Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈತರಿಂದ ಪ್ರತಿಭಟನೆ ವಾಪಸ್

ರೈತರಿಂದ ಪ್ರತಿಭಟನೆ ವಾಪಸ್

ಮಹಾರಾಷ್ಟ್ರ ಸರಕಾರದಿಂದ ಬೇಡಿಕೆ ಈಡೇರಿಸಲು ಲಿಖಿತ ಭರವಸೆ

ವಾರ್ತಾಭಾರತಿವಾರ್ತಾಭಾರತಿ12 March 2018 6:14 PM IST
share
ರೈತರಿಂದ ಪ್ರತಿಭಟನೆ ವಾಪಸ್

ಮುಂಬೈ, ಮಾ. 12: ಸಾಲ ಮನ್ನಾ ಸೇರಿದಂತೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ರೈತರು ನಾಸಿಕ್‌ನಿಂದ ಮುಂಬೈ ಮಹಾನಗರಕ್ಕೆ ನಡೆಸಿದ ಪಾದಯಾತ್ರೆ ಚಳವಳಿಗೆ ಕೊನೆಗೂ ಜಯ ದೊರೆತಿದೆ. ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾರಾಷ್ಟ್ರ ಸರಕಾರ ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಸೋಮವಾರ ಒಪ್ಪಿಕೊಂಡಿದೆ.

 ಮಹಾರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಮೈತ್ರಿಕೂಟದ ಮಿತ್ರ ಪಕ್ಷಗಳಾದ ಎನ್‌ಸಿಪಿ, ಮಹಾರಾಷ್ಟ್ರ ನವನಿರ್ಮಾಣ ಸೇನೆ, ಶಿವಸೇನೆ ಹಾಗೂ ಪ್ರತಿಪಕ್ಷವಾದ ಕಾಂಗ್ರೆಸ್ ರೈತರ ಚಳವಳಿಗೆ ಬೆಂಬಲ ವ್ಯಕ್ತಪಡಿಸಿತ್ತು ಹಾಗೂ ಅವರ ಬೇಡಿಕೆ ಈಡೇರಿಸುವಂತೆ ಒತ್ತಡ ಹೇರಿತ್ತು. ಕೃಷಿ ಸಾಲ ಮನ್ನಾ,ಕೃಷಿ ಮಾಡುತ್ತಿರುವ ಅರಣ್ಯ ಭೂಮಿ ಬುಡಕಟ್ಟು ರೈತರಿಗೆ ವರ್ಗಾವಣೆ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಾರಾಷ್ಟ್ರದ 50 ಸಾವಿರಕ್ಕೂ ಅಧಿಕ ರೈತರು ನಾಸಿಕ್‌ನಿಂದ ಮಂಗಳವಾರ ಪಾದಯಾತ್ರೆ ಆರಂಭಿಸಿದ್ದು, ರವಿವಾರ ಮುಂಬೈ ತಲುಪಿದ್ದರು. ಇಂದು ವಿಧಾನಸಭಾ ಮುತ್ತಿಗೆ ನಡೆಸಲು ರೈತರು ಸಿದ್ಧರಾಗುತ್ತಿದ್ದಂತೆ ಫಡ್ನವೀಸ್ ಸರಕಾರ ಅವರ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡಿದೆ. ಈ ಹಿನ್ನೆಲೆಯಲ್ಲಿ ರೈತರು ತಮ್ಮ ಚಳವಳಿಯನ್ನು ಹಿಂತೆಗೆದುಕೊಂಡಿದ್ದಾರೆ.

ದಕ್ಷಿಣ ಮುಂಬೈಯ ಆಝಾದ್ ಮೈದಾನದಲ್ಲಿ ಸೇರಿದ ರೈತರನ್ನು ಉದ್ದೇಶಿಸಿ ರಾಜ್ಯದ ಹಣಕಾಸು ಸಚಿವ ಚಂದ್ರಕಾಂತ್ ಪಾಟೀಲ್ ಮಾತನಾಡಿ, ‘‘ಎಲ್ಲ ಬೇಡಿಕೆಗಳನ್ನು ಈಡೇರಿಸಲಾಗುವುದು’’ ಎಂದರು. ಈ ಸಂದರ್ಭ ಸಿಪಿಎಂನ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಉಪಸ್ಥಿತರಿದ್ದರು. ವಿಧಾನ ಭವನದ ಹೊರಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕೃಷಿಗೆ ಬಳಸುತ್ತಿರುವ ಅರಣ್ಯ ಭೂಮಿಯನ್ನು ಬುಡಕಟ್ಟು ಜನರು ಹಾಗೂ ರೈತರಿಗೆ ಹಸ್ತಾಂತರಿಸಲು ಸಮಿತಿ ರೂಪಿಸಲು ನಾವು ಒಪ್ಪಿಕೊಂಡಿದ್ದೇವೆ ಎಂದರು. ‘‘ವಿಧಾನ ಭವನದಲ್ಲಿ ಸೋಮವಾರ ಬುಡಕಟ್ಟು ಹಾಗೂ ರೈತರ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಲಾಯಿತು. 2005ಕ್ಕಿಂತ ಹಿಂದಿನಿಂದಲೂ ಕೃಷಿ ಮಾಡುತ್ತಿರುವ ಬಗ್ಗೆ ಪುರಾವೆ ಸಲ್ಲಿಸಿದ ಬುಡಕಟ್ಟು ಜನರಿಗೆ ಕೃಷಿ ಭೂಮಿ ಮಂಜೂರು ಮಾಡಲು ಸಮಿತಿ ರೂಪಿಸಲು ನಾವು ಒಪ್ಪಿಕೊಂಡಿದ್ದೇವೆ. ನಾವು ಅವರ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡಿದ್ದೇವೆ’’ ಎಂದು ಫಡ್ನವೀಸ್ ಹೇಳಿದರು. ‘‘ಚಳವಳಿಯಲ್ಲಿ ಪಾಲ್ಗೊಂಡವರಲ್ಲಿ ಸುಮಾರು ಶೇ. 90ರಿಂದ 95 ಬಡ ಬುಡಕಟ್ಟು ಜನರು. ಅವರು ಅರಣ್ಯ ಭೂಮಿ ಹಕ್ಕಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರು ಭೂರಹಿತರು ಹಾಗೂ ಅವರಿಗೆ ಕೃಷಿ ಭೂಮಿ ಇಲ್ಲದೆ ಕೃಷಿ ಮಾಡಲು ಸಾಧ್ಯವಾಗುತ್ತಿಲ್ಲ. ಅವರ ಬೇಡಿಕೆ ಬಗ್ಗೆ ಸರಕಾರ ಸೂಕ್ಷ್ಮತೆ ಹಾಗೂ ಸಕಾರಾತ್ಮಕತೆ ಹೊಂದಿದೆ’’ ಎಂದು ಅವರು ರಾಜ್ಯ ವಿಧಾನ ಸಭೆಯಲ್ಲಿ ಚರ್ಚೆಯ ವೇಳೆ ಅವರು ಹೇಳಿದ್ದರು. ‘‘ಪ್ರತಿಭಟನಾಕಾರರ ಬೇಡಿಕೆಯ ಬಗ್ಗೆ ಚರ್ಚೆ ಮಾಡಲು ಸಂಸದೀಯ ಸಮಿತಿ ರೂಪಿಸಲಾಗುವುದು. ಸಮಯ ಮಿತಿ ಒಳಗಡೆ ಅವರ ಸಮಸ್ಯೆ ಪರಿಹರಿಸಲು ನಾವು ನಿರ್ಧಾರ ತೆಗೆದುಕೊಳ್ಳಲಿದ್ದೇವೆ.’’ ಎಂದು ಅವರು ಹೇಳಿದರು. 

ಕೆಂಪು ಸಾಗರವಾದ ಆಝಾದ್ ಮೈದಾನ

  ಸಿಪಿಎಂ ಬೆಂಬಲಿತ ಅಖಿಲ ಭಾರತ ಕಿಶಾನ್ ಸಭಾ ನೇತೃತ್ವದ ಈ ಪ್ರತಿಭಟನೆಯಲ್ಲಿ ಸಾವಿರಾರು ಪ್ರತಿಭಟನಾಕಾರರು ಕೆಂಪು ಪತಾಕೆಯನ್ನು ಹಿಡಿದಿರುವುದರಿಂದ ಆಝಾದ್ ಮೈದಾನ ಇಂದು ಕೆಂಪು ಸಾಗರವಾಗಿ ಪರಿವರ್ತನೆಯಾಗಿತ್ತು. ಸುಡುಬಿಸಿಲು ಲೆಕ್ಕಿಸದೆ ಆಗಮಿಸಿದ್ದ ರೈತರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ನಾಸಿಕ್‌ನಿಂದ 180 ಕಿ.ಮೀ. ದೂರವನ್ನು ಸುಡು ಬಿಸಿಲನ್ನೂ ಲೆಕ್ಕಿಸದೆ ನಡಿಗೆಯಲ್ಲೇ ಕ್ರಮಿಸಿ ಇಲ್ಲಿಗೆ ಆಗಮಿಸಿದ್ದರು. ಕಳೆದ ಎರಡು ದಿನಗಳಿಂದ ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. 

ರೈತರ ಇತರ ಬೇಡಿಕೆಗಳು -ಒಟ್ಟು ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಸ್ವಾಮಿನಾಥನ್ ಸಮಿತಿ ಶಿಫಾರಸು ಅನುಷ್ಠಾನ, ಅರಣ್ಯ ಹಕ್ಕು ಕಾಯ್ದೆ ಜಾರಿ.

-ಬುಡಕಟ್ಟು ಭೂಮಿ ಮುಳಗಡೆಯಾಗದಿರುವಂತೆ, ಯೋಜನೆಯಿಂದ ಈ ಪ್ರದೇಶಗಳಿಗೆ ಹಾಗೂ ಜಿಲ್ಲೆಯ ಇತರ ಬರ ಪೀಡಿತ ಪ್ರದೇಶಗಳಿಗೆ ನೀರು ಲಭ್ಯವಾಗುವಂತೆ ನಾಸಿಕ್, ಥಾಣೆ ಹಾಗೂ ಪಾಲ್ಘಾರ್ ಜಿಲ್ಲೆಯ ನದಿ ಜೋಡಣೆ ಯೋಜನೆಗಳಲ್ಲಿ ಬದಲಾವಣೆ.

ಹೈಸ್ಪೀಡ್ ರೈಲ್ವೆ ಹಾಗೂ ಸೂಪರ್ ಹೈವೇ ಸೇರಿದಂತೆ ಯೋಜನೆಗಳಿಗೆ ರಾಜ್ಯ ಸರಕಾರ ಭೂಸ್ವಾಧೀನ ಮಾಡಬಾರದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X