Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಪಾನ್ ಭೂಕಂಪ, ಸುನಾಮಿಗೆ 7 ವರ್ಷ ಪೂರ್ಣ

ಜಪಾನ್ ಭೂಕಂಪ, ಸುನಾಮಿಗೆ 7 ವರ್ಷ ಪೂರ್ಣ

ಕರಾವಳಿ ನಗರ, ಪಟ್ಟಣಗಳಲ್ಲಿ ಶ್ರದ್ಧಾಂಜಲಿ

ವಾರ್ತಾಭಾರತಿವಾರ್ತಾಭಾರತಿ11 March 2018 10:40 PM IST
share
ಜಪಾನ್ ಭೂಕಂಪ, ಸುನಾಮಿಗೆ 7 ವರ್ಷ ಪೂರ್ಣ

ಟೋಕಿಯೊ, ಮಾ. 11: ಜಪಾನ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪ ಮತ್ತು ಸುನಾಮಿಗೆ ರವಿವಾರ (ಮಾರ್ಚ್ 11) 7 ವರ್ಷಗಳು ತುಂಬಿದವು. ಇತಿಹಾಸದ ಭೀಕರ ಪ್ರಾಕೃತಿಕ ವಿಕೋಪಗಳ ಪೈಕಿ ಒಂದಾಗಿರುವ ಅಂದಿನ ಘಟನೆಯಲ್ಲಿ 18,000ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅದೂ ಅಲ್ಲದೆ, ಫುಕುಶಿಮ ಪರಮಾಣು ವಿದ್ಯುತ್ ಸ್ಥಾವರದಲ್ಲಿ ವಿಕರಣ ಸೋರಿಕೆಯಾಗಿತ್ತು.

ಮಧ್ಯಾಹ್ನ 2:46ಕ್ಕೆ ಸೈರನ್‌ಗಳು ಮೊಳಗಿದಾಗ ಜಪಾನ್‌ನ ಕರಾವಳಿ ನಗರಗಳು ಮತ್ತು ಪಟ್ಟಣಗಳ ಜನರು ರವಿವಾರ ಒಂದು ನಿಮಿಷದ ವೌನ ಆಚರಿಸಿದರು. 2011 ಮಾರ್ಚ್ 11ರಂದು ಇದೇ ಸಮಯದಲ್ಲಿ ಜಪಾನ್ ಕರಾವಳಿಯ ಸಮುದ್ರದಲ್ಲಿ ರಿಕ್ಟರ್ ಮಾಪಕದಲ್ಲಿ 9ರ ಅಗಾಧ ತೀವ್ರತೆಯ ಭೂಕಂಪ ಸಂಭವಿಸಿತ್ತು. ಅದರಿಂದಾಗಿ ಹುಟ್ಟಿಕೊಂಡ ಬೃಹತ್ ಸುನಾಮಿ ಅಲೆಗಳು ಸಮುದ್ರ ಗೋಡೆಗಳನ್ನು ಕೆಡವಿ ಕಟ್ಟಡಗಳು, ಕಾರುಗಳು ಮತ್ತು ಇಡೀ ಗ್ರಾಮಗಳನ್ನೇ ಕೊಚ್ಚಿಕೊಂಡು ಹೋದವು.

ಟೋಕಿಯೊದಲ್ಲಿ ನಡೆದ ಅಧಿಕೃತ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಶಿಂರೊ ಅಬೆ, ಪುನರ್ನಿರ್ಮಾಣವು ನಿರಂತರವಾಗಿ ನಡೆಯುತ್ತಿದೆ ಎಂದರು. 70,000ಕ್ಕೂ ಅಧಿಕ ಮಂದಿ ಈಗಲೂ ತಮ್ಮ ಊರುಗಳಿಂದ ನಿರ್ವಸಿತರಾಗಿದ್ದಾರೆ ಹಾಗೂ ಅವರ ಪೈಕಿ ಹೆಚ್ಚಿನವರಿಗೆ ತಮ್ಮ ಮನೆಗಳಿಗೆ ಹಿಂದಿರುಗಲು ಎಂದಿಗೂ ಸಾಧ್ಯವಾಗುವುದಿಲ್ಲ ಎಂದರು.

ಈಗಲೂ ವಿಕಿರಣ ಹೊರಸೂಸುತ್ತಿರುವ ಸ್ಥಾವರ

ಭೂಕಂಪ ಮತ್ತು ಸುನಾಮಿ ಅಲೆಗಳ ದಾಳಿಯಿಂದಾಗಿ ತೀವ್ರವಾಗಿ ಜರ್ಝರಿತಗೊಂಡಿರುವ ಫುಕುಶಿಮ ಅಣು ವಿದ್ಯುತ್ ಸ್ಥಾವರದಲ್ಲಿ ಈಗಲೂ ವಿಕಿರಣ ಸೋರಿಕೆಯಾಗುತ್ತಿದೆ. ಹಾಗಾಗಿ, ಅದನ್ನು ದುರಸ್ತಿಪಡಿಸುವುದು ಅಗಾಧ ಸಾಹಸದ ಕೆಲಸವಾಗಿದೆ ಎಂದು ಜಪಾನ್ ಪ್ರಧಾನಿ ಶಿಂರೊ ಅಬೆ ಹೇಳಿದರು.

ಸ್ಥಾವರವನ್ನು ಸರಿಪಡಿಸುವ ಕಾರ್ಯ ಪೂರ್ಣಗೊಳ್ಳಲು ದಶಕಗಳೇ ಬೇಕಾಗಬಹುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X