Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು: ಭಿನ್ನಮತ ಮರೆತು ಒಂದಾದ...

ತುಮಕೂರು: ಭಿನ್ನಮತ ಮರೆತು ಒಂದಾದ ಬಿಜೆಪಿಯ ಜಿ.ಎಸ್.ಬಸವರಾಜು, ಎಸ್.ಶಿವಣ್ಣ

ವಾರ್ತಾಭಾರತಿವಾರ್ತಾಭಾರತಿ16 March 2018 10:05 PM IST
share
ತುಮಕೂರು: ಭಿನ್ನಮತ ಮರೆತು ಒಂದಾದ ಬಿಜೆಪಿಯ ಜಿ.ಎಸ್.ಬಸವರಾಜು, ಎಸ್.ಶಿವಣ್ಣ

ತುಮಕೂರು.ಮಾ.16: ಕಳೆದ ಐದು ವರ್ಷಗಳಿಂದ ತಮ್ಮೊಳಗಿನ ಭಿನ್ನಾಭಿಪ್ರಾಯದಿಂದ ಬಣಗಳಾಗಿ ವಿಂಗಡಿಸಲ್ಪಟ್ಟು ಅಧಿಕಾರ ಕಳೆದುಕೊಂಡಿದ್ದ ಬಿಜೆಪಿ ನಾಯಕರುಗಳಾದ ಜಿ.ಎಸ್.ಬಸವರಾಜು ಮತ್ತು ಸೊಗಡು ಶಿವಣ್ಣ ತಮ್ಮ ಭಿನ್ನಾಭಿಪ್ರಾಯ ಮರೆತು ಒಂದಾಗಿದ್ದು, ಚುನಾವಣೆ ಮುನ್ನ ನಡೆದಿರುವ ಒಗ್ಗಟ್ಟಿನ ಮಂತ್ರ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹರುಷ ತಂದಿದೆ.

ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದು, ಎರಡು ಬಾರಿ ಸಂಸದರಾಗಿ ಅಧಿಕಾರ ಅನುಭವಿಸಿದ ನಂತರ 2008ರ ಚುನಾವಣೆ ವೇಳೆ ಜಾತಿಯ ಹೆಸರಿನಲ್ಲಿ ಬಿ.ಎಸ್.ವೈ ಆಶಯದಂತೆ ಬಿಜೆಪಿ ಸೇರಿ ಸಂಸದರಾಗಿದ್ದ ಜಿ.ಎಸ್.ಬಸವರಾಜು ಮತ್ತು ಮಾಜಿ ಸಚಿವ ಎಸ್.ಶಿವಣ್ಣ ಅವರ ನಡುವಿನ ಅಂತರಿಕ ಕಿತ್ತಾಟ ಇಂದುನಿನ್ನೆಯದಲ್ಲ. ಇಂದಿರಾಗಾಂಧಿ ಪ್ರಧಾನಿಯಾಗಿದ್ದ ವೇಳೆ ಜಾರಿಗೆ ತಂದ ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಜೈಲಿಗೆ ಹೋಗಿದ್ದ ಮಾಜಿ ಸಚಿವ ಎಸ್.ಶಿವಣ್ಣ, ಅಂದಿನಿಂದಲೂ ಜಿ.ಎಸ್.ಬಸವರಾಜು ಅವರನ್ನು ವಿರೋಧಿಸುತ್ತಿದ್ದರು. ಇಬ್ಬರು ಲಿಂಗಾಯತ ಸಮುದಾಯಕ್ಕೆ ಸೇರಿದ ಮುಖಂಡರಾದರೂ ಪರಸ್ವರ ಮಾತುಕತೆ ಇರಲಿಲ್ಲ. ಚುನಾವಣೆಗಳಲ್ಲಿ ಬದ್ದ ದ್ವೇಷಿಗಳಾಗಿದ್ದರು.

ಬಿಜೆಪಿಯಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆಯಾದ ಕೂಡಲೇ ತಾನು ಕಾಂಗ್ರೆಸ್ ಪಕ್ಷದಲ್ಲಿ ಅನುಭವಿಸಿದ್ದ ಎಲ್ಲಾ ಅಧಿಕಾರವನ್ನು ಮರೆತು ಬಿಜೆಪಿ ಸೇರಿದ ಜಿ.ಎಸ್.ಬಸವರಾಜು, ನಂತರ ಬಿ.ಎಸ್.ವೈ ಅವರರೊಂದಿಗೆ ಕೆ.ಜೆ.ಪಿ ಸೇರಿದ ಪರಿಣಾಮ 2013ರ ಚುನಾವಣೆಯಲ್ಲಿ ಜಿ.ಎಸ್.ಬಿ ಅವರ ಮಗ ಜೋತಿ ಗಣೇಶ್ ಕೆ.ಜೆಪಿ ಅಭ್ಯರ್ಥಿಯಾಗಿ ಲಿಂಗಾಯತ ಮತಗಳು ವಿಭಜನೆಯಾಗಿ ಐದನೇ ಬಾರಿ ವಿಧಾನಸಭೆ ಪ್ರವೇಶಿಸುವ ಎಸ್.ಶಿವಣ್ಣ ಕನಸು ಭಗ್ನವಾಗಿತ್ತು. ನಂತರ ಜಿ.ಎಸ್.ಬಸವರಾಜು ಮತ್ತು ಎಸ್.ಶಿವಣ್ಣ ಇಬ್ಬರ ನಡುವಿನ ದ್ವೇಷ ಮತ್ತಷ್ಟು ಉಲ್ಬಣಿಸಿತ್ತು.

ಜಿ.ಎಸ್.ಬಸವರಾಜು ಬಿ.ಎಸ್.ವೈ ಬಣದೊಂದಿಗೆ ಗುರುತಿಸಿಕೊಂಡರೆ, ಎಸ್.ಶಿವಣ್ಣ ಈಶ್ವರಪ್ಪ ಬಣದಲ್ಲಿ ಗುರುತಿಸಿಕೊಂಡು  
ಪರಸ್ವರ ಬದ್ದ ವೈರಿಗಳಂತೆ ಬದುಕುತಿದ್ದರು. ಇದರ ಫಲವಾಗಿ ತುಮಕೂರು ನಗರಪಾಲಿಕೆ ಚುನಾವಣೆಯಲ್ಲಿಯೂ ಬಿಜೆಪಿ ಅಧಿಕಾರದಿಂದ ದೂರ ಉಳಿಯಬೇಕಾಯಿತು. ಇದು ಒಂದು ರೀತಿಯಲ್ಲಿ ಲಿಂಗಾಯತ ಸಮುದಾಯದಲ್ಲಿ ಸಾಕಷ್ಟು ಬೇಸರ ಮೂಡಿಸಿತ್ತು. ಇಬ್ಬರು ನಾಯಕರನ್ನು ಒಂದುಗೂಡಿಸುವ ಪ್ರಯತ್ನ ನಡೆಸಿದ್ದರು ಫಲ ನೀಡಿರಲಿಲ್ಲ.

ಆದರೆ ಗುರುವಾರ ನಗರದ ವೀರಶೈವ ಸಮಾಜದ ಏರ್ಪಡಿಸಿದ್ದ ಮುಖಂಡರ ಸಭೆಯಲ್ಲಿ ಇಬ್ಬರು ನಾಯಕರು ಭಾಗವಹಿಸಿದ್ದರು. ಈ ವೇಳೆ ಸಮಾಜದ ಮುಖಂಡರಾದ ಟಿ.ಬಿ.ಶೇಖರ್,ಚಂದ್ರಮೌಳಿ ಸೇರಿದಂತೆ ಹಿರಿಯ ಮುಖಂಡರು ಇಬ್ಬರು ನಾಯಕರು ತಮ್ಮ ವೈಮನಸ್ಸು ಮರೆತು ಒಂದಾದರೆ ಮಾತ್ರ ಅಧಿಕಾರ ಹಿಡಿಯಲು ಸಾಧ್ಯ. ಇಲ್ಲದಿದ್ದರೆ ಅಧಿಕಾರ ಕೈತಪ್ಪಲಿದೆ. ಟಿಕೆಟ್ ಯಾರಿಗೆ ನೀಡಲಿ ಎಲ್ಲರೂ ಒಟ್ಟಿಗೆ ಕೆಲಸ ಮಾಡೋಣ. ಹಲವು ವರ್ಷಗಳಿಂದ ಎಂ.ಪಿ, ಎಂ.ಎಲ್.ಎ. ಎರಡು ಸ್ಥಾನಗಳು ವೀರಶೈವ, ಲಿಂಗಾಯತ ಸಮುದಾಯಕ್ಕೆ ಮೀಸಲಾಗಿದ್ದವು. ನಿಮ್ಮಿಬ್ಬರ ವೈಮನಸ್ಸಿನಿಂದ ಎರಡನ್ನು ಕಳೆದುಕೊಳ್ಳಬೇಕಾಗಿತ್ತು. ಈಗಲಾದರೂ ಒಂದಾಗದಿದ್ದರೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಕೆ ನೀಡಿದ ಪರಿಣಾಮ ಇಬ್ಬರು ನಾಯಕರು ಪರಸ್ವರ ಹಸ್ತಲಾಗವ ಮಾಡಿ, ಸಮಾಜದ ಮುಖಂಡರು ನೀಡಿದ ಹಾರವನ್ನು ಬದಲಾಯಿಸಿಕೊಳ್ಳುವ ಮೂಲಕ ತಮ್ಮ ನಡುವಿನ ದ್ವೇಷಕ್ಕೆ ಇತಿಶ್ರಿ ಹಾಡಿದ್ದಾರೆ.

ಹಾವು, ಮುಂಗುಸಿಯಂತಿದ್ದ ಇಬ್ಬರು ನಾಯಕರು ಒಂದಾಗಿರುವುದು ವೀರಶೈವ, ಲಿಂಗಾಯತ ಸಮುದಾಯದಲ್ಲಿ ಹೊಸ ಹುಮ್ಮಸ್ಸು ತಂದಿದ್ದು, ಮುಂದಿನ ದಿನದಲ್ಲಿ ಇದು ಯಾವ ರೀತಿ ಫಲಿತಾಂಶ ನೀಡಲಿದೆ ಎಂಬುದು ಕುತೂಹಲದ ವಿಷಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X