Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಂಜಾಬ್‌ನ ಆಪ್ ಅಧ್ಯಕ್ಷ ಮಾನ್ ರಾಜೀನಾಮೆ

ಪಂಜಾಬ್‌ನ ಆಪ್ ಅಧ್ಯಕ್ಷ ಮಾನ್ ರಾಜೀನಾಮೆ

ವಾರ್ತಾಭಾರತಿವಾರ್ತಾಭಾರತಿ16 March 2018 8:52 PM IST
share
ಪಂಜಾಬ್‌ನ ಆಪ್ ಅಧ್ಯಕ್ಷ ಮಾನ್ ರಾಜೀನಾಮೆ

ಚಂಡೀಗಢ,ಮಾ.16: ಪಂಜಾಬ್‌ನ ಶಿರೋಮಣಿ ಅಕಾಲಿದಳದ ನಾಯಕ ಹಾಗೂ ಪಂಜಾಬ್‌ನ ಮಾಜಿ ಸಚಿವ ಬಿಕ್ರಮ್ ಸಿಂಗ್ ಮಂಜಿಥಾ ವಿರುದ್ಧ ಮಾದಕದ್ರವ್ಯ ಜಾಲದಲ್ಲಿ ಶಾಮೀಲಾಗಿದ್ದಾರೆಂಬ ಆರೋಪ ಮಾಡಿದ್ದಕ್ಕಾಗಿ ಅವರಲ್ಲಿ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕ್ಷಮೆಯಾಚಿಸಿದ ಮರುದಿನವೇ ಸಂಗ್ರೂರ್ ಸಂಸದ ಭಗವಂತ್ ಸಿಂಗ್ ಮಾನ್ ಆಪ್ ನ ಪಂಜಾಬ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 ಮಂಜಿಥಾರೊಂದಿಗೆ ದಿಲ್ಲಿ ಮುಖ್ಯಮಂತ್ರಿಯ ಕ್ಷಮಾಯಾಚನೆಗೆ ಪಂಜಾಬ್‌ನಲ್ಲಿರುವ ಪಕ್ಷದ ಶಾಸಕರು ಹಾಗೂ ನಾಯಕರಿಂದಲೂ ತೀವ್ರವಾದ ವಿರೋಧ ವ್ಯಕ್ತವಾಗಿದೆ. ಮಂಜಿಥಾರಲ್ಲಿ ಕೇಜ್ರಿವಾಲ್ ಕ್ಷಮೆಯಾಚನೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಭಗವಂತ್ ಮಾನ್ ಅವರು ಟ್ವಿಟರ್‌ನಲ್ಲಿ ತನ್ನ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ್ದಾರೆ.

  “ಪಂಜಾಬ್ ಎಎಪಿಯ ಅಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ. ಆದರೆ ಪಂಜಾಬ್‌ನ ಡ್ರಗ್ ಮಾಫಿಯಾ ಹಾಗೂ ಎಲ್ಲಾ ವಿಧ ಭ್ರಷ್ಟಾಚಾರಗಳ ವಿರುದ್ಧ ಪಂಜಾಬ್‌ನ ಆಮ್ ಆದ್ಮಿಯಾಗಿ ನನ್ನ ಹೋರಾಟ ಮುಂದುವರಿಯಲಿದೆಯೆಂದು” ಅವರು ಟ್ವೀಟ್ ಮಾಡಿದ್ದಾರೆ.

ಬಿಕ್ರಮ್ ಸಿಂಗ್ ಮಂಜಿಥಾ ಅವರು ಮಾದಕದ್ರವ್ಯ ಮಾರಾಟದಲ್ಲಿ ಶಾಮೀಲಾಗಿದ್ದಾರೆಂಬ ಆರೋಪಗಳನ್ನು ತಾನು ಹೊರಿಸಿದ್ದಕ್ಕಾಗಿ ಕೇಜ್ರಿವಾಲ್ ಗುರುವಾರ ಕ್ಷಮೆಯಾಚಿಸಿದ್ದ ಕೇಜ್ರಿವಾಲ್ ಅವರು ಈ ಆರೋಪಗಳಲ್ಲಿ ಹುರುಳಿಲ್ಲವೆಂದು ತನಗೆ ಮನವರಿಕೆಯಾಗಿರುವುದಾಗಿ ತಿಳಿಸಿದರು.

  ಪಂಜಾಬ್‌ನ ಇತರ ಆಪ್ ನಾಯಕರಿಂದಲೂ ಕೇಜ್ರಿವಾಲ್ ಕ್ಷಮೆಯಾಚನೆಗೆ ಖಂಡನೆ ವ್ಯಕ್ತವಾಗಿದೆ. ಕೇಜ್ರಿವಾಲ್ ಅವರ ಕ್ಷಮೆಯಾಚನೆಯಿಂದ ತನಗೆ ಆಘಾತವಾಗಿರುವುದಾಗಿ ಪಂಜಾಬ್‌ನ ಪ್ರತಿಪಕ್ಷ ನಾಯಕ ಸುಖ್‌ಪಾಲ್ ಸಿಂಗ್ ಖೈರಾ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X