Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಕ್ಕೆಹಳ್ಳಿ ಫಿಶ್‌ಮಿಲ್ ಸಮಸ್ಯೆ...

ಕುಕ್ಕೆಹಳ್ಳಿ ಫಿಶ್‌ಮಿಲ್ ಸಮಸ್ಯೆ ಪರಿಹರಿಸದಿದ್ದರೆ ಚುನಾವಣೆ ಬಹಿಷ್ಕಾರ

ಪುಣ್ಚೂರು, ಚೋಳೆಬೆಟ್ಟು, ಬಾಯರ್‌ಬೆಟ್ಟು ಗ್ರಾಮಸ್ಥರ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ19 March 2018 5:42 PM IST
share
ಕುಕ್ಕೆಹಳ್ಳಿ ಫಿಶ್‌ಮಿಲ್ ಸಮಸ್ಯೆ ಪರಿಹರಿಸದಿದ್ದರೆ ಚುನಾವಣೆ ಬಹಿಷ್ಕಾರ

ಉಡುಪಿ, ಮಾ.19: ಕುಕ್ಕೆಹಳ್ಳಿ ಗ್ರಾಪಂ ವ್ಯಾಪ್ತಿಯ ಬೆಳ್ಳಂಪಳ್ಳಿ ಗ್ರಾಮದ ಪುಣ್ಚೂರಿನಲ್ಲಿರುವ ಮೀನು ಸಂಸ್ಕರಣಾ ಘಟಕದ ತ್ಯಾಜ್ಯದಿಂದ ಸ್ಥಳೀಯ ಮನೆಗಳ ಬಾವಿಗಳ ನೀರು ಕುಲುಷಿತಗೊಂಡಿದ್ದು, ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪುಣ್ಚೂರು, ಚೋಳೆಬೆಟ್ಟು, ಬಾಯರ್‌ಬೆಟ್ಟು ಗ್ರಾಮಸ್ಥರು, ಸಮಸ್ಯೆ ಬಗೆಹರಿಸದಿದ್ದರೆ ಮುಂದಿನ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕುಡಿಯುವ ನೀರಿನ ಮಾಲಿನ್ಯ ಮಾಡುತ್ತಿರುವ ಪುಣ್ಚೂರಿನ ಕರಾವಳಿ ಫ್ರೀಜರ್ಸ್‌ ಆ್ಯಂಡ್ ಎಕ್ಸ್‌ಪೋರ್ಟ್ ಮೀನು ಸಂಸ್ಕರಣ ಘಟಕವನ್ನು ಮುಚ್ಚುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ನೆಲಜಲ ಪರಿಸರ ಸಂರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಗ್ರಾಮಸ್ಥರು ಕುಕ್ಕೆಹಳ್ಳಿ ಗ್ರಾಪಂ ಕಚೇರಿ ಎದುರು ಸೋಮವಾರ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕುಕ್ಕೆಹಳ್ಳಿಯ ಮರಾಠಿ ಮುಖಂಡ ಸಂಜೀವ ನಾಯ್ಕ ಚೋಳೆಬೆಟ್ಟು ‘2011ರಲ್ಲಿ ಸ್ಥಾಪನೆಗೊಂಡಿರುವ ಈ ಘಟಕ ದಿಂದ ಸುತ್ತಲಿನ ಗ್ರಾಮಸ್ಥರ ಮನೆಗಳ ಬಾವಿ ನೀರು ಹಾಳಾಗಿದ್ದು, ಹಲವು ಮಂದಿ ವಿವಿಧ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಈ ಸಮಸ್ಯೆಯಿಂದ ಅಲ್ಲಿನ ಶೇ.90ರಷ್ಟಿರುವ ಎಸ್‌ಸಿಎಸ್‌ಟಿ ಸಮುದಾಯದವರು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಸೇರಿದಂತೆ ಎಲ್ಲ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ’ ಎಂದು ಆರೋಪಿಸಿದರು.

ಎರಡೂ ರಾಜಕೀಯ ಪಕ್ಷಗಳ ಜನಪ್ರತಿನಿಧಿಗಳು ಇಲ್ಲಿನ ಸಮಸ್ಯೆಗೆ ಈವರೆಗೆ ಸ್ಪಂದಿಸಿಲ್ಲ. ಈ ಬಾರಿ ಇಲ್ಲಿನ ಸಮಸ್ಯೆ ಪರಿಹರಿಸದಿದ್ದರೆ ಕಾಪು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಮಲಮಜಲು ಪುಣ್ಚೂರು, ಚೋಳೆಬೆಟ್ಟು ಹಾಗೂ ಉಡುಪಿ ಕ್ಷೇತ್ರ ವ್ಯಾಪ್ತಿಯ ಬಾಯರ್‌ಬೆಟ್ಟುವಿನ ಸುಮಾರು 2000 ಮತದಾರರು ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ ಎಂದರು.

‘ಕಜ್ಜಿ, ಅಲರ್ಜಿ ಕಾಯಿಲೆಗೆ ಹಲವು ಸಮಯದಿಂದ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ರಕ್ತ ಪರೀಕ್ಷೆ ಮಾಡಿ ವರದಿ ನೀಡಿದ್ದಾರೆ. ಅದರಲ್ಲಿ ಈ ಸಮಸ್ಯೆ ಕುಡಿಯುವ ನೀರಿನಿಂದ ಬಂದಿರುವುದಾಗಿ ಹೇಳಿದ್ದಾರೆ. ಇದಕ್ಕೆಲ್ಲ ಫಿಶ್‌ಮಿಲ್‌ನ ತ್ಯಾಜ್ಯ ನೀರೆ ಕಾರಣ. ಇದೀಗ ನನ್ನ ಮಗಳಿಗೂ ಸಮಸ್ಯೆ ಕಾಡುತ್ತಿದೆ’ ಎಂದು ಪುಣ್ಚೂರಿನ ಪುಷ್ಪ ನಾಯ್ಕ್ ದೂರಿದರು.

‘ಪರಿಸರದ ನೀರು ಹಾಳಾಗಿ ಮಳೆಗಾಲದಲ್ಲಿ ತುಂಬಾ ತೊಂದರೆಯಾಗುತ್ತಿದೆ. ಕೃಷಿ ಹಾಗೂ ಹೈನುಗಾರಿಕೆಗೂ ಇದರ ಪರಿಣಾಮ ತಟ್ಟಿದೆ. ಜಾನುವಾರುಗಳು ಕಲುಷಿತ ನೀರು ಕುಡಿದು ರೋಗಕ್ಕೆ ತುತ್ತಾಗಿವೆ. ಕಳೆದ ಏಳು ವರ್ಷಗಳಿಂದ ಈ ಸಮಸ್ಯೆಯನ್ನು ಎದುರಿಸಿಕೊಂಡು ಬರುತ್ತಿದ್ದೇವೆ’ ಎಂದು ಆಶಾ ಶೆಟ್ಟಿ ತಮ್ಮ ಅಳಲನ್ನು ತೋಡಿಕೊಂಡರು.

ಬಳಿಕ ಗ್ರಾಪಂಗೆ ಮನವಿ ಸಲ್ಲಿಸಿದ ಧರಣಿನಿರತರು, ಘಟಕದ ಪಂಚಾಯತ್ ನೀಡಿರುವ ಪರವಾನಿಗೆ, ವಿದ್ಯುತ್ ಸಂಪರ್ಕ ನೀಡಲು ನಿರಾಕ್ಷೇಪಣಾ ಪತ್ರಗಳನ್ನು ಪುನರ್‌ಪರಿಶೀಲಿಸಬೇಕು. ಸರಕಾರಿ ಜಾಗದ ಅತಿಕ್ರಮಣವನ್ನು ಪರಿಶೀಲನೆ ಮಾಡಬೇಕು. ಸಾರ್ವಜನಿಕ ಕುಡಿಯುವ ನೀರಿನ ಬಾವಿ ಹಾಗೂ ಹೊಳೆಯ ನೀರನ್ನು ಪರೀಕ್ಷೆಗೊಳಪಡಿಸಿ ವರದಿ ನೀಡಬೇಕೆಂದು ಒತ್ತಾಯಿಸಿದರು.

ಧರಣಿಯಲ್ಲಿ ವೇದಿಕೆಯ ರಾಜ್ಯಾಧ್ಯಕ್ಷೆ ಶ್ರೀಲತಾ ಶೆಟ್ಟಿ, ದಲಿತ ಮುಖಂಡ ಅಂಬಲಪಾಡಿ ಉಮೇಶ್ ಕುಮಾರ್, ನಿತ್ಯಾನಂದ ಶೆಟ್ಟಿ, ಗ್ರಾಮದ ಹಿರಿಯ ರಾಮಚಂದ್ರ ಭಟ್, ಚೇರ್ಕಾಡಿ ಗದ್ದಿಗೆ ಅಮ್ಮನವರ ದೇವಸ್ಥಾನದ ಅಧ್ಯಕ್ಷ ಗಣೇಶ್ ನಾಯ್ಕ, ಕೆ.ಕೆ.ನಾಯ್ಕ ಬಾರಕೂರು, ಚಿತ್ತರಂಜನ್‌ದಾಸ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

ಬಾವಿ ನೀರು ಕಲುಷಿತ: ಗ್ರಾಪಂ ಅಧ್ಯಕ್ಷೆ
ಸಾರ್ವಜನಿಕರಿಂದ ಬಂದ ದೂರಿನಂತೆ ಸ್ಥಳ ಪರಿಶೀಲನೆ ಮಾಡಿದ್ದೇವೆ. ಇಲ್ಲಿ ಗ್ರಾಮಸ್ಥರ ಬಾವಿಗಳ ನೀರು ಹಾಳಾಗಿರುವುದು ಕಂಡುಬಂದಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೆ ಗ್ರಾಪಂನಿಂದ ಪತ್ರ ಬರೆಯಲಾಗಿದೆ ಎಂದು ಕುಕ್ಕೆಹಳ್ಳಿ ಗ್ರಾಪಂ ಅಧ್ಯಕ್ಷೆ ಆಶಾ ಲತಾ ಶೆಟ್ಟಿ ತಿಳಿಸಿದ್ದಾರೆ.

ಫಿಶ್‌ಮಿಲ್ ಸಮಸ್ಯೆ ಕುರಿತು ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಪರಿಸರ ಇಲಾಖೆಗೆ ಪತ್ರ ಬರೆಯಲಾಗಿದ್ದು, ಎರಡು ತಿಂಗಳ ಹಿಂದೆ ಪರಿಸರ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಫಿಶ್‌ಮಿಲ್ ನಲ್ಲಿರುವ ಶುದ್ಧೀಕರಣ ಘಟಕವು ಸಾಮರ್ಥ್ಯ ಕಳೆದುಕೊಂಡ ಪರಿಣಾಮ ಬಾವಿ ಗಳ ನೀರು ಹಾಳಾಗಿದೆ ಎಂದು ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತಿ ಶೆಟ್ಟಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X