Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು: ಬೆಂಕಿಯ ಬಲೆ ಪತ್ರಿಕೆಯ 14ನೇ...

ತುಮಕೂರು: ಬೆಂಕಿಯ ಬಲೆ ಪತ್ರಿಕೆಯ 14ನೇ ವಾರ್ಷಿಕೋತ್ಸವ ವಿಶೇಷಾಂಕ ಬಿಡುಗಡೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ10 March 2018 10:29 PM IST
share
ತುಮಕೂರು: ಬೆಂಕಿಯ ಬಲೆ ಪತ್ರಿಕೆಯ 14ನೇ ವಾರ್ಷಿಕೋತ್ಸವ ವಿಶೇಷಾಂಕ ಬಿಡುಗಡೆ ಕಾರ್ಯಕ್ರಮ

ತುಮಕೂರು,ಮಾ.10: ಪ್ರಸ್ತುತ ದಿನಮಾನಗಳಲ್ಲಿ ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಎನ್ನುವುದು ನಿರೀಕ್ಷೆಗೂ ಮೀರಿ ಬೆಳೆಯುತ್ತಿದ್ದು,ಅದರಲ್ಲಿಯೂ ಮಾಧ್ಯಮ ಕ್ಷೇತ್ರದಲ್ಲಿ ತುಸು ಹೆಚ್ಚಾಗಿಯೇ ಇದೆ. ಸ್ಪರ್ಧೆಯಲ್ಲಿ ಉಳಿಯಬೇಕಾದರೆ ಗಟ್ಟಿತನ ಮುಖ್ಯ ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನ್ ರಾಜ್ ತಿಳಿಸಿದ್ದಾರೆ.

ನಗರದ ಕೆ.ಇ.ಬಿ.ಇಂಜಿನಿಯರ್ಸ್ ಅಸೋಸಿಯೇಷನ್ ಹಾಲ್‍ನಲ್ಲಿ ನಡೆದ ಬೆಂಕಿಯ ಬಲೆ ಪತ್ರಿಕೆಯ 14ನೇ ವಾರ್ಷಿಕೋತ್ಸವ ವಿಶೇಷಾಂಕ ಬಿಡುಗಡೆ ಮಾಡಿ ಮಾತನಾಡುತಿದ್ದ ಅವರು, ಇಂದು ಪ್ರತಿಯೊಬ್ಬ ಎಲ್ಲಾ ಕ್ಷೇತ್ರಗಳನ್ನು ವಿಮರ್ಶಿಸುವಂತಹ ಹಾಗೂ ಪ್ರಶ್ನೆ ಮಾಡುವಂತಹ ಮನೋಭಾವವನ್ನು ಬೆಳಸಿಕೊಳ್ಳಬೇಕು, ಇಂದು ಸುದ್ದಿ ಮಾಧ್ಯಮಗಳು ಕೂಡ ವಿಮರ್ಶೆಗೆ ಒಳಪಡುತ್ತಿವೆ ಎಂದರು.

ನಾವುಗಳು ಮಾನವ ಸಂಪನ್ಮೂಲವನ್ನು ಸಮರ್ಪಕವಾಗಿ ಬಳಸಿಕೊಂಡಲ್ಲಿ ದೇಶದಲ್ಲಿ ತಲೆದೂರಿರುವ ಅನೇಕ ಜ್ವಲಂತ ಸಮಸ್ಯೆಗಳಿಗೆ ಇತಿಶ್ರೀ ಹಾಡಬಹುದು. ಹೀಗಾಗಿ ಮಾನವ ಸಂಪನ್ಮೂಲ ಬಳಕೆಯನ್ನು ಯಾವ ರೀತಿ ಉಪಯೋಗಿಸಿ ಕೊಳ್ಳಬೇಕೆಂಬುದನ್ನು ಪ್ರತಿಯೊಬ್ಬರು ತಿಳಿಯಬೇಕಿದೆ. ಸ್ವಾತಂತ್ರ್ಯ ಪೂರ್ವದಲ್ಲಿಯೇ ಪತ್ರಿಕಾ ರಂಗ ಹುಟ್ಟಿರುವುದನ್ನು ನೋಡಬಹುದು. ಆದರೆ ಅಂದು ಸಮಾಜದ ಅಂಕುಡೊಂಕುಗಳನ್ನು ತಿದ್ದಲು ಹುಟ್ಟಿದ ಪತ್ರಿಕಾರಂಗ ಇಂದು ವ್ಯಾಪಾರೀಕರಣವಾಗಿ ಬೆಳೆದಿರುವುದು ದುರಂತ ಎಂದು ಜಿಲ್ಲಾಧಿಕಾರಿಗಳು ನುಡಿದರು.

ಹಿರೇಮಠದ ವ್ಮಠಾಧ್ಯಕ್ಷರಾದ ಡಾ.ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಜಿ ಮಾತನಾಡಿ, ಬೆಂಕಿಯ ಬಲೆ ಪತ್ರಿಕೆಯು ಸಾಮಾಜಿಕ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಕಳೆದ 14 ವರ್ಷಗಳಿಂದಲೂ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬರುತ್ತಿದ್ದು, ಇದೀಗ ಮುಂದು ಎನ್ನುವ ರೀತಿಯಲ್ಲಿ ತನ್ನ ವಾರ್ಷಿಕೋತ್ಸವದ ಸವಿ ನೆನಪಿಗಾಗಿ ರಾಜ್ಯಮಟ್ಟದ ಯುವ ಕವಿ ಕಾವ್ಯ ಮೇಳವನ್ನು ಹಾಗೂ ಅನಾಥ ಮತ್ತು ಬಡ ಮಕ್ಕಳಿಗೆ ಉಚಿತ ವಸ್ತ್ರ ವಿತರಣೆ ಸಮಾರಂಭವನ್ನು ಹಮ್ಮಿಕೊಂಡು ಸಮಾಜಮುಖಿಯಾಗಿ ತನ್ನನ್ನು ತಾನು ತೆರೆದುಕೊಳ್ಳುತ್ತಿದೆ. ಪಕ್ಷಾತೀತವಾಗಿ ನಿರಂತರ ಸೇವೆಸಲ್ಲಿಸುತ್ತಾ, ಸಮಾಜದ ಅಂಕುಡೊಂಕುಗಳ ಬಗ್ಗೆ ಬೆಳಕು ಚೆಲ್ಲುತ್ತಾ ಸಾಮಾಜಿಕ ಪಿಡುಗಗಳು ಹಾಗೂ ಪಾರದರ್ಶಕವಾಗಿ ಕಾರ್ಯನಿರ್ವಹಿಸುವಲ್ಲಿ ಯಶಸ್ವಿಯಾಗಿದೆ ಎಂದರು.

ವಿಮರ್ಶಕ ಡಾ.ರವಿಕುಮಾರ್ ನೀಹ ಮಾತನಾಡಿ, ಕಾವ್ಯವೆಂಬುದು ಕೇವಲ ಪ್ರಕೃತಿಯ ಸೌಂದರ್ಯದ ವರ್ಣಣೆ ಅಲ್ಲ ಅಥವಾ ಕ್ರೌರ್ಯದ ವರ್ಣನೆಯೂ ಅಲ್ಲ. ಮಾನವೀಯತೆ, ಮನುಷ್ಯತ್ವ, ನಂಬಿಕೆಗಳ ಸಂಬಂಧಗಳ ಪ್ರಸ್ತುತತೆಯ ವರ್ಣನೆ ಕಾವ್ಯ ರೂಪವಾಗಿ ಹೊರಹೊಮ್ಮಿದಾಗ ಮಾತ್ರ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯ. ಆದರೆ ಇಂದು ಎಡ ಹಾಗೂ ಬಲ ಎನ್ನುವ ತಾರತಮ್ಯದಿಂದಾಗಿ ಸಮಾಜದಲ್ಲಿ ಮಾನವ ಸಂಬಂಧಗಳ ಸ್ವಾಸ್ಥ್ಯ ಹಾಳಾಗುತ್ತಿದ್ದು, ಸಾಹಿತಿಯಾದವನು ಜಾತಿ ಮೀರಿ ತನ್ನ ಬರವಣಿಗೆಯ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಬೇಕು ಎಂದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿದ್ದ ಬೆಟ್ಟದಹಳ್ಳಿ ಗವಿಮಠದ ಶ್ರೀಚಂದ್ರಶೇಖರ್ ಮಹಾಸ್ವಾಮೀಜಿ ಮಾತನಾಡಿ, ಸುದ್ದಿ ಮಾಧ್ಯಮಗಳು ಮತ್ತು ಪತ್ರಿಕೆಗಳು ಇಲ್ಲದೆ ಹೋಗಿದ್ದರೆ ಸಮಾಜ ದಾರಿತಪ್ಪಿ ಹೋಗುತ್ತಿತ್ತು. ಆದರೆ ಅದಕ್ಕೆಲ್ಲ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಾಧ್ಯಮ ರಂಗ ಸದಾ ಜಾಗೃತವಾಗಿ ಕೆಲಸ ಮಾಡುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಸಿದ್ದರಾಜು, ಕೆಐಎಡಿಬಿ ಕಾರ್ಯದರ್ಶಿ ಮುದ್ದುಕುಮಾರ್, ಸಂಯುಕ್ತ ಕರ್ನಾಟಕದ ಉಪಸಂಪಾದಕ ಇಂದ್ರಕುಮಾರ್, ಕಾರ್ಯನಿರತ ಪತ್ರಕರ್ತರ ಸಂಘದ ಪ್ರದಾನ ಕಾರ್ಯದರ್ಶಿ ಪಿ.ಡಿ.ಈರಣ್ಣ, ನಿವೃತ್ತ ಪ್ರಾಂಶುಪಾಲರು ಹಾಗೂ ಸಾಹಿತಿ ನಾಗಪ್ಪ, ಪತ್ರಿಕೆಯ ಸಂಪಾದಕರಾದ ಎ.ಎನ್.ಧನಂಜಯ, ಸಿರಿವರ ಶಿವರಾಮಯ್ಯ ಮತ್ತಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X