Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ...

ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ ಸುರಕ್ಷಿತವಾಗಿಲ್ಲ: ದಿನೇಶ್ ಅಮೀನ್ ಮಟ್ಟು

ವಾರ್ತಾಭಾರತಿವಾರ್ತಾಭಾರತಿ11 March 2018 8:07 PM IST
share
ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ ಸುರಕ್ಷಿತವಾಗಿಲ್ಲ: ದಿನೇಶ್ ಅಮೀನ್ ಮಟ್ಟು

ಬೆಂಗಳೂರು, ಮಾ.11: ರೈತರು, ದಲಿತರು, ಅಲ್ಪಸಂಖ್ಯಾತರಿಗೆ ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ ಸುರಕ್ಷಿತವಾಗಿಲ್ಲ ಎಂದು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಆತಂಕ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಪುರಭವನದ ಸಭಾಂಗಣದಲ್ಲಿ ದಲಿತ ಸಂಘಟನೆಗಳ ಆಶ್ರಯದಲ್ಲಿ ಆಯೋಜಿಸಿದ್ದ, ಎತ್ತ ಸಾಗುತ್ತಿದೆ ಭಾರತ? ಅಂಬೇಡ್ಕರ್ ಚಿಂತನೆಯ ಬೆಳಕಿನಲ್ಲಿ ವಿಶ್ಲೇಷಣೆ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ‘ಸಂವಿಧಾನದ ಆಶಯಗಳು ಮತ್ತು ಮಾಧ್ಯಮಗಳ ಹೊಣೆಗಾರಿಕೆ’ ವಿಷಯದ ಕುರಿತು ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ, ಉದ್ಯಮಿಗಳಾದ ಅಂಬಾನಿ, ಅದಾನಿ ಸೇರಿದಂತೆ ಕೆಲ ಗಣ್ಯರ ಪಾಲಿಗೆ ಅಭಿವ್ಯಕ್ತಿ ಸ್ವಾತಂತ್ರ ಜೀವಂತವಾಗಿದ್ದು, ಎಲ್ಲ ಮಾಧ್ಯಮಗಳು ಸಹ ಅವರ ಅಭಿವ್ಯಕ್ತಿಗೆ ಯಾವುದೇ ಅಡ್ಡಿಯುಂಟು ಮಾಡಿಲ್ಲ. ಆದರೆ,ಈ ದೇಶದ ರೈತರು, ಶ್ರಮಿಕರು, ದಲಿತರು, ಅಲ್ಪಸಂಖ್ಯಾತರಿಗೆ ಅಭಿವ್ಯಕ್ತಿ ಸ್ವಾತಂತ್ರ ಸುರಕ್ಷಿತವಾಗಿಲ್ಲ ಎಂದು ಹೇಳಿದರು.

ಅಭಿವ್ಯಕ್ತಿ ಸ್ವಾತಂತ್ರ ಸಂವಿಧಾನ ಬದ್ಧವಾದ ಹಕ್ಕು. ಆ ಹಕ್ಕಿನ ಚಲಾವಣೆ ಮಾಡುವ ಅವಕಾಶವಿರಬೇಕು. ಸಂವಿಧಾನ ದತ್ತವಾದ ಹಕ್ಕು ಕರ್ತವ್ಯ ಚಲಾವಣೆಯಾಗದಿದ್ದರೆ, ಸಂವಿಧಾನ ಪರಿಪೂರ್ಣವಾಗಿ ಅನುಷ್ಠಾನಕ್ಕ ಬಂದಿಲ್ಲ ಎಂದರ್ಥ ಎಂದ ಅವರು, ಮಾಧ್ಯಮ ಕ್ಷೇತ್ರದಲ್ಲಿ ಪರೋಕ್ಷವಾಗಿ ಅಭಿವ್ಯಕ್ತಿ    ಸ್ವಾತಂತ್ರ ನಿಯಂತ್ರಿಸುವ ಹುನ್ನಾರ ನಡೆಯುತ್ತಿದೆ. ಅದಲ್ಲದೆ, ಜಾಗತಿಕರಣ ಪ್ರಭಾವದಿಂದ ಮಾಧ್ಯಮ ಉದ್ಯಮವಾಗಿ ಮಾರ್ಪಾಡಾಗಿ, ಖಾಸಗಿ ಉದ್ಯಮಿಗಳ ಜಾಹೀರಾತುದಾರರಿಗೆ ಋಣಿಯಾಗಿರಬೇಕಾದ ಕಾಲ ಬಂದಿದೆ ಎಂದರು.

ನಮ್ಮಲ್ಲಿ 82 ಸಾವಿರ ಪತ್ರಿಕೆಗಳು, 800ಕ್ಕೂ ಟಿವಿ ವಾಹಿನಿಗಳು, 1200ಕ್ಕೂ ಹೆಚ್ಚು ರೇಡಿಯೋ ಕೇಂದ್ರಗಳಿವೆ. ಇನ್ನು ರೈಲ್ವೆ, ಬಸ್ ಸ್ಟೇಷನ್‌ಗಳಲ್ಲಿ ಸ್ಟಾಲ್‌ಗಳಲ್ಲಿ ಹಾಕಿರುವ ನೂರಾರು ಪತ್ರಿಕೆಗಳು ಕಾಣುತ್ತವೆ. ಮೊಬೈಲ್‌ನಲ್ಲೂ, ಫೇಸ್‌ಬುಕ್, ವಾಟ್ಸಾಪ್, ಟ್ವೀಟರ್ ನೋಡಿದಾಗ ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ ಸುರಕ್ಷಿತವಾಗಿದೆ ಎನ್ನಿಸಿದರೂ ಅಭಿವ್ಯಕ್ತಿ ಸ್ವಾತಂತ್ರ ಯಾರಿಗೆ ಸುರಕ್ಷಿತವಾಗಿದೆ ಎಂಬ ಪ್ರಶ್ನೆ ಮೂಡುತ್ತದೆ ಎಂದು ಹೇಳಿದರು.

ಸಾಹಿತ್ಯ, ಸಂಗೀತ, ಕಾದಂಬರಿ,ಪ್ರಕಾರದ ಸೃಜನಶೀಲ ವಲಯದಲ್ಲಿ ಶೇ.100ರಲ್ಲಿ 25ರಷ್ಟು ದಲಿತರಿರುತ್ತಾರೆ. ಆದರೆ ಪತ್ರಿಕೆಗಳಲ್ಲಿ ಬೆರಳೆಣಿಕೆಯಷ್ಟು ಪತ್ರಕರ್ತರು ಇರುವುದಿಲ್ಲ. ಮಾಧ್ಯಮ ಪರಿಪೂರ್ಣವಾಗ ಬೇಕಾದರೆ ಅದರೊಳಗೆ ಎಲ್ಲ ಅನುಭವದ ಜನರಿರಬೇಕು ಎಂದು ಅವರು ಹೇಳಿದರು.

ಮಾಧ್ಯಮಗಳು ಸಮಾಜದ ಕನ್ನಡಿಯಾಗಿದ್ದು, ಅದರಲ್ಲಿ ಎಲ್ಲ ರೂಪ ಕುರೂಪಗಳು ಕಾಣಬೇಕು. ಆದರೆ ಹಾಗಾಗುತ್ತಿಲ್ಲ. ಇಂದಿರಾಗಾಂಧಿಯವರ ಕಾಲದಲ್ಲಿ ಅಭಿವ್ಯಕ್ತಿ ಸ್ವಾತಂತ್ರದ ದಮನವಾಗಿತ್ತು ಎಂದ ಅವರು, ಕರ್ನಾಟಕದ ಮಟ್ಟಿಗೆ ಮಾಧ್ಯಮಗಳು ಸಂಪೂರ್ಣ ಆಡಳಿತ ವಿರೋಧಿಯಾಗಿವೆ. ಇದನ್ನು ಸ್ವಾಗತಿಸುತ್ತೇನೆ. ಆದರೆ ರಾಷ್ಟೀಯ ಮಟ್ಟದಲ್ಲಿ ಮಾಧ್ಯಮಗಳು ಆಡಳಿತ ವಿರೋಧಿಯಾಗಿರದೇ ಆಡಳಿತ ಸರಕಾರದ ಪರವಾಗಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಗತಿಪರ ಚಿಂತಕ ಡಾ.ನಟರಾಜ್ ಹುಳಿಯಾರ್, ಹಿರಿಯ ಪರ್ತಕರ್ತ ಹಾಗೂ ಸಂವಾದ ಪತ್ರಿಕೆ ಸಂಪಾದಕ ಇಂದೂಧರ ಹೊನ್ನಾಪುರ ಸೇರಿದಂತೆ ಪ್ರಮುಖರಿದ್ದರು.

‘ಮುಖೇಶ್ ಅಂಬಾನಿಯ ವಾರ್ಷಿಕ ಆದಾಯ 2ಲಕ್ಷ ಕೋಟಿ ರೂ.ಗಳಾಗಿದೆ. ಆದರೆ, ನಮ್ಮ ರಾಜ್ಯ ಸರಕಾರದ ವಾರ್ಷಿಕ ಬಜೆಟ್ ಕೂಡ ಅಷ್ಟೇ ಇದೆ. ವಾರ್ಷಿಕವಾಗಿ ಮಾಧ್ಯಮ ಕ್ಷೇತ್ರಕ್ಕೆ 5ರಿಂದ 10ಸಾವಿರ ಕೋಟಿ ರೂ.ನೀಡುತ್ತಾರೆ. ಇನ್ನು ಕೆಲವೆ ವರ್ಷದಲ್ಲಿ ಭಾರತೀಯ ಪತ್ರಕರ್ತರು ರಿಲೆಯನ್ಸ್ ಕಂಪೆನಿಯ ನೌಕರರಾಗುತ್ತಾರೆ.
-ದಿನೇಶ್ ಅಮೀನ್ ಮಟ್ಟು, ಸಿಎಂ ಮಾಧ್ಯಮ ಸಲಹೆಗಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X