Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮನುಷ್ಯನಲ್ಲಿ ಪ್ರೀತಿ ವಿಶ್ವಾಸ...

ಮನುಷ್ಯನಲ್ಲಿ ಪ್ರೀತಿ ವಿಶ್ವಾಸ ಇಲ್ಲದಿದ್ದರೆ ಧರ್ಮಗಳ ಬಗ್ಗೆ ಮಂದಹಾಸ ಮೂಡಲು ಸಾಧ್ಯವಿಲ್ಲ: ನಿರ್ಮಲಾನಂದನಾಥ ಸ್ವಾಮೀಜಿ

ಆತ್ಮಲಿಂಗೇಶ್ವರ ಕ್ಷೇತ್ರದಲ್ಲಿ ಸರ್ವಧರ್ಮ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ16 March 2018 11:11 PM IST
share
ಮನುಷ್ಯನಲ್ಲಿ ಪ್ರೀತಿ ವಿಶ್ವಾಸ ಇಲ್ಲದಿದ್ದರೆ ಧರ್ಮಗಳ ಬಗ್ಗೆ ಮಂದಹಾಸ ಮೂಡಲು ಸಾಧ್ಯವಿಲ್ಲ: ನಿರ್ಮಲಾನಂದನಾಥ ಸ್ವಾಮೀಜಿ

ಮಂಡ್ಯ, ಮಾ.16: ಮನುಷ್ಯನಲ್ಲಿ ಪ್ರೀತಿ ವಿಶ್ವಾಸ ಇಲ್ಲದಿದ್ದರೆ ಧರ್ಮಗಳ ಬಗ್ಗೆ ಮಂದಹಾಸ ಮೂಡಲು ಸಾಧ್ಯವಿಲ್ಲ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥಸ್ವಾಮೀಜಿ ಹೇಳಿದ್ದಾರೆ.

ಮದ್ದೂರು ತಾಲೂಕು ಹನುಮಂತನಗರದ ಆತ್ಮಲಿಂಗೇಶ್ವರ ಕ್ಷೇತ್ರದ ಬೆಳ್ಳಿಹಬ್ಬ ಆಚರಣೆಯ ಅಂಗವಾಗಿ ಶುಕ್ರವಾರ ನಡೆದ ಸರ್ವಧರ್ಮ ಸಮ್ಮೇಳನದ ದಿವ್ಯ ಸಾನ್ನಿಧ್ಯವಹಿಸಿ ಅವರು ಆಶೀರ್ವಚನ ನೀಡಿದರು. ಮನುಷ್ಯನು ತಪ್ಪು ಕಲ್ಪನೆಯಿಂದ ಹೊರಬರಬೇಕು. ಪ್ರೀತಿ ವಿಶ್ವಾಸವನ್ನು ಗಳಿಸಬೇಕು. ಅಂತರಾಳದಲ್ಲಿರುವ ಕಲ್ಮಶವನ್ನು ಶುದ್ಧೀಕರಣಗೊಳಿಸಬೇಕು. ಶಾಂತಿ ಮತ್ತು ಸಹಬಾಳ್ವೆಯಿಂದ ಎಲ್ಲರೂ ಬದುಕಬೇಕು ಎಂದು ಅವರು ಕರೆ ನೀಡಿದರು. 

ಜಗತ್ತಿನಲ್ಲಿ ಯಾವುದೇ ಪ್ರತ್ಯೇಕ ಧರ್ಮವಿಲ್ಲ. ಎಲ್ಲವೂ ಮನುಷ್ಯ ಸೃಷ್ಠಿಮಾಡಿಕೊಂಡಿದ್ದಾನೆ. ಪ್ರಪಂಚದಲ್ಲಿ ಇರುವುದು ಒಂದೇ ಧರ್ಮ. ಮಾಜಿ ಸಂಸದ ಜಿ.ಮಾದೇಗೌಡರು ಸರ್ವ ಧರ್ಮ ಸಮ್ಮೇಳನ ಮಾಡಿರುವುದು ಶ್ಲಾಘನೀಯ ಎಂದರು.

ಮೈಸೂರಿನ ಉರಿಲಿಂಗ ಪೆದ್ದಿ ಮಹಾಸಂಸ್ಥಾನ ಮಠದ ಜ್ಞಾನಪ್ರಕಾಶ್ ಮಹಾಸ್ವಾಮಿ ಮಾತನಾಡಿ, ಆಕಾರದಲ್ಲಿ ಮನುಷ್ಯರಾಗದೇ ಆಚಾರಗಳಲ್ಲಿ ಮನುಷ್ಯರಾಗಬೇಕು. ಮನುಷ್ಯನಿಗೆ ಯಾವುದೇ ಜಾತಿ ಧರ್ಮವಿಲ್ಲ. ಆದರೂ ಸಹ ಸ್ವಾಥಕ್ಕಾಗಿ ಅವುಗಳು ಕಾರ್ಯರೂಪದಲ್ಲಿವೆ ಎಂದು ವಿಷಾದಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಸಂಸದ ಡಾ.ಜಿಮಾದೇಗೌಡ ಮಾತನಾಡಿ, ಜಾತಿ, ಧರ್ಮಗಳಲ್ಲಿ ವಿಷ ಬೀಜ ಬಿತ್ತುವ ಕೆಲಸದಿಂದ ಜಗತ್ತು ವಿನಾಶದ ಅಂಚಿಗೆ ತಲುಪುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಯಾದಗಿರಿ ಜಿಲ್ಲೆಯ ಸಹಪುರದ ವಿಶ್ವಕರ್ಮ ಏಕದಂಡಿಗ ಮಠದ ಸರಸ್ವತಿ ಪೀಠದ ಕಾಳಅತ್ಯೇಂದ್ರ ಮಹಾಸ್ವಾಮಿ, ಬೆಂಗಳೂರು ಮಹಾಭೋದಿ ಬ್ರಹ್ಮತಿಷ್ಠಾಚಾರ್ಯ, ಹಿರಿಯೂರು ಆದಿಜಾಂಬವ ಮಠದ ಷಡಕ್ಷರಮುನಿ ಮಹಾಸ್ವಾಮಿ, ಮಂಗಳೂರು ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮುಹಮದ್ ಕುನ್ಹಿ ಮಾತನಾಡಿದರು. ವಿವಿಧ ಮಠಾಧೀಶರು ಹಾಗೂ ಮಾಜಿ ಶಾಸಕ ಮಧು ಜಿ.ಮಾದೇಗೌಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X