Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಎಂಆರ್‌ಸಿಎಲ್ ನೌಕರರ ವಿರುದ್ಧ ಎಸ್ಮಾ...

ಬಿಎಂಆರ್‌ಸಿಎಲ್ ನೌಕರರ ವಿರುದ್ಧ ಎಸ್ಮಾ ಜಾರಿ ವಿಚಾರ: ತಡೆಯಾಜ್ಞೆಯನ್ನು ವಿಸ್ತರಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ16 March 2018 9:47 PM IST
share
ಬಿಎಂಆರ್‌ಸಿಎಲ್ ನೌಕರರ ವಿರುದ್ಧ ಎಸ್ಮಾ ಜಾರಿ ವಿಚಾರ: ತಡೆಯಾಜ್ಞೆಯನ್ನು ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು, ಮಾ.16: ಬೆಂಗಳೂರು ಮೆಟ್ರೋ ರೈಲು ನಿಗಮ ನೌಕರರ ವಿರುದ್ಧ ಎಸ್ಮಾ ಜಾರಿಗೆ ನೀಡಿರುವ ತಡೆಯಾಜ್ಞೆಯನ್ನು ಹೈಕೋರ್ಟ್ ಮಾ.20ರವರೆಗೆ ವಿಸ್ತರಿಸಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ನೌಕರರ ವಿರುದ್ಧ ಎಸ್ಮಾ ಜಾರಿಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಬಿಎಂಆರ್‌ಸಿಎಲ್ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ಅವರಿದ್ದ ಏಕಸದಸ್ಯ ಪೀಠ, ತಡೆಯಾಜ್ಞೆ ತೆರವುಗೊಳಿಸಲು ನಿರಾಕರಿಸಿತು.

ತದನಂತರ ನೌಕರರ ತಕರಾರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಬಿಎಂಆರ್‌ಸಿಎಲ್ ಪ್ರಧಾನ ಕಾರ್ಯದರ್ಶಿಗೆ ಒಂದು ವಾರ ಸಮಯ ನೀಡಿ ವಿಚಾರಣೆಯನ್ನು ಮಾ.20ಕ್ಕೆ ಮುಂದೂಡಿತು. ಹಾಗೆಯೇ, ಮುಂದಿನ ವಿಚಾರಣೆ ವರೆಗೆ ನೌಕರರ ವಿರುದ್ಧ ಎಸ್ಮಾ ಜಾರಿಗೆ ತಡೆಯಾಜ್ಞೆ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿತು.

ವೇತನ ಹೆಚ್ಚಳ ಮತ್ತು ನೌಕರರ ಸಂಘಟನೆಗೆ ಮಾನ್ಯತೆ ನೀಡುವ ಕುರಿತು ಬಿಎಂಆರ್‌ಸಿಎಲ್ ಮತ್ತು ಸಂಘ ಸದಸ್ಯರ ನಡುವೆ ನಡೆದ ಮಾತುಕತೆ ವಿಫಲವಾಗಿದೆ. ಇದರಿಂದ ನೌಕರರು ಮಾ.22ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಹೀಗಾಗಿ, ನೌಕರರ ವಿರುದ್ಧ ಎಸ್ಮಾ ಜಾರಿ ಮಾಡಲು ಮುಂದಾಗಿದ್ದ ತನ್ನ ಕ್ರಮಕ್ಕೆ ಈಗಾಗಲೇ ನೀಡಿರುವ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಬಿಎಂಆರ್‌ಸಿಎಲ್ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿತ್ತು.

ಪ್ರಕರಣವೇನು: ವೇತನ ಹೆಚ್ಚಳ, ಮೆಟ್ರೋ ಸಿಬ್ಬಂದಿ ಹಾಗೂ ನೌಕರರ ಸಂಘಟನೆಗೆ ಮಾನ್ಯತೆ ನೀಡಲು ಆಗ್ರಹಿಸಿ ಸಂಘವು ಬಿಎಂಆರ್‌ಸಿಎಲ್‌ಗೆ ಮನವಿ ಸಲ್ಲಿಸಿತ್ತು. ನೌಕರರ ಸಂಘದಲ್ಲಿ ಸೆಕ್ಷನ್ ಇಂಜಿನಿಯರ್‌ಗಳು, ಜ್ಯೂನಿಯರ್ ಇಂಜಿನಿಯರ್‌ಗಳು, ಕಸ್ಟಮರ್ ರಿಲೇಷನ್ ಅಧಿಕಾರಿಗಳು, ನಿಲ್ದಾಣ ನಿರ್ವಾಹಕರು, ರೈಲು ಚಾಲಕರನ್ನೂ ಸೇರಿಸಿಕೊಂಡಿರುವ ಕಾರಣ ನೌಕರರ ಸಂಘಕ್ಕೆ ಮಾನ್ಯತೆ ನೀಡಲಾಗದು ಎಂದು ಬಿಎಂಆರ್‌ಸಿಎಲ್ ತಿಳಿಸಿತ್ತು. ಇದರಿಂದ 2017ರ ಜುಲೈನಲ್ಲಿ ಮುಷ್ಕರ ನಡೆಸಲು ಮುಂದಾಗಿದ್ದ ನೌಕರರ ವಿರುದ್ಧ ಎಸ್ಮಾ ಜಾರಿಗೆ ಬಿಎಂಆರ್‌ಸಿಎಲ್ ನಿರ್ಧರಿಸಿತ್ತು.

ಈ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ನೌಕರರ ಸಂಘ, ತನಗೆ ಮಾನ್ಯತೆ ನೀಡಲು ಬಿಎಂಆರ್‌ಸಿಎಲ್‌ಗೆ ನಿರ್ದೇಶಿಸಬೇಕು. ಹಾಗೆಯೇ, ಎಸ್ಮಾ ಜಾರಿಗೆ ತಡೆಯಾಜ್ಞೆ ನೀಡಲು ಕೋರಿದ್ದರು. ಎಸ್ಮಾ ಜಾರಿಗೆ ಹೈಕೋರ್ಟ್ 2017ರ ಅ.7ರಂದು ತಡೆಯಾಜ್ಞೆ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X