Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಥಮ ಪಿಯುಸಿ ಆನ್‌ಲೈನ್ ಫಲಿತಾಂಶ ಪ್ರಕಟ

ಪ್ರಥಮ ಪಿಯುಸಿ ಆನ್‌ಲೈನ್ ಫಲಿತಾಂಶ ಪ್ರಕಟ

ದ.ಕ.ಜಿಲ್ಲೆಯಲ್ಲಿ ಶೇ.90.5 ಸಾಧನೆ

ವಾರ್ತಾಭಾರತಿವಾರ್ತಾಭಾರತಿ19 March 2018 6:18 PM IST
share
ಪ್ರಥಮ ಪಿಯುಸಿ ಆನ್‌ಲೈನ್ ಫಲಿತಾಂಶ ಪ್ರಕಟ

ಮಂಗಳೂರು, ಮಾ.19: ಫೆಬ್ರವರಿಯಲ್ಲಿ ನಡೆದ ಪ್ರಥಮ ಪಿಯುಸಿ ಪರೀಕ್ಷೆಯ ಫಲಿತಾಂಶವು ಸೋಮವಾರ ಜಿಲ್ಲಾದ್ಯಂತ ಆನ್‌ಲೈನ್‌ನಲ್ಲಿ ಪ್ರಕಟಗೊಂಡಿದೆ. ಇದು ರಾಜ್ಯದಲ್ಲೇ ಪ್ರಥಮ ಎಂಬ ಇತಿಹಾಸ ಬರೆದಿದೆ. ಈವರೆಗೆ ರಾಜ್ಯದ ಯಾವ ಜಿಲ್ಲೆಯಲ್ಲೂ ಕೂಡ ಪ್ರಥಮ ಪಿಯುಸಿ ಪರೀಕ್ಷೆಯು ಆನ್‌ಲೈನ್‌ನಲ್ಲಿ ಪ್ರಕಟಗೊಂಡಿಲ್ಲ. ಮೊದಲು ಆನ್‌ಲೈನ್‌ನಲ್ಲಿ ಪ್ರಕಟಿಸಿದ ಹೆಗ್ಗಳಿಕೆ ದ.ಕ.ಜಿಲ್ಲೆಗೆ ಸಂದಿದೆ.

ಜಿಲ್ಲೆಯಲ್ಲಿ ಪರೀಕ್ಷೆ ಬರೆದ 38,306 ವಿದ್ಯಾರ್ಥಿಗಳ ಪೈಕಿ 34,496 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿರುತ್ತಾರೆ. ಅದರಲ್ಲಿ 16,779 ಹುಡುಗರು ಹಾಗೂ 17717 ಹುಡುಗಿಯರು ಸೇರಿದ್ದಾರೆ, ಉತ್ತೀರ್ಣರಾದ ವಿದ್ಯಾರ್ಥಿಗಳ ಪೈಕಿ 6,009 ಮಂದಿ ವಿಶಿಷ್ಟ ಶ್ರೇಣಿ, 14,035 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಈ ಪೈಕಿ ಜಿಲ್ಲೆಯು ಶೇ.90.5 ಫಲಿತಾಂಶ ಪಡೆಯಲು ಸಫಲವಾಗಿದೆ.

ಕಲಾ ವಿಭಾಗದಿಂದ 4,761 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 3,929 ಮಂದಿ ಉತ್ತೀರ್ಣರಾಗಿ ಶೇ.82.52 ಫಲಿತಾಂಶ ದಾಖಲಿಸಿದರೆ, ವಾಣಿಜ್ಯ ವಿಭಾಗದ 16,104 ವಿದ್ಯಾರ್ಥಿಗಳಲ್ಲಿ 14,154 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ.87.89 ಹಾಗೂ ವಿಜ್ಞಾನ ವಿಭಾಗದ 17,440 ವಿದ್ಯಾರ್ಥಿಗಳಲ್ಲಿ 16,413 ಮಂದಿ ಉತ್ತೀರ್ಣರಾಗಿ ಶೇ.94.11 ಫಲಿತಾಂಶ ಪಡೆದಿರುತ್ತಾರೆ. 30 ಪುನರಾವರ್ತಿತ ವಿದ್ಯಾರ್ಥಿಗಳಲ್ಲಿ 20 ಮಂದಿ ತೇರ್ಗಡೆ ಹೊಂದಿದ್ದಾರೆ.

ಜಿಲ್ಲೆಯಲ್ಲಿ ಕಲಾ ವಿಭಾಗದಿಂದ ವಿವೇಕಾನಂದ ಪಿಯು ಕಾಲೇಜಿನ ರುಚಿತಾ ಹೆಗ್ಡೆ (576 ಅಂಕ) ಪ್ರಥಮ. ಸಂತ ಆಗ್ನೆಸ್ ಕಾಲೇಜಿನ ಬಿಂದು (575) ದ್ವಿತೀಯ, ಬಂಟ್ವಾಳ ಎಸ್‌ವಿಎಸ್ ಪಿಯು ಕಾಲೇಜ್‌ನ ಲಿಖಿತಾ ಜಿ.ಎನ್(572 ಅಂಕ) ತೃತೀಯ ಸ್ಥಾನಿಯಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಬಂಟ್ವಾಳ ಎಸ್‌ವಿಎಸ್ ಪಿಯು ಕಾಲೇಜ್‌ನ ಅಶ್ವಿನಿ ಬಿ. (599 ಅಂಕ) ಪ್ರಥಮ, ಶ್ರೀ ರಾಮಕುಂಜೇಶ್ವರ ಕಾಲೇಜಿನ ಶಾರಧಿ ಕೆ.ಎಸ್. (597ಅಂಕ) ದ್ವಿತೀಯ, ಹಿರಾ ಮಹಿಳಾ ಸಂಯುಕ್ತ ಪದವಿ ಪೂರ್ವ ಕಾಲೇಜ್‌ನ ಉಝ್ರಿ ಕೈರುನ್ನೀಸಾ (596) ತೃತೀಯ ಸ್ಥಾನಗಳಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪಿಯು ಕಾಲೇಜ್‌ನ ಕಾರ್ತಿಕ್ ವಿ.ಪೈ (596 ಅಂಕ), ಎಕ್ಸ್ ಪರ್ಟ್ ಕಾಲೇಜಿನ ಅಥರ್ವ ಎನ್. ಪಿಳ್ಳೆ (596) ಅಂಕಗಳೊಂದಿಗೆ ಪ್ರಥಮ, ಆಳ್ವಾಸ್ ಕಾಲೇಜಿನ ಎಸ್. ದರ್ಶನ್ ಸಮರ್ಥ್ (595 ಅಂಕ) ಹಾಗೂ ಕೆನರಾ ಕಾಲೇಜಿನ ಸ್ಮೃತಿ ತಿಲಾಕ್ (595 ಅಂಕ) ದ್ವಿತೀಯ, ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನ ಮೋಕ್ಷಿತ್ ಹೆಗ್ಡೆ (594 ಅಂಕ ) ತೃತೀಯ ಸ್ಥಾನ ಗಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X