Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಈ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ...

ಈ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ ಇರ್ಫಾನ್ ಖಾನ್

ಊಹಾಪೋಹಗಳಿಗೆ ತೆರೆ ಎಳೆದ ನಟ

ವಾರ್ತಾಭಾರತಿವಾರ್ತಾಭಾರತಿ16 March 2018 4:17 PM IST
share
ಈ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ ಇರ್ಫಾನ್ ಖಾನ್

ಮುಂಬೈ, ಮಾ.16: ತಮ್ಮ ಆರೋಗ್ಯ ಸ್ಥಿತಿಯ ಬಗ್ಗೆ ಎದ್ದಿರುವ ಸಾಕಷ್ಟು ಊಹಾಪೋಹಗಳಿಗೆ ತೆರೆ ಎಳೆದಿರುವ ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್  ಟ್ವೀಟ್ ಒಂದನ್ನು ಮಾಡಿ ತಾವು 'ನ್ಯೂರೋಎಂಡೋಕ್ರೀನ್ ಟ್ಯೂಮರ್'ನಿಂದ ಬಳಲುತ್ತಿರುವುದಾಗಿ ಬಹಿರಂಗ ಪಡಿಸಿದ್ದಾರೆ.

ಈ ಹಿಂದೆ ಮಾರ್ಚ್ 5ರಂದು ಟ್ವೀಟ್ ಮಾಡಿದ್ದ ನಟ ತಾನು ಒಂದು ಅಪರೂಪದ ಕಾಯಿಲೆಯೊಂದರಿಂದ ಬಳಲುತ್ತಿರುವುದಾಗಿ ತಿಳಿಸಿದ್ದರು. ಅದೇ ಸಮಯ ಯಾರೂ ತನ್ನ ಆರೋಗ್ಯ ಸ್ಥಿತಿಯ ಬಗ್ಗೆ ಊಹಾಪೋಹ ಸೃಷ್ಟಿಸದಂತೆ ಹಾಗೂ ಹಾಗೂ ಮುಂದಿನ ಒಂದು ವಾರ ಅಥವಾ ಹತ್ತು ದಿನಗಳೊಳಗೆ ವೈದ್ಯಕೀಯ ತಪಾಸಣೆ ಪ್ರಕ್ರಿಯೆ ಪೂರ್ತಿಗೊಂಡ ನಂತರ ಮತ್ತೆ ತಮ್ಮ ಕಥೆಯನ್ನು ಎಲ್ಲರೊಡನೆ ಶೇರ್ ಮಾಡುವುದಾಗಿ ತಿಳಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಅವರು ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿರುವುದಾಗಿ ವದಂತಿ ಹಬ್ಬಿತ್ತು.

ಅಂತೆಯೇ ಇಂದು ತಮ್ಮ ಆರೋಗ್ಯ ಸ್ಥಿತಿಯ ಬಗ್ಗೆ ಟ್ವೀಟ್ ಮಾಡಿದ ನಟ,  ತಾವು ಮತ್ತೆ ಹೊಸ ಕಥೆಗಳೊಂದಿಗೆ ಬರುವುದಾಗಿ ತಿಳಿಸಿದ್ದಾರೆ. "ಲೈಫ್ ಈಸ್ ಅಂಡರ್ ನೋ ಅಬ್ಲಿಗೇಶನ್ ಟು ಗಿವ್ ಅಸ್ ವಾಟ್ ವಿ ಎಕ್ಸ್ ಪೆಕ್ಟ್'' ಎಂದು ಮಾರ್ಗರೆಟ್ ಮಿಚೆಲ್ ಅವರ ಉಲ್ಲೇಖದೊಂದಿಗೆ ತಮ್ಮ ಟ್ವೀಟ್ ಆರಂಭಿಸಿರುವ ಇರ್ಫಾನ್ "ಅನಿರೀಕ್ಷಿತವಾಗಿರುವುದು ನಮ್ಮ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಕಳೆದ ಕೆಲ ದಿನಗಳಿಂದ ನಾನು ಅರಿತಿದ್ದೇನೆ.  ನನಗೆ  ನ್ಯೂರೋ ಎಂಡೋಕ್ರೀನ್ ಟ್ಯೂಮರ್ ಇದೆ ಎಂಬುದನ್ನು ಅರಗಿಸಿಕೊಳ್ಳುವುದು ಕಷ್ಟಕರವಾಗಿದೆ. ಆದರೆ ನನ್ನ ಸುತ್ತಮುತ್ತ ಇರುವವರ ಪ್ರೀತಿ ಮತ್ತು ಧೈರ್ಯ ಹಾಗೂ  ನನ್ನೊಳಗಿರುವ ಪ್ರೀತಿ ಮತ್ತು ಧೈರ್ಯ  ನನಗೆ ಭರವಸೆಯನ್ನು ನೀಡಿದೆ. ಈ ಪಯಣ ನನ್ನನ್ನು ದೇಶದ ಹೊರಗೆ ಕರೆದೊಯ್ದಿದೆ. ಎಲ್ಲರಿಗೂ ತಮ್ಮ ಹಾರೈಕೆಗಳನು ಕಳುಹಿಸುವಂತೆ ಕೋರುತ್ತಿದ್ದೇನೆ. ಹರಿಯ ಬಿಟ್ಟಂತಹ  ವದಂತಿಗಳ ಬಗ್ಗೆ ಹೇಳುವುದಾದರೆ ನ್ಯೂರೋ ಯಾವತ್ತೂ ಮೆದುಳಿಗೆ ಸಂಬಂಧಿಸಿದ ವಿಚಾರವಲ್ಲ ಹಾಗೂ ಗೂಗಲ್ ಮಾಡುವುದು ಸಂಶೋಧನೆಯ ಅತ್ಯಂತ ಸುಲಭ ವಿಧಾನವಲ್ಲ. ನಾನು ಮತ್ತೆ ಹೊಸ ಕಥೆಗಳೊಂದಿಗೆ ಬರುತ್ತೇನೆಂಬ ಆಶಾಭಾವನೆಯಿದೆ'' ಎಂದಿದ್ದಾರೆ.

ಖಾನ್ ಅವರ ಮುಂದಿನ ಚಿತ್ರ `ಬ್ಲ್ಯಾಕ್ ಮೇಲ್' ಎಪ್ರಿಲ್ 6ರಂದು ಬಿಡುಗಡೆಗೊಳ್ಳಲಿದೆ. ಚಿತ್ರ ತಂಡ ಇರ್ಫಾನ್ ಆರೋಗ್ಯ ಸ್ಥಿತಿಯನ್ನು ಗಮನದಲ್ಲಿರಿಸಿ ಚಿತ್ರ ಬಿಡುಗಡೆಯನ್ನು ಮಂದೂಡಲು ಬಯಸಿತ್ತಾದರೂ ಇರ್ಫಾನ್ ಮಾತ್ರ ಹಾಗೆ ಮಾಡದಂತೆ ಹೇಳಿದ್ದಾರೆಂದು ನಿರ್ದೇಶಕ ಅಭಿನಯ್ ದಿಯೊ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X