Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಭೂಮಿ ಅತಿಕ್ರಮಣಕ್ಕಾಗಿ...

ಶಿವಮೊಗ್ಗ: ಭೂಮಿ ಅತಿಕ್ರಮಣಕ್ಕಾಗಿ ಅರಣ್ಯಕ್ಕೆ ಬೆಂಕಿ

ವಾರ್ತಾಭಾರತಿವಾರ್ತಾಭಾರತಿ12 March 2018 10:09 PM IST
share
ಶಿವಮೊಗ್ಗ: ಭೂಮಿ ಅತಿಕ್ರಮಣಕ್ಕಾಗಿ ಅರಣ್ಯಕ್ಕೆ ಬೆಂಕಿ

ಶಿವಮೊಗ್ಗ, ಮಾ. 12: ಭೂ ಅತಿಕ್ರಮಣ ಮಾಡಿಕೊಳ್ಳುವ ಉದ್ದೇಶದಿಂದ ಅರಣ್ಯಕ್ಕೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಗವಟೂರು ಗ್ರಾಮದಲ್ಲಿ ನಡೆದಿದೆ.

ಗವಟೂರು ಗ್ರಾಮದ ಸರ್ವೇ ನಂಬರ್ 50 ರ ಮೀಸಲು ಅರಣ್ಯಕ್ಕೆ ಅತಿಕ್ರಮಣಕಾರರು ಬೆಂಕಿ ಹಚ್ಚಿದ ಪರಿಣಾಮ, ಸುಮಾರು 25 ಎಕರೆಗೂ ಹೆಚ್ಚು ಅರಣ್ಯ ಭೂಮಿ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಸಂಪೂರ್ಣ ಭಸ್ಮವಾಗಿದೆ ಎಂದು ತಿಳಿದುಬಂದಿದೆ. 

ಕಾರಣವೇನು?: ಗವಟೂರು ಗ್ರಾಮದ ರೈತನೋರ್ವನ ವಿರುದ್ದ ಅರಣ್ಯಕ್ಕೆ ಬೆಂಕಿ ಹಚ್ಚಿದ ಆರೋಪ ಕೇಳಿ ಬಂದಿದೆ. ಶುಂಠಿ ಬೆಳೆಯುವ ಉದ್ದೇಶದಿಂದ ಅರಣ್ಯಕ್ಕೆ ಬೆಂಕಿ ಹಚ್ಚಿ, ಮರಗಿಡಗಳನ್ನು ಕಡಿದು ಹಾಕಿ ಭೂ ಅತಿಕ್ರಮಣ ಮಾಡಿಕೊಳ್ಳುವ ಹುನ್ನಾರ ಇದಾಗಿದೆ ಎಂದು ಹೇಳಲಾಗಿದೆ. 

ಅಡಿಕೆ ಗರಿಗಳನ್ನು ಬಳಸಿ ಅರಣ್ಯಕ್ಕೆ ಬೆಂಕಿ ಹಚ್ಚಲಾಗಿದೆ. ಉರಿ ಬಿಸಿಲು, ಗಾಳಿ ಹಾಗೂ ಒಣಗಿದ ಗಿಡಗಂಟೆಗಳ ಕಾರಣದಿಂದ ಬೆಂಕಿಯು ಕೆನ್ನಾಲಿಗೆ ಕಾಡೆಲ್ಲಾ ಆವರಿಸಿದೆ. ಈ ನಡುವೆ ಬೆಲೆಬಾಳುವ ಮರಗಳನ್ನು ಮನಸೋ ಇಚ್ಛೆ ಕಡಿದಿರುವುದು ಬೆಳಕಿಗೆ ಬಂದಿದೆ. ಬೆಲೆಬಾಳುವ ನಂದಿ, ಹುನಾಲು ಮರಗಳು ಸೇರಿದಂತೆ ಲಕ್ಷಾಂತರ ರೂ ಮೌಲ್ಯದ ಅರಣ್ಯ ಸಂಪತ್ತು ನಾಶವಾಗಿದೆ. ವನ್ಯಜೀವಿಗಳು ಸುಟ್ಟು ಕರಕಲಾಗಿ, ಜೀವವೈವಿದ್ಯತೆಗೆ ಧಕ್ಕೆ ಉಂಟಾಗಿದೆ. 

ಅರಣ್ಯಕ್ಕೆ ಬೆಂಕಿ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಸ್ಥಳಿಯ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿಯಿತ್ತು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಸಂಭವಿಸಬಹುದಾಗಿದ್ದ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಹಾಗೆಯೇ ಅರಣ್ಯಕ್ಕೆ ಬೆಂಕಿ ಹಾಕಿದ ಪ್ರಕರಣದ ಕುರಿತಂತೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ಕೂಡ ನೀಡಿದ್ದಾರೆ. 

ಹೆಚ್ಚುತ್ತಿದೆ ದುಷ್ಕೃತ್ಯ: ಪಶ್ಚಿಮಘಟ್ಟದ ಅರಣ್ಯ ಪ್ರದೇಶದಲ್ಲಿ ರಬ್ಬರ್, ಶುಂಠಿ, ಅಡಿಕೆ ತೋಟ ಸೇರಿದಂತೆ ಕೃಷಿ ಉದ್ದೇಶಕ್ಕಾಗಿ ಬೇಸಿಗೆಯ ವೇಳೆ ಅರಣ್ಯಕ್ಕೆ ಬೆಂಕಿ ಹಚ್ಚಿ ತದನಂತರ ಭೂಮಿ ಅತಿಕ್ರಮಿಸುವುದು ಸರ್ವೇಸಾಮಾನ್ಯ ಎಂಬಂತಾಗಿ ಪರಿಣಮಿಸಿದೆ. ಇದರಿಂದ ಭಾರೀ ಪ್ರಮಾಣದ ಅರಣ್ಯ ಕಣ್ಮರೆಯಾಗುತ್ತಿದೆ ಎಂದು ಪರಿಸರ ಪ್ರೇಮಿಗಳು ಆರೋಪಿಸುತ್ತಾರೆ. 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X