Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮನೀಶ್-ಕಾರ್ತಿಕ್ ಸಾಹಸ: ಭಾರತಕ್ಕೆ 6...

ಮನೀಶ್-ಕಾರ್ತಿಕ್ ಸಾಹಸ: ಭಾರತಕ್ಕೆ 6 ವಿಕೆಟ್ ಜಯ

ವಾರ್ತಾಭಾರತಿವಾರ್ತಾಭಾರತಿ12 March 2018 11:58 PM IST
share
ಮನೀಶ್-ಕಾರ್ತಿಕ್ ಸಾಹಸ: ಭಾರತಕ್ಕೆ 6 ವಿಕೆಟ್ ಜಯ

 ಕೊಲಂಬೊ, ಮಾ.12: ಕನ್ನಡಿಗ ಮನೀಷ್ ಪಾಂಡೆ ಹಾಗೂ ಚೆನ್ನೈ ಆಟಗಾರ ದಿನೇಶ್ ಕಾರ್ತಿಕ್ ಸಂದರ್ಭೋಚಿತ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ ಶ್ರೀಲಂಕಾ ವಿರುದ್ಧ ತ್ರಿಕೋನ ಸರಣಿಯ 4ನೇ ಪಂದ್ಯವನ್ನು 6 ವಿಕೆಟ್‌ಗಳಿಂದ ಗೆದ್ದುಕೊಂಡಿದೆ.

ಇಲ್ಲಿನ ಪ್ರೇಮದಾಸ ಸ್ಟೇಡಿಯಂನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಗೆಲ್ಲಲು 153 ರನ್ ಗುರಿ ಪಡೆದಿದ್ದ ಭಾರತ 17.3 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ ಗೆಲುವಿನ ರನ್ ದಾಖಲಿಸಿತು. ಭಾರತ 3.1 ಓವರ್‌ಗಳಲ್ಲಿ 22 ರನ್‌ಗೆ 2 ವಿಕೆಟ್ ಕಳೆದುಕೊಂಡು ಕಳಪೆ ಆರಂಭ ಪಡೆದಿತ್ತು. ನಾಯಕ ರೋಹಿತ್ ಶರ್ಮ(11)ಹಾಗೂ ಶಿಖರ್ ಧವನ್ ಉತ್ತಮ ಆರಂಭ ನೀಡಲು ವಿಫಲರಾದರು. ರಿಷಭ್ ಪಂತ್ ಬದಲಿಗೆ ಅವಕಾಶ ಪಡೆದಿದ್ದ ಕೆ.ಎಲ್. ರಾಹುಲ್(18) ಹಾಗೂ ಸುರೇಶ್ ರೈನಾ(27)3ನೇ ವಿಕೆಟ್‌ಗೆ 40 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದರು. ರೈನಾರನ್ನು ಔಟ್ ಮಾಡಿದ ಫೆರ್ನಾಂಡೊ ಈ ಜೋಡಿಯನ್ನು ಬೇರ್ಪಡಿಸಿದರು. ರಾಹುಲ್ 18 ರನ್‌ಗೆ ಹಿಟ್ ವಿಕೆಟ್‌ಗೆ ಒಳಗಾದರು.

ತಂಡ 85 ರನ್‌ಗೆ 4 ವಿಕೆಟ್ ಕಳೆದುಕೊಂಡಿದ್ದಾಗ ಜೊತೆಯಾದ ಪಾಂಡೆ(42,31 ಎಸೆತ, 3 ಬೌಂಡರಿ, 1 ಸಿಕ್ಸರ್) ಹಾಗೂ ಕಾರ್ತಿಕ್(ಅಜೇಯ 39,25 ಎಸೆತ, 5 ಬೌಂಡರಿ)5ನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 68 ರನ್ ಸೇರಿಸಿ ಇನ್ನೂ 9 ಎಸೆತಗಳು ಬಾಕಿ ಇರುವಾಗಲೇ ತಂಡಕ್ಕೆ ಗೆಲುವು ತಂದುಕೊಟ್ಟರು.

ಶ್ರೀಲಂಕಾದ ಪರ ಧನಂಜಯ(2-19) ಯಶಸ್ವಿ ಬೌಲರ್ ಎನಿಸಿಕೊಂಡರು.

  ಇದಕ್ಕೆ ಮೊದಲು ಮಳೆಯಿಂದಾಗಿ ವಿಳಂಬವಾಗಿ ಆರಂಭವಾದ ಪಂದ್ಯದಲ್ಲಿ ಆರಂಭಿಕ ಆಟಗಾರ ಕುಸಾಲ್ ಮೆಂಡಿಸ್ ಅರ್ಧಶತಕದ ಕೊಡುಗೆಯ ಸಹಾಯದಿಂದ ಶ್ರೀಲಂಕಾ ತಂಡ ಭಾರತ ವಿರುದ್ಧ 19 ಓವರ್‌ಗಳಲ್ಲಿ 9 ವಿಕೆಟ್‌ಗೆ 152 ರನ್ ಗಳಿಸಿದೆ. ಮಳೆಯಿಂದಾಗಿ ಪಂದ್ಯವನ್ನು 19 ಓವರ್‌ಗೆ ಕಡಿತಗೊಳಿಸಲಾಯಿತು.

ಭಾರತದ ವೇಗದ ಬೌಲರ್ ಶಾರ್ದೂಲ್ ಠಾಕೂರ್ 19ನೇ ಓವರ್‌ನ ಸತತ ಎಸೆತಗಳಲ್ಲಿ ಎರಡು ವಿಕೆಟ್ ಸಹಿತ 27 ರನ್ ನೀಡಿ ಒಟ್ಟು 4 ವಿಕೆಟ್ ಉಡಾಯಿಸಿದರು. ಸುಂದರ್(2-21) ಠಾಕೂರ್‌ಗೆ ಉತ್ತಮ ಸಾಥ್ ನೀಡಿದರು. 2.1 ಓವರ್‌ಗಳಲ್ಲಿ 25 ರನ್ ಗಳಿಸಿದ ಗುಣತಿಲಕ(17) ಹಾಗೂ ಮೆಂಡಿಸ್(55 ರನ್, 38 ಎಸೆತ, 3 ಬೌಂಡರಿ, 3 ಸಿಕ್ಸರ್) ಉತ್ತಮ ಆರಂಭ ನೀಡಿದರು. ಈ ಜೋಡಿಯನ್ನು ಶಾರ್ದೂಲ್ ಠಾಕೂರ್ ಬೇರ್ಪಡಿಸಿದರು.

ಕುಸಾಲ್ ಪೆರೇರ (3) ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಆಗ 3ನೇ ವಿಕೆಟ್‌ಗೆ 62 ರನ್ ಜೊತೆಯಾಟ ನಡೆಸಿದ ತರಂಗ(22) ಹಾಗೂ ಮೆಂಡಿಸ್ ತಂಡದ ಸ್ಕೋರನ್ನು 100ರ ಗಡಿ ತಲುಪಿಸಿದರು.

 24 ಎಸೆತಗಳಲ್ಲಿ 22 ರನ್ ಗಳಿಸಿದ ತರಂಗ ಅವರು ವಿಜಯ್ ಶಂಕರ್‌ಗೆ ಕ್ಲೀನ್‌ಬೌಲ್ಡಾದರು. ನಾಯಕ ತಿಸಾರ ಪೆರೇರ 6 ಎಸೆತಗಳಲ್ಲಿ 2 ಸಿಕ್ಸರ್ ಸಹಿತ 15 ರನ್ ಗಳಿಸಿ ಠಾಕೂರ್‌ಗೆ ವಿಕೆಟ್ ಒಪ್ಪಿಸಿದರು. ನಿಧಾನಗತಿಯ ಬೌಲಿಂಗ್ ಕಾಯ್ದುಕೊಂಡ ಕಾರಣಕ್ಕೆ ದಿನೇಶ್ ಚಾಂಡಿಮಾಲ್ 2 ಪಂದ್ಯಗಳಿಂದ ನಿಷೇಧಕ್ಕೆ ಒಳಗಾಗಿದ್ದು, ದಿನೇಶ್ ಅನುಪಸ್ಥಿತಿಯಲ್ಲಿ ಪೆರೇರ ತಂಡದ ನಾಯಕತ್ವವಹಿಸಿಕೊಂಡಿದ್ದಾರೆ.

ಸಂಕ್ಷಿಪ್ತ ಸ್ಕೋರ್

ಶ್ರೀಲಂಕಾ: 19 ಓವರ್‌ಗಳಲ್ಲಿ 152/9

(ಕುಸಾಲ್ ಮೆಂಡಿಸ್ 55, ಶಾರ್ದೂಲ್ ಠಾಕೂರ್ 4-27)

ಭಾರತ: 17.3 ಓವರ್‌ಗಳಲ್ಲಿ 153/4

(ಮನೀಷ್ ಪಾಂಡೆ ಅಜೇಯ 42,ಕಾರ್ತಿಕ್ ಅಜೇಯ 39, ಧನಂಜಯ 2-19)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X