Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭಾರತದಲ್ಲಿ ರಸ್ತೆ ಅಪಘಾತದಿಂದ ವರ್ಷದಲ್ಲಿ...

ಭಾರತದಲ್ಲಿ ರಸ್ತೆ ಅಪಘಾತದಿಂದ ವರ್ಷದಲ್ಲಿ 1.3 ಲಕ್ಷ ಜನರ ಸಾವು !

ವಾರ್ತಾಭಾರತಿವಾರ್ತಾಭಾರತಿ19 March 2018 7:09 PM IST
share
ಭಾರತದಲ್ಲಿ ರಸ್ತೆ ಅಪಘಾತದಿಂದ ವರ್ಷದಲ್ಲಿ 1.3 ಲಕ್ಷ ಜನರ ಸಾವು !

ಬೆಂಗಳೂರು, ಮಾ.19: ಭಾರತದಲ್ಲಿನ ರಸ್ತೆ ಬಳಕೆಯಿಂದ ಪ್ರತಿವರ್ಷ ದೇಶದಲ್ಲಿ 1.30 ಲಕ್ಷ ಜನರು ರಸ್ತೆ ಅಪಘಾತದಿಂದ ಸಾವಿಗೀಡಾಗುತ್ತಿದ್ದಾರೆ ಎಂದು ಬ್ರೈನ್ಸ್ ಸಂಸ್ಥೆಯ ಸಂಸ್ಥಾಪಕ ಡಾ.ಎನ್.ಕೆ.ವೆಂಕಟರಮಣ ವಿಷಾದ ವ್ಯಕ್ತಪಡಿಸಿದ್ದಾರೆ.

‘ವಿಶ್ವ ತಲೆಯ ಆಘಾತ ಜಾಗೃತಿ’ ದಿನದ ಅಂಗವಾಗಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ರಸ್ತೆ ಅಪಘಾತಗಳಿಂದ ಒಂದು ವರ್ಷಕ್ಕೆ 15 ಲಕ್ಷ ಜನರಿಗೆ ತೀವ್ರವಾಗಿ ತಲೆಗೆ ಗಾಯವಾಗಿ ಆಸ್ಪತ್ರೆ ತಲುಪುವ ಮುನ್ನವೇ ಶೇ. 60ರಷ್ಟು ಗಾಯಾಳುಗಳು ಮೃತಪಡುತ್ತಿದ್ದಾರೆ. ಹೀಗೆ ಸಾವನ್ನಪುತ್ತಿರುವವರಲ್ಲಿ ಶೇ. 60ರಷ್ಟು ಮಂದಿ 15 ರಿಂದ 40 ವರ್ಷ ವಯಸ್ಸಿನವರಾಗಿದ್ದಾರೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ರಸ್ತೆ ಅಪಘಾತದಲ್ಲಿ ದೇಶದಲ್ಲೇ ಮೂರನೇ ಸ್ಥಾನ ಪಡೆದುಕೊಂಡಿದ್ದು, ಅದರಲ್ಲೂ ಬೆಂಗಳೂರು ನಗರದಲ್ಲಿ ನಿತ್ಯ ರಸ್ತೆ ಅಪಘಾತದಲ್ಲಿ ಸರಾಸರಿ ಎರಡು ಜೀವಗಳು ಬಲಿಯಾಗುತ್ತಿವೆ. ಒಂದು ವರ್ಷಕ್ಕೆ 700-800 ಮಂದಿ ರಸ್ತೆ ಅಪಘಾತದಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ನಿಯಂತ್ರಣ ಹೇಗೆ: ಚಾಲಕರು ವಾಹನ ಚಲಿಸುವಾಗ ಕಡ್ಡಾಯವಾಗಿ ಸೀಟ್‌ಬೆಲ್ಟ್ ಹಾಕುವುದು, ದ್ವಿಚಕ್ರ ವಾಹನದ ಮುಂಬದಿ ಹಾಗೂ ಹಿಂಬದಿ ಸಾವರರಿಬ್ಬರೂ ಹೆಲ್ಮೆಟ್ ಧರಿಸುವುದು, ವಾಹನ ಚಲಾಯಿಸುವಾಗ ಮೊಬೈಲ್ ಬಳಸದಿರುವುದು, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡದಿರುವುದು. ಇವುಗಳನ್ನು ಕಡ್ಡಾಯವಾಗಿ ಪಾಲಿಸಿದಲ್ಲಿ ಅಪಘಾತದ ಪ್ರಮಾಣ ಬಹುತೇಕ ಇಳಿಕೆಯಾಗಲಿದೆ ಎಂದು ಅವರು ಹೇಳಿದರು.

ಜಾಗೃತಿ ಕಾರ್ಯಕ್ರಮ: ವಿಶ್ವ ತಲೆಯ ಆಘಾತ ಜಾಗೃತಿ ದಿನದ ಅಂಗವಾಗಿ ಜ. 20ರಂದು ಬ್ರೈನ್ಸ್ ಆಸ್ಪತ್ರೆ ಹಾಗೂ ಗೋಲ್ಡನ್ ಅವರ್ ಸಂಸ್ಥೆ ಸಹಯೋಗದಲ್ಲಿ ನಗರದಾದ್ಯಂತ ತಲೆಯ ಆಘಾತದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ವೇಳೆ ತುರ್ತು ಸ್ಥಿತಿಯಲ್ಲಿ ರೋಗಿಯ ರಕ್ಷಣೆ ಮಾಡುವ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಹೇಳಿದರು.

ನಗರದ ಹೆಬ್ಬಾಳ ಬಳಿಯ ಗೋಲ್ಡನ್ ಅವರ್ ಟ್ರೈನಿಂಗ್ ಅಕಾಡೆಮಿಯಿಂದ ಬೆಳಗ್ಗೆ 10.30ಕ್ಕೆ ಆಸ್ಪತ್ರೆಯ 15 ಜನರ ತಂಡ ಇರುವ ಆ್ಯಂಬುಲೆನ್ಸ್ ಅರಮನೆ ರಸ್ತೆ, ನೆಹರು ತಾರಾಲಯ, ಇನ್‌ ಫೆಂಟ್ರಿ ರಸ್ತೆ, ಕಬ್ಬನ್‌ಪಾರ್ಕ್, ವಿಧಾನಸೌಧ, ವಿಠಲ್‌ಮಲ್ಯರಸ್ತೆ, ಲಾಲ್‌ಬಾಗ್, ಜಯನಗರ, ಅಶೋಕ ಪಿಲ್ಲರ್, ರಿಚ್‌ಮಂಡ್‌ರಸ್ತೆ, ಎಂ.ಜಿ.ರಸ್ತೆ ಮಾರ್ಗವಾಗಿ ಬೈಯಪ್ಪನಹಳ್ಳಿ ವರೆಗೂ ಸಂಚರಿಸಿ ಜಾಗೃತಿ ಮೂಡಿಸಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬ್ರೈನ್ಸ್ ಸಂಸ್ಥೆಯ ಸಿಇಓ ಡಾ.ಪ್ರಭಾಕರ್, ಡಾ.ಕೃಷ್ಣ ಚೈತನ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X