Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಧರ್ಮ ಸಂಸತ್ ಪ್ರಜಾಪ್ರಭುತ್ವದ ವಿರೋಧಿ:...

ಧರ್ಮ ಸಂಸತ್ ಪ್ರಜಾಪ್ರಭುತ್ವದ ವಿರೋಧಿ: ಪ್ರೊ.ಜಿ.ಕೆ.ಗೋವಿಂದರಾವ್

ವಾರ್ತಾಭಾರತಿವಾರ್ತಾಭಾರತಿ11 March 2018 6:20 PM IST
share
ಧರ್ಮ ಸಂಸತ್ ಪ್ರಜಾಪ್ರಭುತ್ವದ ವಿರೋಧಿ: ಪ್ರೊ.ಜಿ.ಕೆ.ಗೋವಿಂದರಾವ್

ಬೆಂಗಳೂರು, ಮಾ.10: ಪ್ರಜಾಪ್ರಭುತ್ವವನ್ನು ನಾವೆಲ್ಲರೂ ನಿಜವಾದ ಸಂಸತ್ ಎಂದು ನಂಬಿದ್ದೇವೆ. ಆದರೆ, ಬಿಜೆಪಿಯ ಅಂಗ ಸಂಸ್ಥೆ ಧರ್ಮ ಸಂಸತ್ ಅಂತರ್ಜಾತಿ ವಿವಾಹ, ಮೀಸಲಾತಿ ವಿರೋಧಿಸುವ ಮೂಲಕ ಪ್ರಜಾಪ್ರಭುತ್ವದ ವಿರೋಧಿಯಾಗಿದೆ ಎಂದು ವಿಚಾರವಾದಿ ಪ್ರೊ.ಜಿ.ಕೆ.ಗೋವಿಂದ ರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಪುರಭವನದಲ್ಲಿ ಕೆ.ಎಸ್.ಪುಣ್ಣಯ್ಯ ವೇದಿಕೆಯಲ್ಲಿ ದಸಂಸ ‘ಎತ್ತ ಸಾಗುತ್ತಿದೆ ಭಾರತ? ಅಂಬೇಡ್ಕರ್ ಚಿಂತನೆಯ ಬೆಳಕಲ್ಲಿ ವಿಶ್ಲೇಷಣೆ’ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಜಾ ಸಂಸತ್ತನ್ನು ವಿರೋಧಿಸಿ ಧರ್ಮ ಸಂಸತ್ತನ್ನು ಬೆಂಬಲಿಸುವ ಉಡುಪಿಯ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಶ್ರೀ ಸೇರಿದಂತೆ ಇತರೆಲ್ಲ ಸ್ವಾರ್ಥ ಸ್ವಾಮಿಗಳನ್ನು ನಂಬಬೇಡಿ ಹಾಗೂ ಅವರ ಕಾಲುಗಳಿಗೆ ಬಿದ್ದು ನಮಸ್ಕರಿಸಬೇಡಿ ಎಂದು ಸಲಹೆ ನೀಡಿದರು.

ಪೇಜಾವರ ಶ್ರೀಗಳು ಭಗವದ್ಗೀತೆಯ ವಿಚಾರಗಳನ್ನು ದಲಿತ ಕಾಲನಿಗಳಿಗೆ ಬಿತ್ತುತ್ತೇನೆ ಎಂದು ಹೇಳುತ್ತಾರೆ. ಅದರ ಬದಲಾಗಿ, ದಲಿತ ಸಾಹಿತ್ಯದ ಪುಸ್ತಕಗಳನ್ನೇ ಮಠದಲ್ಲಿಟ್ಟುಕೊಂಡು ಪಾಠ-ಪ್ರವಚನ ನೀಡಿದರೆ ಸಮ ಸಮಾಜದ ನಿರ್ಮಾಣಕ್ಕೆ ಅನುಕೂಲವಾಗುತ್ತದೆ ಎಂದು ಗೋವಿಂದರಾವ್ ಸೂಚಿಸಿದರು.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮಠಗಳಿಗೆ ಕೋಟ್ಯಂತರ ರೂ. ಜನತೆಯ ತೆರಿಗೆ ಹಣವನ್ನು ನೀಡಿದರು. ಆದರೆ, ಈ ಹಣ ಅವರ ಅಪ್ಪನ ಮನೆಯದ್ದೇ ಎಂದು ಪ್ರಶ್ನಿಸಿದ ಗೋವಿಂದರಾವ್, ಬಿಎಸ್‌ವೈ ಜನತೆಯ ತೆರಿಗೆ ಹಣವನ್ನೇ ಮಠಗಳಿಗೆ ನೀಡಿ ನಮಗೆ ಅನ್ಯಾಯ ಎಸಗಿದ್ದಾರೆಂದು ಕಿಡಿಕಾರಿದರು.

ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿ ಪ್ರೊ.ಚಂದ್ರಶೇಖರ್ ಪಾಟೀಲ್ ಸಮಾನತೆ, ಸಾಮಾಜಿಕ ನ್ಯಾಯಕ್ಕೆ ಮತ ನೀಡಿ ಎಂದು ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಸಮಾನತೆಯನ್ನು ವಿರೋಧಿಸುವವರು ಈ ಹೇಳಿಕೆಗಳನ್ನೂ ವಿರೋಧಿಸಿದರು ಎಂದು ಅವರು ಹೇಳಿದರು.

ಮಠಗಳಿಗೆ ಹೋಗಿ ಸಮಾನತೆಯ ಬಗ್ಗೆ ಮಾತನಾಡಿದರೆ ಸ್ವಾಮೀಜಿಗಳು ಈ ಸಮಾನತೆಯ ಮಾತುಗಳನ್ನು ಸಹಿಸುವುದಿಲ್ಲ. ಅಲ್ಲದೆ, ಬಸವಣ್ಣ, ರಾಮಕೃಷ್ಣ ಪರಮಹಂಸರಿಗೆ ಯಾರೂ ಕಾವಿಯನ್ನು ಹಾಕಿಕೊಳ್ಳಿಯೆಂದು ಹೇಳಲಿಲ್ಲ. ಆದರೆ, ಅವರೇ ಈ ಸಮಾಜವನ್ನು ತಿದ್ದುವುದಕ್ಕಾಗಿ ತಮ್ಮದೆ ಆದ ಶೈಲಿಯ ಕಾವಿಯನ್ನು ಹಾಕಿಕೊಂಡು ಸಮಾಜವನ್ನು ತಿದ್ದಿದರು. ಆದರೆ, ಈಗಿನ ಸ್ವಾಮಿಗಳಿಗೆ ಕಾವಿಯನ್ನು ಹಾಕಿಕೊಳ್ಳಲು ಹಾಗೂ ಬಿಚ್ಚಿಡಲು ಹೈಕಮಾಂಡ್‌ನ ಆದೇಶ ಬೇಕಾಗುತ್ತದೆ ಎಂದು ನುಡಿದರು.

ನಮ್ಮ ಹುಟ್ಟು ಜಾತಿ-ಭೇದಗಳನ್ನು ಮಾಡಲು ಅಲ್ಲ. ಬದಲಾಗಿ,ಮನುಷ್ಯನಾಗಿ ಬದುಕಲು, ಸೌಹಾರ್ದವಾಗಿ ಇರಲು. ಆದರೆ, ಇತ್ತೀಚೆಗೆ ಒಂದು ಪಕ್ಷದ ನಾಯಕರು ವಿವಾದಾತ್ಮಕ ಹೇಳಿಕೆ ನೀಡಿ, ಸಮಾಜದ ಸ್ವಾಸ್ಥ ಹಾಳು ಮಾಡುತ್ತಿದ್ದಾರೆಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಲೇಖಕಿ ಡಾ.ಅನಸೂಯ ಕಾಂಬಳೆ, ದಸಂಸ ಹಿರಿಯ ಮುಖಂಡ ಎನ್.ಮುನಿಸ್ವಾಮಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X