Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿಕ್ಷಣದಿಂದಲೇ ದೇಶವು ಅಭಿವೃದ್ದಿಯಾಗಲು...

ಶಿಕ್ಷಣದಿಂದಲೇ ದೇಶವು ಅಭಿವೃದ್ದಿಯಾಗಲು ಸಾಧ್ಯ: ನಾಡೋಜ ಡಾ.ಪಾಟೀಲ ಪುಟ್ಟಪ್ಪ

ವಾರ್ತಾಭಾರತಿವಾರ್ತಾಭಾರತಿ11 March 2018 10:31 PM IST
share
ಶಿಕ್ಷಣದಿಂದಲೇ ದೇಶವು ಅಭಿವೃದ್ದಿಯಾಗಲು ಸಾಧ್ಯ: ನಾಡೋಜ ಡಾ.ಪಾಟೀಲ ಪುಟ್ಟಪ್ಪ

ಮುಂಡಗೋಡ,ಮಾ.11: ಕನ್ನಡ ಭಾಷೆ ಜತೆ ಜತೆಗೆ ಇಂಗ್ಲೀಷ್ ಶಿಕ್ಷಣ ಪಡೆಯುವ ಅಗತ್ಯ ಇದೆ. ಕನ್ನಡವನ್ನು ಚೆನ್ನಾಗಿ ಕಲಿತರೆ ಯಾವುದೇ ಭಾಷೆಯನ್ನು ಸುಲಭವಾಗಿ ಕಲಿಯಬಹುದು ಎಂದು ನಾಡೋಜ,ಡಾ.ಪಾಟೀಲ ಪುಟ್ಟಪ್ಪ ಹೇಳಿದರು

ಅವರು ತಾಲೂಕಿನ ಇಂದೂರ ಗ್ರಾಮದ ಶ್ರೀಮಂಜುನಾಥ ಶಿಕ್ಷಣ ಮತ್ತು ಸಮಾಜ ಸೇವಾ ಟ್ರಸ್ಟ್(ರಿ), ಆರ್.ಕೆ.ಎನ್. ಕಾನ್ವೆಂಟ್ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ‘ಧರ್ಮಶ್ರೀ’ ಪ್ರಶಸ್ತಿ ಪುರಸ್ಕಾರವನ್ನು ಸ್ವೀಕರಿಸಿ ಮಾತನಾಡಿದರು.

ಕನ್ನಡ ಸುಮಾರು 3000 ವರ್ಷಗಳ ಹಿಂದಿನ ಭಾಷೆ. ಜಗತ್ತಿನಲ್ಲಿ 6000 ಭಾಷೆಗಳಿವೆ. ಮುಂದಿನ ಶತಮಾನದವರೆಗೆ 400 ಭಾಷೆಗಳು ಉಳಿಯುತ್ತವೆ . ಇದರಲ್ಲಿ ಕನ್ನಡ ಭಾಷೆಯು ಉಳಿಯುತ್ತದೆ ಎಂದ ಅವರು, ಶಿಕ್ಷಣದಿಂದಲೇ ದೇಶವು ಅಭಿವೃದ್ದಿಯಾಗಲು ಸಾಧ್ಯ. ಸಮಾಜದಲ್ಲಿ ಎಲ್ಲರೂ ನಮ್ಮವರು ಎಂದು ಪ್ರೀತಿ ವಿಶ್ವಾಸದಿಂದಿರಬೇಕು. ದ್ವೇಷದಿಂದ ನೆಮ್ಮದಿಯಿಂದಿರಲು ಸಾಧ್ಯವಿಲ್ಲ ಎಂದರು 

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಯಲ್ಲಾಪುರ ಕ್ಷೇತ್ರ ಶಾಸಕ ಶಿವರಾಮ ಹೆಬ್ಬಾರ ಮಾತನಾಡಿ, ಕನ್ನಡದ ನೆಲ, ಜಲ ಹಾಗೂ ಭಾಷೆಗೆ ಅಪಾರ ಗೌರವವಿದೆ. ಗ್ರಾಮಾಂತರ ಪ್ರದೇಶದ ಬಡ ಮಕ್ಕಳು ವಿದ್ಯಾವಂತರಾಗಬೇಕು. ಇಂದಿನ ದಿನಗಳಲ್ಲಿ ಕನ್ನಡ ಭಾಷೆಯ ಜೊತೆಗೆ ಇಂಗ್ಲೀಷ್ ಮತ್ತು ಕಂಪ್ಯೂಟರ ಜ್ಞಾನವೂ ತುಂಬಾ ಅಗತ್ಯ ಇರುವುದರಿಂದ ತಂದೆ ತಾಯಂದಿರು ತಮ್ಮ ಮಕ್ಕಳ ಶಿಕ್ಷಣಕ್ಕೆ ಮಹತ್ವ ನೀಡಬೇಕು ಎಂದರು. 

ರೋಟರಿ ಕ್ಲಬ್‍ನ ಅಧ್ಯಕ್ಷ ಎಸ್.ಕೆ.ಬೋರಕರ, ಡಾ.ಪಿ.ಪಿ.ಛಬ್ಬಿ ಮಾತನಾಡಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಧರ್ಮರಾಜ ನಡಿಗೇರಿ ವಹಿಸಿದ್ದರು. 

ಕಾರ್ಯಕ್ರಮದಲ್ಲಿ ಕರ್ನಾಟಕ ಎಕೆಡೆಮಿ ಆಫ್ ಮೆಥೆಮೆಟಿಕ್ಸ ಚಳ್ಳಕೆರೆಯವರು ಏರ್ಪಡಿಸಿದ ಗಣಿತ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು ಹಾಗೂ ಶಾಲೆಗೆ ಮತ್ತು ಇಬ್ಬರು ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಇಂದೂರಿನ ನಿವೃತ್ತ ಶಿಕ್ಷಕ ಎಸ್.ಎಸ್.ಸುಂಕದ ಅವರಿಗೆ ಸನ್ಮಾನ ಮಾಡಲಾಯಿತು.

ಮುಖ್ಯ ಅತಿಥಿಗಳಾಗಿ ಜಿ.ಪಂ.ಸದಸ್ಯ ರವಿಗೌಡ ಪಾಟೀಲ, ತಾ.ಪಂ.ಅಧ್ಯಕ್ಷೆ ದಾಕ್ಷಾಯಣಿ ಸುರಗಿಮಠ, ತಾ.ಪಂ.ಸದಸ್ಯ ಜ್ಞಾನದೇವ ಗುಡಿಯಾಳ, ಕಾಂಗೈ ಹಿರಿಯ ಮುಖಂಡ ಎಚ್.ಎಮ್.ನಾಯ್ಕ, ಬಿ.ಕೆ.ಪಾಟೀಲ, ಉದ್ಯಮಿ ಎ.ವಿ.ಪಾಲೇಕರ, ವಿ.ಎಸ್.ಕೊಣಸಾಲಿ, ಕೆ.ಆರ್.ಬಾಳಿಕಾಯಿ, ಎಮ್.ಆಯ್.ನಡಿಗೇರಿ, ಗುಡ್ಡಪ್ಪ ಪೂಜಾರ, ಶಿವಾಜಿ ಸುಣಗಾರ, ತಂಗಚ್ಚನ್ ಪಟ್ಯಾಡಿಯಲ್ ಶಿವಾಜಿ ದೇವಿಕೊಪ್ಪ, ನಾಗರಾಜ ಅಂಟಾಳ ಆಗಮಿಸಿದ್ದರು.

ಶಾಲಾ ಮಕ್ಕಳು ಪ್ರಾರ್ಥನೆ ಮತ್ತು ಸ್ವಾಗತಗೀತೆ ಹೇಳಿದರು. ದ್ರವ್ಯಾ ಶೇಟ ಪ್ರಶಸ್ತಿ ವಿತರಣೆ ಕಾರ್ಯಕ್ರಮ ನಡೆಸಿಕೊಟ್ಟರು. ಶ್ವೇತಾ ಪಾಟೀಲ ನಿರೂಪಿಸಿ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ಶಾಲಾ ಮಕ್ಕಳಿಂದ ಮನರಂಜನಾ ಕಾರ್ಯಕ್ರಮಗಳು ನಡೆಯಿತು. 
  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X