವರು 2-3 ಸಾವಿರ ಕೋಟಿ ತಂದಿದ್ದೇವೆಂದು ಕೊಚ್ಚಿಕೊಳ್ಳುತ್ತಾರೆ. ಆದರೆ, ಯಡಿಯೂರಪ್ಪ ಸರ್ಕಾರದಲ್ಲಿ ರವೀಂದ್ರನಾಥ ಸಚಿವರಾಗಿರಿದ್ದಾಗ 923 ಕೋಟಿ ವೆಚ್ಚದಲ್ಲಿ ಭದ್ರಾ ನಾಲೆ ಆಧುನೀಕರಣ, ದಾವಣಗೆರೆ ವಿಶ್ವ ವಿದ್ಯಾನಿಲಯ ಸ್ಥಾಪನೆ, ಪಾಲಿಕೆಯಾಗಿದ್ದು, ಡಿಸಿ ಕಚೇರಿಗೆ ಸ್ವಂತ ಕಟ್ಟಡ, ಪಾಲಿಕೆಗೆ 200 ಕೋಟಿ ವಿಶೇಷಾನುದಾನ, ನೂರಾರು ಪಾರ್ಕ್ ಜಾಗ ಭದ್ರಪಡಿಸಿದ್ದು ನಮ್ಮ ಸರ್ಕಾರ ಎಂದು ಅವರು ವಿವರಿಸಿದರು. 

ಪರಿಶಿಷ್ಟ, ಹಿಂದುಳಿದವರ ಕಾಲನಿ ಅಭಿವೃದ್ದಿಗೆ ಹೊನ್ನಾಳಿ, ಹರಿಹರ ತುಂಗಭದ್ರಾ ನದಿಗೆ ಹೊಸ ಸೇತುವೆ. ಶೇ.0 ಬಡ್ಡಿ ದರಕ್ಕೆ ಸಾಲ, 2 ಸಲ ರೈತರ ಸಾಲ ಮನ್ನಾ, ವಿಧವಾ ವೇತನ, ಭಾಗ್ಯಲಕ್ಷ್ಮಿ ಬಾಂಡ್, ಬೈಸಿಕಲ್, ಮಡಿಲು ಕಿಟ್, ಸುವರ್ಣ ಭೂಮಿ ಚೇತನ ಹೀಗೆ ಸಾವಿರಾರು ಕೋಟಿ ವೆಚ್ಚದಲ್ಲಿ ನಾವೂ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದೇವೆ. ಆದರೆ, ರವೀಂದ್ರನಾಥ್ ಎಂದಿಗೂ ಈಗಿನವರಂತೆ ವರ್ತಿಸಲಿಲ್ಲ ಎಂದು ಹಾಲಿ ಸಚಿವ ಎಸ್ಸೆಸ್ ಮಲ್ಲಿಕಾರ್ಜುನ ಹೆಸರು ಪ್ರಸ್ತಾಪಿಸದೇ ವಾಗ್ದಾಳಿ ನಡೆಸಿದರು.  

ಪ್ರಧಾನಿ ನರೇಂದ್ರ ಮೋದಿ ಕಳೆದ 4 ವರ್ಷದಿಂದಲೂ ಪಾರದರ್ಶಕ ಆಡಳಿತ ನೀಡುತ್ತಾ, ದೇಶವನ್ನು ಸರ್ವಾಂಗೀಣವಾಗಿ ಅಭಿವೃದ್ದಿಪಡಿಸುತ್ತಿದ್ದಾರೆ. ರಜೆ ಇಲ್ಲದೇ ದಿನದ 16-18 ತಾಸು ದುಡಿದ ಪ್ರಧಾನಿ ನಮ್ಮ ದೇಶದ ಇತಿಹಾಸದಲ್ಲಿದ್ದರೆ ಅದು ಮೋದಿ ಮಾತ್ರ ಎಂದು ಅವರು  ಹೇಳಿದರು. 

ಸತತ 3 ಅವದಿಗೆ ಸಂಸದನಾಗಿ 6 ಪಥದ ರಾಷ್ಟ್ರೀಯ ಹೆದ್ದಾರಿಗೆ 3400 ಕೋಟಿ, ಚಿಕ್ಕಜಾಜೂರು-ಹುಬ್ಬಳ್ಳಿ ಮಧ್ಯೆ ದ್ವಿಪಥ ರೈಲ್ವೆ ಮಾರ್ಗಕ್ಕೆ 1700 ಕೋಟಿ, ಬುದ್ಧಿಮಾಂದ್ಯರಿಗಾಗಿ ಸಿಆರ್ ಸೆಂಟರ್, ಪಾಸ್ ಪೋರ್ಟ್ ಸೇವಾ ಕೇಂದ್ರ, 10 ಎಕರೆಯಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪಿಸಿದ್ದು, ದಾವಣಗೆರೆ-ಚನ್ನಗಿರಿ ಹೆದ್ದಾರಿ, ಚಿತ್ರದುರ್ಗ-ಶಿವಮೊಗ್ಗ ಹೆದ್ದಾರಿಗೆ 327 ಕೋಟಿ, ಹೊನ್ನಾಳಿ ತಾ. ತುಂಗಾ ಮೇಲ್ದಂಡೆಗೆ 343 ಕೋಟಿ ಮಂಜೂರು, ಸ್ಮಾರ್ಟ್ ಸಿಟಿ, ಅಮೃತ ನಗರ ಹೀಗೆ ಸಾಕಷ್ಟು ಕೆಲಸ ತಮ್ಮ ಅವದಿಯಲ್ಲಾಗಿದೆ ಎಂದು ಅವರು ಹೇಳಿದರು. 

ಮಾಜಿ ಸಚಿವ ಎಸ್.ಎ.ರವೀಂದ್ರನಾಥ, ವಿಪ ಮಾಜಿ ಮುಖ್ಯ ಸಚೇತಕ ಡಾ.ಎ.ಎಚ್.ಶಿವಯೋಗಿಸ್ವಾಮಿ, ಜಿಲ್ಲಾ ಉಸ್ತುವಾರಿ ದತ್ತಾತ್ರಿ, ರಾಜ್ಯ ಕಾರ್ಯ
ದರ್ಶಿ ರವಿಕುಮಾರ, ಮಾಜಿ ಶಾಸಕ ಎಂ.ಬಸವರಾಜ ನಾಯ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ, ಮಹಿಳಾ ಮೋರ್ಚಾ ಅಧ್ಯಕ್ಷೆ ಎಚ್.ಸಿ.ಜ
ಯಮ್ಮ, ಜಿಪಂ ಅಧ್ಯಕ್ಷೆ ಮಂಜುಳಾ ರಾಜು, ಉಪಾಧ್ಯಕ್ಷೆ ಗೀತಾ ಗಂಗಾನಾಯ್ಕ, ತಾಪಂ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ, ಧನಂಜಯ ಕಡ್ಲೆಬಾಳ್, ಎಚ್.ಕೆ.ಬಸವರಾಜ, ಜಿ.ಎಂ.ಸುರೇಶ, ಅಣಬೇರು ಜೀವನಮೂರ್ತಿ, ಲೋಕಿಕೆರೆ ನಾಗರಾಜ, ಗುಂಡೇರಿ ಸುರೇಶ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X