Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಎಫ್‌ಐನಿಂದ ವಿದ್ಯಾರ್ಥಿ ಜಾಥಾ, ಸಮಾವೇಶ

ಸಿಎಫ್‌ಐನಿಂದ ವಿದ್ಯಾರ್ಥಿ ಜಾಥಾ, ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ19 March 2018 8:30 PM IST
share
ಸಿಎಫ್‌ಐನಿಂದ ವಿದ್ಯಾರ್ಥಿ ಜಾಥಾ, ಸಮಾವೇಶ

ಮೈಸೂರು, ಮಾ. 19: ರಾಜಕೀಯ ಬೂಟಾಟಿಕೆಯನ್ನು ನಿಲ್ಲಿಸಿ ವಿದ್ಯಾರ್ಥಿಗಳ ರಕ್ಷಣೆಯನ್ನು ಖಾತರಿಪಡಿಸಿ ಎಂಬ ಘೋಷವಾಕ್ಯದೊಂದಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯ ವತಿಯಿಂದ ಬೃಹತ್ ವಿದ್ಯಾರ್ಥಿ ಜಾಥಾ ಮತ್ತು ವಿದ್ಯಾರ್ಥಿ ಹಕ್ಕುಗಳ ಸಮಾವೇಶವನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯಿತು.

ಜಾಥವು ನಗರದ ಉದಯಗಿರಿ ಸಿಗ್ನಲ್ ಬಳಿಯಿಂದ ಆರಂಭಗೊಂಡು ಇವತ್ತಿನ ರಾಜಕೀಯ ವಿದ್ಯಾಮಾನಗನ್ನು ಸ್ಥಬ್ದಚಿತ್ರ ಮತ್ತು ನಾಟಕದ ಮೂಲಕ ಪ್ರದರ್ಶಿಸಲಾಯಿತು.

ಶಾಂತಿನಗರದಲ್ಲಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರಾಧ್ಯಕ್ಷ ಶುಹೈಬ್, ಜೆ.ಎನ್.ಯು ಸಂಶೋಧನಾ ವಿದ್ಯಾರ್ಥಿ ನಜೀಬ್ ನಾಪತ್ತೆ ಪ್ರಕರಣವನ್ನು ಪ್ರಶ್ನಿಸಿದರೆ ರಾಷ್ಟ್ರದ್ರೋಹಿಗಳು ಎಂಬ ಹಣೆಪಟ್ಟಿಯನ್ನು ಕಟ್ಟುತ್ತಾರೆ. ಯಾವುದೇ ಸರಕಾರದ ನೀತಿಯನ್ನು ವಿರೋಧಿಸಿದರೆ ಅವರನ್ನು ಗುರಿಯಾಗಿಸಲಾಗುತ್ತದೆ, ಆದರೆ ಫ್ಯಾಶಿಸ್ಟರ ಬೆದರಿಕೆಗೆ ಮಣಿಯದೆ ಅನೀತಿ ಅಕ್ರಮಗಳ ವಿರುದ್ಧ ಧ್ವನಿಯೆತ್ತುವ ಜವಾಬ್ದಾರಿ ಯುವಜನತೆಯ ಮೇಲಿದೆ ಎಂದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ ಅಭ್ಯರ್ಥಿ ಅಬ್ದುಲ್ ಮಜೀದ್ ಅವರು, ತಮ್ಮ ಮಕ್ಕಳ ವಿಷಯದಲ್ಲಿ ವಿಧಾನಸಭೆಯಲ್ಲಿ ಗಂಟೆಗಟ್ಟಲೆ ಮಾತನಾಡುವ ಶಾಸಕರು ಇಲ್ಲಿನ ದಮನಿತ ಅಲ್ಪಸಂಖ್ಯಾತ ದಲಿತರ ಅನ್ಯಾಯದ ವಿರುದ್ಧ ಮತ್ತು ಶಿಕ್ಷಣ ಸಚಿವರಾಗಿಯೂ ವಿದ್ಯಾರ್ಥಿಗಳಿಗೆ ಕೊಟ್ಟ ಭರವಸೆಯನ್ನು ಈಡೇರಿಸದೇ ಇರುವುದು ಖೇದಕರ. ವಿದ್ಯಾರ್ಥಿ ವಿರೋಧಿ ನೀತಿ ಹಾಗೂ ವಿದ್ಯಾರ್ಥಿ ಹಕ್ಕುಗಳಿಗಾಗಿ ಹೋರಾಡುತ್ತಿರುವ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯು ಜನಪರ ಹೋರಾಟಗಾರರನ್ನು ವಿಧಾನಸಭೆಗೆ ಕಳುಹಿಸುವಂತಹ ಪ್ರಬುದ್ಧತೆಯನ್ನು ತೋರಿಸಿ ಜವಾಬ್ದಾರಿಯನ್ನು ನಿರ್ವಹಿಸಿದ್ದಲ್ಲಿ ನಿಮ್ಮ ಹೋರಾಟದ ಧ್ವನಿಯು ವಿಧಾನಸಭೆಯಲ್ಲಿ ಪ್ರತಿಧ್ವನಿಸಲಿದೆ ಎಂದು ಭರವಸೆ ನೀಡಿದರು.

ಪ್ರಗತಿಪರ ಹೋರಾಟಗಾರ ಬಿ.ಆರ್. ಭಾಸ್ಕರ್ ಪ್ರಸಾದ್ ಮಾತನಾಡಿ, ಮೈಸೂರಿನ ಸಂಸದ ಪ್ರತಾಪ್ ಸಿಂಹರ ಅವಿವೇಕತನದಿಂದ ನಗರದ ಘನತೆಗೆ ಧಕ್ಕೆಯಾಗುತ್ತಿದ್ದು, ಇಂತಹವರನ್ನು ಮುಂದಿನ ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕಾಗಿದೆ. ಅರಸರ ನಂತರ ಅಭಿವೃದ್ಧಿ ಹರಿಕಾರ ಎಂದು ತನ್ನನ್ನು ಬಿಂಬಿಸಿಕೊಳ್ಳುತ್ತಿರುವ ಮುಖ್ಯಮಂತ್ರಿಗಳು ಟಿಪ್ಪು ಸುಲ್ತಾನ್ ಮತ್ತು ಕೃಷ್ಣರಾಜ ಒಡೆಯರ್ ಅವರ ಆಡಳಿತದ ಅಧ್ಯಯನವನ್ನು ಸರಿಯಾಗಿ ಅಧ್ಯಯನ ಮಾಡಬೇಕಾಗಿದೆ ಎಂದರು.ಪಿ.ಎಫ್.ಐ ರಾಜ್ಯಾಧ್ಯಕ್ಷ ಮಹಮ್ಮದ್ ಶಾಕಿಬ್ ಸರಕಾರದ ಕಾರ್ಯವೈಖರಿಯನ್ನು ತೀವ್ರವಾಗಿ ಖಂಡಿಸಿದರು.

ಅಧ್ಯಕ್ಷೀಯ ಭಾಷಣವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯಧ್ಯಕ್ಷ ಮಹಮ್ಮದ್ ತಪ್ಸೀರ್ ಮಾತನಾಡಿದರು. ವೇದಿಕೆಯಲ್ಲಿ ನಿವೃತ್ತ ಡಿ.ಡಿ.ಪಿ.ಐ. ಪುಟ್ನಂಜಯ್ಯ, ಮಹಾರಾಜ ಕಾಲೇಜಿನ ಉಪನ್ಯಾಸಕ ಸಂದೀಪ್, ಪಿ.ಎಫ್.ಐ. ಜಿಲ್ಲಾಧ್ಯಕ್ಷ ಅಮೀನ್ ಸೇಠ್, ಬಿ.ವಿ.ಎಸ್ ಜಿಲ್ಲಾ ನಾಯಕರಾದ ಗಣೇಶ್ ಮೈಸೂರು ಯುವ ಫೆಡರೇಶನ್ ಅಧ್ಯಕ್ಷ ಮೊಹಿನುದ್ದೀನ್, ರಾಜ್ಯ ಪದಾಧಿಕಾರಿಗಳಾದ ಮುವ್ವಿರ್, ಸದಖತುಲ್ಲಾ, ಆರಿಫ್ ಅಡ್ವೊಕೇಟ್ ಅಬೂತಾಹಿರ್, ಜಿಲ್ಲಾಧ್ಯಕ್ಷ ನದೀಮ್ ಉಪಸ್ಥಿತರಿದ್ದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಾಕಿರ್ ಸ್ವಾಗತಿಸಿದರು. ರಿಯಾಝ್ ಕಡಂಬು ಹಾಗೂ ಮುಫೀದಾ ಕಾರ್ಯಕ್ರಮ ನಿರೂಪಿಸಿದರು. ಫಯಾಝ್ ದೊಡ್ಡಮನೆ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X