Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಪೊರೇಶನ್ ಬ್ಯಾಂಕ್ ಸಂಸ್ಥಾಪಕ...

ಕಾರ್ಪೊರೇಶನ್ ಬ್ಯಾಂಕ್ ಸಂಸ್ಥಾಪಕ ಅಬ್ದುಲ್ಲಾ ಹಾಜಿ ಕಾಸಿಂ ಸಾಹೇಬ್ ದೂರದೃಷ್ಟಿಯ ನಾಯಕ: ಜೈ ಕುಮಾರ್ ಗರ್ಗ್

► ಕಾರ್ಪ್ ಬ್ಯಾಂಕ್ ಇ-ಪಾಸ್ ಬುಕ್ ಬಿಡುಗಡೆ ►113 ಸಂಸ್ಥಾಪನಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ12 March 2018 8:26 PM IST
share
ಕಾರ್ಪೊರೇಶನ್ ಬ್ಯಾಂಕ್ ಸಂಸ್ಥಾಪಕ ಅಬ್ದುಲ್ಲಾ ಹಾಜಿ ಕಾಸಿಂ ಸಾಹೇಬ್ ದೂರದೃಷ್ಟಿಯ ನಾಯಕ: ಜೈ ಕುಮಾರ್ ಗರ್ಗ್

ಮಂಗಳೂರು, ಮಾ.12: ಕಾರ್ಪೊರೇಶನ್ ಬ್ಯಾಂಕ್ ಸಂಸ್ಥಾಪಕ ಖಾನ್ ಬಹದ್ದೂರ್ ಹಾಜಿ ಅಬ್ದುಲ್ಲಾ ಹಾಜಿ ಕಾಸಿಂ ಸಾಹೇಬ್ ಬಹದ್ದೂರು ದೂರದೃಷ್ಟಿಯ ನಾಯಕರಾಗಿದ್ದರು. ಅವರ ದೂರದೃಷ್ಟಿಯ ಫಲವಾಗಿ ಬ್ಯಾಂಕ್ ವಿಸ್ತಾರವಾಗಿ ಬೆಳೆಯಲು ಕಾರಣವಾಗಿದೆ. ಗ್ರಾಹಕರ ಸಂತೃಪ್ತಿ ನಮ್ಮ ಪ್ರಥಮ ಗುರಿಯಾಗಿದೆ ಎಂದು ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜೈ ಕುಮಾರ್ ಗರ್ಗ್ ತಿಳಿಸಿದ್ದಾರೆ.

ಅವರು ನಗರದ ಕಾರ್ಪೊರೇಶನ್ ಬ್ಯಾಂಕ್‌ನ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಇಂದು ಹಮ್ಮಿಕೊಂಡ 113ನೇ ಸಂಸ್ಥಾಪನಾ ಸಮಾರಂಭದ ಅಧ್ಯಕ್ಷತೆ ವಹಿಸಿ, ಕಾರ್ಪ್ ಬ್ಯಾಂಕ್ ಇ-ಪಾಸ್ ಬುಕ್ ಯೋಜನೆಗೆ ಚಾಲನೆ ನೀಡಿ ನಂತರ ಮಾತನಾಡಿದರು.

ಉಡುಪಿಯಲ್ಲಿ 112ವರ್ಷಗಳ ಹಿಂದೆ ಕೇವಲ 38 ರೂಪಾಯಿ,12 ಆಣೆ ಹಾಗೂ 2 ಪೈಸೆ ಬಂಡವಾಳದೊಂದಿಗೆ ಖಾನ್ ಬಹದ್ದೂರ್ ಹಾಜಿ ಅಬ್ದುಲ್ಲಾ ಹಾಜಿ ಕಾಸಿಂ ಸಾಹೇಬ್ ಬಹದ್ದೂರು ಆರಂಭಿಸಿದ ಕಾರ್ಪೊರೇಶನ್ ಬ್ಯಾಂಕ್ ಪ್ರಸಕ್ತ 3,30,000 ಕೋಟಿ ರೂ. ಆರ್ಥಿಕ ವ್ಯವಹಾರ ಮಾಡುವ ಸಂಸ್ಥೆಯಾಗಿ ಬೆಳೆದಿದೆ. 3169 ಎಟಿಎಂಗಳನ್ನು 2,501 ಕ್ಕೂ ಅಧಿಕ ಶಾಖೆಗಳನ್ನು ಹೊಂದಿರುವ ಬ್ಯಾಂಕ್, ದೇಶದಲ್ಲಿ 4721 ಶಾಖೆ ರಹಿತ ಬ್ಯಾಂಕ್ ಸೇವಾ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. 2,01,488 ಕೋಟಿ ರೂ. ಬಂಡವಾಳ ಹೊಂದಿದೆ. 1991ರಿಂದ ಕೋರ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಹೊಂದಿರುವ ಬ್ಯಾಂಕ್, ನಿರಂತರವಾಗಿ ಗ್ರಾಹಕರ ಸೇವೆಗಾಗಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಾ ಬಂದಿದೆ. ಜನರಿಗೆ ಹತ್ತಿರವಾಗುವ ಸೇವೆಯನ್ನು ಬ್ಯಾಂಕ್ ಆರಂಭದ ದಿನಗಳಿಂದಲೂ ಮಾಡುತ್ತಾ ಬಂದಿದೆ ಎಂದು ಜೈ ಕುಮಾರ್ ಗರ್ಗ್ ತಿಳಿಸಿದ್ದಾರೆ.

ಬ್ಯಾಂಕ್‌ಗಳ ಎನ್‌ಪಿಎ ಮೊತ್ತ ಬೆಳೆಯದಂತೆ ನಿಭಾಯಿಸುವುದು ಬ್ಯಾಂಕ್‌ಗಳ ಮುಂದಿರುವ ಸವಾಲಾಗಿದೆ. ಕಾರ್ಪೊರೇಶನ್ ಈ ನಿಟ್ಟಿನಲ್ಲಿ ಉತ್ತಮ ಪ್ರಗತಿ ಸಾಧಿಸಿದೆ. ಬ್ಯಾಂಕ್ ಗ್ರಾಹಕರ ಸಂತೃಪ್ತಿಗೆ ಪೂರಕವಾದ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಪ್ರಥಮ ಆಧ್ಯತೆ ನೀಡುತ್ತಾ ಬಂದಿದೆ ಹಾಗೂ ಸಾರ್ವಜನಿಕರ ಹಣಕ್ಕೆ ಭದ್ರತೆ ಒದಗಿಸುತ್ತಾ ಬಂದಿದೆ ಎಂದು ಜೈ ಕುಮಾರ್ ಗರ್ಗ್ ಹೇಳಿದರು. 

ಬ್ಯಾಂಕ್‌ನ ಜಿಎಂ ವಿ. ಶ್ರೀಧರ್ ಇ ಪಾಸ್ ಬುಕ್‌ನ ವಿಶೇಷತೆಗಳ ಬಗ್ಗೆ ವಿವರಿಸಿದರು.

ಸಮಾರಂಭದಲ್ಲಿ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಬ್ಯಾಂಕಿನ ವಿಜಿಲೆನ್ಸ್ ಅಧಿಕಾರಿ ಪಿ.ವಿ.ಬಿ.ಎನ್.ಮೂರ್ತಿ ಉಪಸ್ಥಿತರಿದ್ದರು.

ಕರ್ಣಾಟಕ ಬ್ಯಾಂಕಿನ ಅಧ್ಯಕ್ಷ ಜಯರಾಮಭಟ್, ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಹಾಬಲೇಶ್ವರ ಸಂಸ್ಥಾಪಕರಿಗೆ ನಮನ ಸಲ್ಲಿಸಿದರು. ಬ್ಯಾಂಕಿನ ಮಹಾ ಪ್ರಬಂಧಕ ಯು.ವಿ.ಕಿಣಿ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X