Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐರ್ಲೆಂಡ್ ವಿರುದ್ಧ ಗೆದ್ದ ಭಾರತಕ್ಕೆ...

ಐರ್ಲೆಂಡ್ ವಿರುದ್ಧ ಗೆದ್ದ ಭಾರತಕ್ಕೆ ಐದನೇ ಸ್ಥಾನ

ಸುಲ್ತಾನ್ ಅಝ್ಲಾನ್ ಶಾ ಕಪ್‌

ವಾರ್ತಾಭಾರತಿವಾರ್ತಾಭಾರತಿ10 March 2018 11:23 PM IST
share
ಐರ್ಲೆಂಡ್ ವಿರುದ್ಧ ಗೆದ್ದ ಭಾರತಕ್ಕೆ ಐದನೇ ಸ್ಥಾನ

ಇಪೋ(ಮಲೇಷ್ಯಾ), ಮಾ.10: ಸುಲ್ತಾನ್ ಅಝ್ಲಾನ್ ಶಾ ಕಪ್‌ನಲ್ಲಿ ಐದನೇ ಹಾಗೂ ಆರನೇ ಸ್ಥಾನಕ್ಕಾಗಿ ಶನಿವಾರ ನಡೆದ ಪ್ಲೇ-ಆಫ್ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಮಣಿಸಿದ ಭಾರತ ಕಳೆದ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿದೆ. ಶುಕ್ರವಾರ ನಡೆದ ತನ್ನ ಅಂತಿಮ ಲೀಗ್ ಪಂದ್ಯದಲ್ಲಿ ಭಾರತ ತಂಡ ಐರ್ಲೆಂಡ್ ವಿರುದ್ಧ 2-3 ಅಂತರದಿಂದ ಆಘಾತಕಾರಿ ಸೋಲುನುಭವಿಸಿತ್ತು. ಈ ಸೋಲಿನಿಂದಾಗಿ ಟೂರ್ನಿಯಲ್ಲಿ ಪದಕದ ಸ್ಪರ್ಧೆಯಿಂದ ಹೊರಗುಳಿದಿತ್ತು.

ಇಂದು ಹಿರಿಯ ಮಿಡ್ ಫೀಲ್ಡರ್ ಸರ್ದಾರ್ ಸಿಂಗ್ ನೇತೃತ್ವದಲ್ಲಿ ಆಡಿದ ಭಾರತ ತಂಡ ಐರ್ಲೆಂಡ್ ತಂಡವನ್ನು 4-1 ಅಂತರದಿಂದ ಸೋಲಿಸಿ ಐದನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಅನಾರೋಗ್ಯದ ಕಾರಣ ಐರ್ಲೆಂಡ್‌ನ ಇಬ್ಬರು ಆಟಗಾರರು ಇಂದಿನ ಪಂದ್ಯದಲ್ಲಿ ಆಡಲಿಲ್ಲ.

ಭಾರತದ ಪರ ವರುಣ್ ಕುಮಾರ್(5ನೇ ಹಾಗೂ 32ನೇ ನಿಮಿಷ)ಅವಳಿ ಗೋಲು ಬಾರಿಸಿದರು. ಶೀಲಾನಂದ ಲಾಕ್ರಾ(28ನೇ ನಿಮಿಷ) ಹಾಗೂ ಗುರ್ಜಂತ್ ಸಿಂಗ್(37ನೇ ನಿಮಿಷ) ತಲಾ ಒಂದು ಗೋಲು ಬಾರಿಸಿದರು. ಕೊನೆಯ ಕ್ಷಣದಲ್ಲಿ ಐರ್ಲೆಂಡ್‌ನ ಜುಲಿಯನ್ ಡಾಲೆ(48ನೇ ನಿಮಿಷ)ಏಕೈಕ ಗೋಲು ಬಾರಿಸಿದರು.

ಭಾರತ ಐದನೇ ನಿಮಿಷದಲ್ಲಿ ಲಭಿಸಿದ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಗೋಲಾಗಿ ಪರಿವರ್ತಿಸಿತು. ವರುಣ್ ಕುಮಾರ್ ಟೂರ್ನಮೆಂಟ್‌ನಲ್ಲಿ ಮೊದಲ ಬಾರಿ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಗೋಲಾಗಿ ಪರಿವರ್ತಿಸಿದರು. ಶೀಲಾನಂದ ಅವರು 28ನೇ ನಿಮಿಷದಲ್ಲಿ ನೀಲಂ ಕ್ಸೆಸ್ ನೀಡಿದ ಚೆಂಡನ್ನು ಗೋಲು ಪೆಟ್ಟಿಗೆಗೆ ಸೇರಿಸಿದರು. ಮೊದಲಾರ್ಧದ ಅಂತ್ಯಕ್ಕೆ ಭಾರತ 2-0 ಮುನ್ನಡೆ ಸಾಧಿಸಿತು.

 ವರುಣ್ 32ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಅವಕಾಶದಲ್ಲಿ ಮತ್ತೊಂದು ಗೋಲು ಬಾರಿಸಿ ಭಾರತಕ್ಕೆ 3-0 ಮುನ್ನಡೆ ಒದಗಿಸಿಕೊಟ್ಟರು. 5 ನಿಮಿಷಗಳ ಬಳಿಕ ಭಾರತದ ಮುನ್ನಡೆ 4-0ಗೆ ಏರಿಕೆಯಾಯಿತು. ಗುರ್ಜಂತ್ ಸಿಂಗ್ 37ನೇ ನಿಮಿಷದಲ್ಲಿ ಗೋಲು ಬಾರಿಸಿದರು. ಐರ್ಲೆಂಡ್ ಕೊನೆಯ ಕ್ವಾರ್ಟರ್‌ನಲ್ಲಿ ಗೋಲು ಬಾರಿಸಿ ಸೋಲಿನ ಅಂತರವನ್ನು ಸ್ವಲ್ಪ ಕಡಿಮೆ ಮಾಡಿಕೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X