Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ವಸತಿ ಹಕ್ಕಿಗಾಗಿ ಆಗ್ರಹಿಸಿ...

ಮಡಿಕೇರಿ: ವಸತಿ ಹಕ್ಕಿಗಾಗಿ ಆಗ್ರಹಿಸಿ ಆದಿವಾಸಿಗಳಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ12 March 2018 5:00 PM IST
share
ಮಡಿಕೇರಿ: ವಸತಿ ಹಕ್ಕಿಗಾಗಿ ಆಗ್ರಹಿಸಿ ಆದಿವಾಸಿಗಳಿಂದ ಧರಣಿ

ಮಡಿಕೇರಿ, ಮಾ.12: ವಸತಿ ಹೀನ ಆದಿವಾಸಿಗಳಿಗೆ ವಸತಿ ಸೌಲಭ್ಯವನ್ನು ನೀಡುವಂತೆ ಒತ್ತಾಯಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿವಿಧ ಹಾಡಿಗಳ ಆದಿವಾಸಿಗಳು ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಮುಂದಿನ 15 ದಿನಗಳೊಳಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಜೈಲ್ ಬರೋ ಚಳುವಳಿ ಹಮ್ಮಿಕೊಳ್ಳುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಜಿಲ್ಲಾ ವ್ಯಾಪ್ತಿಯ ಹಾಡಿಗಳಲ್ಲಿ, ಲೈನ್ ಮನೆಗಗಳಲ್ಲಿ ಹತ್ತು ಸಾವಿರಕ್ಕು ಹೆಚ್ಚಿನ ನಿರ್ವಸತಿಗರಿದ್ದಾರೆ. ನಿರಾಶ್ರಿತರಿಗೆ ವಸತಿ ನೀಡುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಆಡಳಿತ ವ್ಯವಸ್ಥೆಯಿಂದ ಸೂಕ್ತ ಸ್ಪಂದನ ದೊರಕಿಲ್ಲವೆಂದು ಸಮಿತಿಯ ಪ್ರಮುಖರು ಆರೋಪಿಸಿದರು.

ಹಾಡಿ, ಕಾಲೋನಿ, ಪೈಸಾರಿ ಎನ್ನುವ ಹೆಸರಿನ ಪ್ರದೇಶಗಳಲ್ಲಿ ವಾಸಿಸುತ್ತಿರುವ ಕೊಡಗಿನ ಆದಿವಾಸಿಗಳು ಹತ್ತು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ತೋಟದ ಲೈನ್ ಮನೆಗಳಲ್ಲಿ ಮೂಲಭೂತ  ಸೌಲಭ್ಯಗಳಿಲ್ಲದೆ ಕಡಿಮೆ ಕೂಲಿಗೆ ಆದಿವಾಸಿಗಳು ದುಡಿಯುತ್ತಿದ್ದಾರೆ. ಮಾಲೀಕ ನೀಡಿದ ಸಾಲದ ಕುಣಿಕೆಗೆ ಜೋತು ಬಿದ್ದ ಆದಿವಾಸಿಗಳು ಜೀತಕ್ಕೂ ಒಳಗಾಗಿದ್ದಾರೆ ಎಂದು ಸಮಿತಿಯ ಕಾರ್ಯದರ್ಶಿ ವೈ.ಕೆ.ಗಣೇಶ್ ಅಸಮಾಧಾನ ವ್ಯಕ್ತಪಡಿಸಿದರು. 

ಕೊಡಗಿನ ಆದಿವಾಸಿಗಳು ನಿರಂತರ ಹೋರಾಟವನ್ನು ನಡೆಸಿಕೊಂಡು ಬರುತ್ತಿದ್ದು, ದಿಡ್ಡಳ್ಳಿ ಹೋರಾಟದ ಸಂದರ್ಭ ಜನಪ್ರತಿನಿಧಿಗಳು ಸಮಸ್ಯೆಗಳಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದರು. ಅಲ್ಲದೆ, ತೋಟದ ಮನೆಗಳ ಲೈನ್ ಮನೆಗಳಲ್ಲಿರುವ ವಸತಿ ಹೀನರ ಗಣತಿಯನ್ನು ಪಡೆಯಲು ಪ್ರಯತ್ನ ನಡೆಸಿದ್ದು, ಲೈನ್‍ಮನೆಗಳಲ್ಲಿ ಎಷ್ಟು ಜನರಿದ್ದಾರೆ ಎನ್ನುವ ಯಾವುದೇ ಮಾಹಿತಿಯನ್ನು ಜಿಲ್ಲಾಡಳಿತ ನೀಡಿಲ್ಲ. ಅಲ್ಲದೆ ನಿರಂತರ ಗಿರಿಜನ ವಿಶೇಷ ಘಟಕದ ಅರ್ಜಿಯನ್ನು ಸಲ್ಲಿಸಿದ್ದರು, ಯಾವುದೇ ಉತ್ತರವನ್ನು ನೀಡದೆ ಇಲ್ಲಿಯವರೆಗೆ ಆದಿವಾಸಿಗಳಿಗೆ ವಸತಿ ನೀಡುವ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಗಣೇಶ್ ಆರೋಪಿಸಿದರು. 

ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು ಸೂಕ್ತ ಕ್ರಮಕ್ಕೆ 15 ದಿನಗಳ ಗಡುವು ನೀಡಿದರು.

ಬೇಡಿಕೆಗಳು
ಲೈನ್‍ಮನೆಗಳಲ್ಲಿರುವ ಆದಿವಾಸಿಗಳ ಗಣತಿ ವಿವರ ಪ್ರಕಟಗೊಳಿಸಿ ಅರ್ಹರಿಗೆಲ್ಲಾ ವಸತಿ ಸೌಲಭ್ಯ ಒದಗಿಸಬೇಕು. ಲೈನ್ ಮನೆಗಳಲ್ಲಿರುವ ಆದಿವಾಸಿಗಳ ಸಾಲದ ಹೊರೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು. ಲೈನ್ ಮನೆಗಳಲ್ಲಿರುವ ಆದಿವಾಸಿ ಕಾರ್ಮಿಕರಿಗೆ ಕನಿಷ್ಠ ಕೂಲಿ ಖಾತರಿಗೊಳಿಸಬೇಕು. ಆದಿವಾಸಿಗಳ ಹಾಡಿ, ಊರು, ಕಾಲೋನಿಗಳಿಗೆ ರಸ್ತೆ, ನೀರು, ವಿದ್ಯುತ್ ಸೌಲಭ್ಯ ಒದಗಿಸಬೇಕು. ಆದಿವಾಸಿಗಳ ಜನರಿಗೆ ಸ್ಮಶಾನ ಸೌಕರ್ಯ ವ್ಯವಸ್ಥೆಗೊಳಿಸಬೇಕು. ಆದಿವಾಸಿ ಯುವಕರಿಗೆ ಉದ್ಯೋಗಕ್ಕಾಗಿ ವಿಶೇಷ ಗಣತಿ ನಡೆಸಿ ವಿಶೇಷ ನೇಮಕಾತಿ ಕ್ರಮಕೈಗೊಳ್ಳಬೇಕು. ಮಕ್ಕಳ ಶಿಕ್ಷಣಕ್ಕೆ ವಿಶೇಷ ಗಮನನೀಡಿ ಆಶ್ರಮ ಶಾಲೆಗಳಿಗೆ ಖಾಯಂ ಶಿಕ್ಷಕರನ್ನು ನೇಮಿಸಬೇಕು. ಗುರುತಿನ ಚೀಟಿ ಇಲ್ಲದವರಿಗೆ ಅದಾಲತ್ ಮೂಲಕ ಮತದಾರರ ಚೀಟಿ, ಆಧಾರ್, ರೇಷನ್ ಕಾರ್ಡುಗಳನ್ನು ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರಾಜ್ಯ ಸಮಿತಿ ಸದಸ್ಯರಾದ ಜೆ.ಆರ್.ಪ್ರೇಮ, ಜಿಲ್ಲಾಧ್ಯಕ್ಷರಾದ ಬರಡಿ ರವಿ, ಪ್ರಮುಖರಾದ ಅಣ್ಣಪ್ಪ, ಅಶೋಕ, ಮುರುಗೇಶ್, ಕಾವೇರಿ, ಮಿಲನ್,   ಪಿ.ಎಂ.ಮಣಿ, ದೇವರಪುರ ಪ್ರೇಮ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X