Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿವಿಗಳು ಅವಕಾಶಗಳು ವಂಚಿಸುವ ಸಂಶೋಧನಾ...

ವಿವಿಗಳು ಅವಕಾಶಗಳು ವಂಚಿಸುವ ಸಂಶೋಧನಾ ಕೇಂದ್ರಗಳು: ಡಾ.ರಾಜಪ್ಪ ದಳವಾಯಿ

‘ಬಂಡಾಯ ಸಾಹಿತ್ಯ ನಲವತ್ತರ ಹೆಜ್ಜೆ’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ11 March 2018 7:25 PM IST
share

ಬೆಂಗಳೂರು, ಮಾ.11: ದೇಶದಲ್ಲಿರುವ ವಿಶ್ವವಿದ್ಯಾಲಯಗಳು ಅವಕಾಶಗಳನ್ನು ವಂಚಿಸುವ ಸಂಶೋಧನಾ ಕೇಂದ್ರಗಳಾಗುತ್ತಿವೆ ಎಂದು ಲೇಖಕ ಡಾ.ರಾಜಪ್ಪ ದಳವಾಯಿ ತಿಳಿಸಿದ್ದಾರೆ.

ರವಿವಾರ ನಗರದ ಸೆನೆಟ್ ಹಾಲ್‌ನಲ್ಲಿ ಆಯೋಜಿಸಿದ್ ‘ಬಂಡಾಯ ಸಾಹಿತ್ಯ ನಲವತ್ತರ ಹೆಜ್ಜೆ’ ಕಾರ್ಯಕ್ರಮದಲ್ಲಿ ‘ಜನತಂತ್ರ: ದಮನಿತರು’ ವಿಷಯ ಕುರಿತು ಮಾತನಾಡಿದ ಅವರು, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ದಮನಿತ ಸಮುದಾಯಗಳನ್ನು ಗುರುತಿಸುವಲ್ಲಿ ಎಲ್ಲರೂ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೂ ಎಲ್ಲವೂ ಉಳ್ಳವರ ಪಾಲಾಗುತ್ತಿವೆ. ಶಿಕ್ಷಣ ನೀಡುವ ಶಿಕ್ಷಣ ಸಂಸ್ಥೆಗಳಲ್ಲಿ ಕೇವಲ 6-10 ಉನ್ನತ ಜಾತಿಗಳ ವಿದ್ಯಾರ್ಥಿಗಳೇ ತಮ್ಮ ಅಸ್ಥಿತ್ವವನ್ನು ಕಂಡುಕೊಂಡಿದ್ದಾರೆ. ಇನ್ನುಳಿದಂತೆ ಅತೀ ಹಿಂದುಳಿದ ಅಲೆಮಾರಿ, ಬುಡಕಟ್ಟು ಸಮುದಾಯಗಳು ಇಂದಿಗೂ ಅಭಿವೃದ್ಧಿಯಾಗಲು ಸಾಧ್ಯವಾಗಿಲ್ಲ. ಕನಿಷ್ಟ ಪಕ್ಷ ಅವರ ಪರವಾಗಿ ಧ್ವನಿಗೂಡಿಸುವ ಒಬ್ಬ ಜನ ನಾಯಕನಿಲ್ಲ. ಅಂದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದನ್ನು ಪ್ರಗತಿ ಎಂದು ಕರೆಯಬೇಕು ಎಂದು ಪ್ರಶ್ನಿಸಿದರು.

ನಮ್ಮನ್ನಾಳುತ್ತಿರುವವರಿಗೆ ತಳ ಸಮುದಾಯಗಳ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಇಂತಹ ಸಂದರ್ಭದಲ್ಲಿ ಹಲವಾರು ಸೃಜನಶೀಲ, ಪ್ರಗತಿಪರ ಸಾಹಿತಿಗಳು ಎಂದೆನಿಸಿಕೊಂಡವರು ಯಾರ ಪರವಾಗಿ, ಯಾವ ರಾಜಕಾರಣಿಯನ್ನು ಓಲೈಸಬೇಕು ಎಂದು ನೋಡುತ್ತಾರೆ. ಪ್ರಶ್ನಿಸದೇ ಇರುವ ಯಾರೊಬ್ಬರೂ ಪ್ರಗತಿಪರ ಸಾಹಿತಿಯಾಗಲು ಅರ್ಹರಾಗುವುದಿಲ್ಲ. ಅದೇ ರೀತಿ ದಮನಿತರ ಪರವಾಗಿ ಯೋಚಿಸಬೇಕು ಎಂದು ಅವರು ಹೇಳಿದರು.

ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸರಕಾರಗಳು ಜಾರಿ ಮಾಡುತ್ತಿರುವ ಬಹುತೇಕ ಯೋಜನೆಗಳು ತಳ ಸಮುದಾಯಗಳಿಗೆ ಮುಟ್ಟುತ್ತಿಲ್ಲ. ಇಂತಹ ಸಂದರ್ಭದಲ್ಲಿ ಪ್ರಗತಿಪರ ಹಾಗೂ ಸೃಜನಶೀಲ ಸಾಹಿತಿಗಳು ನಮ್ಮನ್ನು ಆಳುತ್ತಿರುವ ಜನರನ್ನು ಜಾಗೃತಿ ಮೂಡಿಸಬೇಕು ಹಾಗೂ ದಮನಿತರ ಪರವಾದ ಧ್ವನಿ ಎತ್ತಬೇಕು ಎಂದು ಅವರು ಕರೆ ನೀಡಿದರು.

ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್ ಮಾತನಾಡಿ, ಭಾರತದಲ್ಲಿ ಸಂಘಪರಿವಾರ ಹೊರತು ಪಡಿಸಿದರೆ ಉಳಿದ ಎಲ್ಲರೂ ದಮನಿತರಾಗಿದ್ದಾರೆ. ಹೀಗಾಗಿ, ಜಾಗತೀಕರಣ ಹೆಸರಿನಲ್ಲಿ ದಮನಿತರನ್ನು ದಮನ ಮಾಡಲು ಹುನ್ನಾರ ಮಾಡಲಾಗುತ್ತಿದೆ. ಅದಕ್ಕಾಗಿ, ದೇಶವನ್ನು ಜಾಗತೀಕರಣ, ಉದಾರೀಕರಣ ಹಾಗೂ ಖಾಸಗೀಕರಣ ಮೂಲಕ ದೇಶವನ್ನು ನಾಶ ಮಾಡಲು ಮುಂದಾಗಿದ್ದಾರೆ ಎಂದು ಟೀಕಿಸಿದರು.

ಪ್ರಜಾತಂತ್ರ ವ್ಯವಸ್ಥೆ ಕಾರ್ಪೋರೇಟ್ ವ್ಯವಸ್ಥೆಗೆ ಬಿಕರಿಯಾಗಿದ್ದು, ದೇಶಿಯತೆಯನ್ನು ಕಳೆದುಕೊಳ್ಳುತ್ತಿದೆ. ಸ್ಥಳೀಯವಾಗಿ ಉತ್ಪಾದನೆ ಮಾಡುವ ಕೈಗಾರಿಕೆಗಳಿಲ್ಲದಾಗಿದೆ. ದೇಶದಲ್ಲಿ ಶೇ.51 ರಷ್ಟು ರೈತರು ಕೃಷಿಯನ್ನು ಬಿಟ್ಟಿದ್ದಾರೆ, ಶೇ.23-25 ರಷ್ಟು ಜನರು ಕೈಗಾರೀಕರಣಕ್ಕೆ ಒಳಗಾಗಿದ್ದಾರೆ. ಇದೀಗ ಕೃಷಿ ಮಾಡುವವರ ಸಂಖ್ಯೆ 14 ಕ್ಕಿಳಿದಿದೆ. ಹೀಗಿದ್ದರೂ, ನಮ್ಮನ್ನಾಳುವ ಜನ ನಾಯಕರು ನಮ್ಮದು ಕೃಷಿ ಪ್ರಧಾನ ದೇಶ, ರೈತರು ನಮ್ಮ ಬೆನ್ನೆಲಬು ಎಂದು ಭಾಷಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಕಾರ್ಯಕ್ರಮದಲ್ಲಿ ಕವಿ ಬೊಳುವಾರು ಮುಹಮ್ಮದ್, ಸುಬ್ಬು ಹೊಲೆಯಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X