Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದ ವನಿತೆಯರಿಗೆ 3-1 ಸರಣಿಯ ಜಯ

ಭಾರತದ ವನಿತೆಯರಿಗೆ 3-1 ಸರಣಿಯ ಜಯ

ಕೊನೆಯ ಪಂದ್ಯದಲ್ಲಿ ಡ್ರಾ

ವಾರ್ತಾಭಾರತಿವಾರ್ತಾಭಾರತಿ11 March 2018 11:42 PM IST
share
ಭಾರತದ ವನಿತೆಯರಿಗೆ 3-1 ಸರಣಿಯ ಜಯ

ಸಿಯೋಲ್, ಮಾ.11: ಭಾರತ ಮತ್ತು ದಕ್ಷಿಣ ಕೊರಿಯಾ ಮಹಿಳಾ ಹಾಕಿ ತಂಡಗಳ ನಡುವಿನ ಐದು ಪಂದ್ಯಗಳ ಸರಣಿಯ ಅಂತಿಮ ಪಂದ್ಯ 1-1 ಗೋಲುಗಳಿಂದ ಡ್ರಾದಲ್ಲಿ ಕೊನೆಗೊಂಡಿದ್ದು, ಇದರೊಂದಿಗೆ ಭಾರತದ ವನಿತೆಯರ ಹಾಕಿ ತಂಡ 3-1 ಅಂತರದಲ್ಲಿ ಸರಣಿ ಜಯಿಸಿದೆ.

ಜಿನ್‌ಚುನ್ ಅಥ್ಲೆಟಿಕ್ ಸೆಂಟರ್‌ನಲ್ಲಿ ನಡೆದ ಪಂದ್ಯದಲ್ಲಿ ಉಭಯ ತಂಡಗಳು ಅಂತಿಮ ಕ್ವಾರ್ಟರ್‌ನಲ್ಲಿ ತಲಾ 1 ಗೋಲು ದಾಖಲಿಸಿ ಪಂದ್ಯವನ್ನು ಡ್ರಾದಲ್ಲಿ ಕೊನೆಗೊಳಿಸಿತು.

ಪಂದ್ಯ ಗೋಲುರಹಿತವಾಗಿ ಕೊನೆಗೊಳ್ಳುವ ಹಾದಿಯಲ್ಲಿದ್ದಾಗ ಭಾರತದ ವಂದನಾ ಕಟಾರಿಯಾ 48ನೇ ನಿಮಿಷದಲ್ಲಿ ತಂಡದ ಗೋಲು ಖಾತೆ ತೆರೆದರು. ಭಾರತ 1-0 ಅಂತರದಲ್ಲಿ ಮುನ್ನಡೆ ಸಾಧಿಸಿತು. ಆದರೆ ಮುನ್ನಡೆ ಹೆಚ್ಚು ಹೊತ್ತು ಇರಲಿಲ್ಲ. ಮತೆ ಎರಡು ನಿಮಿಷದಲ್ಲಿ ದಕ್ಷಿಣ ಕೊರಿಯಾದ ಬೊಮಿ ಕಿಮ್(50ನೇ ನಿಮಿಷ) ಗೋಲು ಕಬಳಿಸಿ ಭಾರತದ ವನಿತೆಯರ ಗೆಲುವಿನ ಆಸೆಯನ್ನು ಮಣ್ಣುಗೂಡಿಸಿದರು.

ಭಾರತಕ್ಕೆ ಕೊನೆಯ ಪಂದ್ಯದಲ್ಲಿ ಗೆಲ್ಲಲು ಸಾಧ್ಯವಾಗದಿದ್ದರೂ ಸರಣಿಯನ್ನು 3-1 ಅಂತರದಲ್ಲಿ ವಶಪಡಿಸಿಕೊಂಡಿತು.

ಇಂದಿನ ಪಂದ್ಯದಲ್ಲಿ ಉಭಯ ತಂಡಗಳು ಎಚ್ಚರಿಕೆಯಿಂದ ಆಡಿದವು. ಮೊದಲ 15 ನಿಮಿಷಗಳಲ್ಲಿ ಗೋಲು ದಾಖಲಾಗಲಿಲ್ಲ. ಸ್ಕೋರ್‌ಲೈನ್ 0-0 ಆಗಿತ್ತು.

ದ್ವಿತೀಯ ಕ್ವಾರ್ಟರ್‌ನಲ್ಲಿ ಕೊರಿಯಾ ತಂಡದ ಆಟಗಾರ್ತಿಯರಿಂದ ಆಕ್ರಮಣಕಾರಿ ಆಟ ಕಂಡು ಬಂತು. ಎರಡು ಪೆನಾಲ್ಟಿ ಕಾರ್ನರ್ ಅವಕಾಶ ಸಿಕ್ಕಿದರೂ, ಗೋಲು ಬರಲಿಲ್ಲ. ಭಾರತದ ಗೋಲು ಕೀಪರ್ ರಜನಿ ಇತಿಮಾರ್ಪು ಗೋಲು ನಿರಾಕರಿಸಿದರು. ಇದರಿಂದಾಗಿ ಆತಿಥೇಯರ ಗೋಲು ಗಳಿಸುವ ಪ್ರಯತ್ನ ಫಲ ನೀಡಲಿಲ್ಲ.

 ಗೋಲುರಹಿತವಾಗಿ ಪ್ರಥಮಾರ್ಧ ಕೊನೆಗೊಂಡಿತು. 41ನೇ ನಿಮಿಷದಲ್ಲಿ ಭಾರತಕ್ಕೆ ಮೊದಲ ಪೆನಾಲ್ಟಿ ಕಾರ್ನರ್ ಅವಕಾಶ ಸಿಕ್ಕಿತು. ಕೊರಿಯಾದ ಗೋಲು ಕೀಪರ್ ಮಿಜಿನ್ ಹ್ಯಾನ್ ಗೋಲು ಬಿಟ್ಟುಕೊಡಲಿಲ್ಲ.

ದ್ವಿತಿಯಾರ್ಧದ ಕೊನೆಯಲ್ಲಿ ಭಾರತಕ್ಕೆ ಗೋಲು ದಾಖಲಿಸಲು ಒಳ್ಳೆಯ ವಾತಾವರಣ ಕಂಡು ಬಂದಿತ್ತು. 48ನೇ ನಿಮಿಷದಲ್ಲಿ ನಾಯಕಿ ರಾಣಿ ಅವರು ಚೆಂಡನ್ನು ವಂದನಾ ಅವರತ್ತ ಪಾಸ್ ಮಾಡಿದರು. ಆಗ ವಂದನಾ ಕಟರಿಯಾ ಮಿಂಚಿನ ವೇಗದಲ್ಲಿ ಚೆಂಡನ್ನು ಗೋಲು ಪೆಟ್ಟಿಗೆಗೆ ರವಾನಿಸಿದರು. 50ನೇ ನಿಮಿಷದಲ್ಲಿ ಕೊರಿಯಾದ ಬೊಮಿ ಕಿಮ್ ಗೋಲು ಬಾರಿಸಿ ತಿರುಗೇಟು ನೀಡಿದರು. ಅಂತಿಮ 10 ನಿಮಿಷದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಹೋರಾಟ ನಡೆಸಿದವು. ಆದರೆ ಭಾರತ ಮತ್ತು ಕೊರಿಯಾ ತಂಡದ ಆಟಗಾರ್ತಿಯರಿಗೆ ಗೆಲುವಿನ ಗೋಲು ದಾಖಲಿಸಲು ಸಾಧ್ಯವಾಗಲಿಲ್ಲ. ಪಂದ್ಯ ಡ್ರಾದಲ್ಲಿ ಕೊನೆಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X