Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿರಿಯ: ಪೂರ್ವ ಘೌಟ ಇಬ್ಭಾಗ

ಸಿರಿಯ: ಪೂರ್ವ ಘೌಟ ಇಬ್ಭಾಗ

ವಿಜೃಂಭಿಸುತ್ತಿರುವ ಸರಕಾರಿ ಸೇನೆ; ಬಂಡುಕೋರರಿಗೆ ತೀವ್ರ ಹಿನ್ನಡೆ

ವಾರ್ತಾಭಾರತಿವಾರ್ತಾಭಾರತಿ11 March 2018 10:33 PM IST
share
ಸಿರಿಯ: ಪೂರ್ವ ಘೌಟ ಇಬ್ಭಾಗ

►1,000 ಮೀರಿದ ನಾಗರಿಕರ ಸಾವಿನ ಸಂಖ್ಯೆ

ಡೌಮ (ಸಿರಿಯ), ಮಾ. 11: ಬಂಡುಕೋರರ ನಿಯಂತ್ರಣದಲ್ಲಿರುವ ಪೂರ್ವ ಘೌಟದ ಅತಿ ದೊಡ್ಡ ಪಟ್ಟಣವೊಂದನ್ನು ಅದೇ ಪ್ರದೇಶದ ಇತರ ಭಾಗದಿಂದ ಬೇರ್ಪಡಿಸುವಲ್ಲಿ ಸಿರಿಯ ಸರಕಾರಿ ಪಡೆಗಳು ಶನಿವಾರ ಯಶಸ್ವಿಯಾಗಿವೆ.

ಇದು 20 ದಿನಗಳ ಕಾಳಗದಲ್ಲಿ ಸಿರಿಯ ಪಡೆಗಳು ಗಳಿಸಿದ ಅತಿ ದೊಡ್ಡ ಯಶಸ್ಸಾಗಿದೆ. ಈ ಅವಧಿಯಲ್ಲಿ 1,000ಕ್ಕೂ ಅಧಿಕ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ.

ಫೆಬ್ರವರಿ 18ರಿಂದ ಪೂರ್ವ ಘೌಟವನ್ನು ವಶಪಡಿಸಿಕೊಳ್ಳುವ ಕಾರ್ಯಾಚರಣೆಯಲ್ಲಿ ಸಿರಿಯದ ಸರಕಾರಿ ಪಡೆಗಳು ತೊಡಗಿಸಿಕೊಂಡಿದ್ದು, ಈವರೆಗೆ ಅರ್ಧಕ್ಕೂ ಹೆಚ್ಚಿನ ಭೂಭಾಗವನ್ನು ತಮ್ಮ ವಶಕ್ಕೆ ತೆಗೆದುಕೊಂಡಿವೆ.

‘ವಿಭಜಿಸಿ ಗೆಲ್ಲು’ ಎನ್ನುವ ತಂತ್ರಗಾರಿಕೆಯನ್ನು ಅನುಸರಿಸುತ್ತಿರುವ ಸಿರಿಯ ಪಡೆಗಳು, ಪೂರ್ವ ಘೌಟದ ಪ್ರಮುಖ ಪಟ್ಟಣ ಡೌಮವನ್ನು ಯಶಸ್ವಿಯಾಗಿ ಪ್ರತ್ಯೇಕಿಸಿವೆ. ಈ ಬೆಳವಣಿಗೆಯಿಂದ ಬಂಡುಕೋರರು ಭಾರೀ ಹಿನ್ನಡೆ ಅನುಭವಿಸಿದ್ದಾರೆ.

ಸಿರಿಯ ಸೈನಿಕರು ಶನಿವಾರ ಡೌಮ ಪಟ್ಟಣವನ್ನು ಹರಸ್ತ ಪಟ್ಟಣದೊಂದಿಗೆ ಸಂಪರ್ಕಿಸುವ ರಸ್ತೆಯನ್ನು ತುಂಡರಿಸಿದರು ಹಾಗೂ ಮಿಸ್ರಬ ಪಟ್ಟಣವನ್ನು ವಶಪಡಿಸಿಕೊಂಡರು ಎಂದು ಬ್ರಿಟನ್‌ನಲ್ಲಿ ನೆಲೆಸಿರುವ ಸಿರಿಯ ಮಾನವಹಕ್ಕುಗಳ ವೀಕ್ಷಣಾಲಯ ತಿಳಿಸಿದೆ.

ತುಂಬಿ ತುಳುಕುತ್ತಿರುವ ಬಾಂಬ್ ರಕ್ಷಕ ಬಂಕರ್‌ಗಳು

ಡೌಮದ ಪ್ರತಿಪಕ್ಷ ನಿಯಂತ್ರಣದ ಸ್ಥಳೀಯ ಆಡಳಿತವು ಶನಿವಾರ ಅಂತಾರಾಷ್ಟ್ರೀಯ ಸಂಘಟನೆಗಳಿಗೆ ‘ತುರ್ತು ಕರೆ’ ಹೊರಡಿಸಿದೆ.

‘‘ಬಾಂಬ್‌ನಿಂದ ರಕ್ಷಣೆ ಪಡೆಯಲು ಬಳಸಲಾಗುವ ಬಂಕರ್‌ಗಳು ಮತ್ತು ನೆಲಮಾಳಿಗೆಗಳು ತುಂಬಿ ತುಳುಕುತ್ತಿವೆ. ಜನರು ರಸ್ತೆಗಳು ಮತ್ತು ಸಾರ್ವಜನಿಕ ತೋಟಗಳಲ್ಲಿ ಮಲಗುತ್ತಿದ್ದಾರೆ’’ ಎಂದು ಹೇಳಿಕೆ ತಿಳಿಸಿದೆ.

‘‘ಸ್ಮಶಾನಗಳ ಮೇಲೂ ಭೀಕರ ಬಾಂಬ್ ದಾಳಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಸತ್ತವರನ್ನು ದಫನ ಮಾಡಲು ಕಷ್ಟವಾಗುತ್ತಿದೆ’’ ಎಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X