Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆಯಲ್ಲಿ ಶಾಸಕರ ವಿರುದ್ಧ...

ಮೂಡುಬಿದಿರೆಯಲ್ಲಿ ಶಾಸಕರ ವಿರುದ್ಧ ಪ್ರತಿಭಟನಾ ಸಭೆ : ವಜ್ರದೇಹಿ ಮಠದ ಶ್ರೀಗಳಿಂದ ಶಾಸಕರಿಗೆ ಬಹಿರಂಗ ಸವಾಲು

ವಾರ್ತಾಭಾರತಿವಾರ್ತಾಭಾರತಿ19 March 2018 10:35 PM IST
share
ಮೂಡುಬಿದಿರೆಯಲ್ಲಿ ಶಾಸಕರ ವಿರುದ್ಧ ಪ್ರತಿಭಟನಾ ಸಭೆ : ವಜ್ರದೇಹಿ ಮಠದ ಶ್ರೀಗಳಿಂದ ಶಾಸಕರಿಗೆ ಬಹಿರಂಗ ಸವಾಲು

ಮೂಡುಬಿದಿರೆ, ಮಾ.19: ಅಹಿಂಸೆಯನ್ನು ಪ್ರತಿಪಾದಿಸ ಬೇಕಾದ ಶಾಸಕ ಕೆ. ಅಭಯಚಂದ್ರ ಜೈನ್ ಹಿಂಸಾತ್ಮಕ ನಡೆ ನುಡಿಯ ಮಾರ್ಗದಲ್ಲಿ ನಡೆದಿರುವುದು ಸರಿಯಿಲ್ಲ. ತಾಕತ್ತಿದ್ದರೆ ಅವರು ವಜ್ರದೇಹಿಯ ಸುದ್ದಿಗೆ ಬರಲಿ. ತಾನು ಸುಮ್ಮನಿರುವ ಸಂತನಲ್ಲ. ನೇರ ವಿಧಾನ ಸೌಧಕ್ಕೂ ಬಂದು ಜರೆಯುತ್ತೇನೆ ಎಂದು ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಗುಡುಗಿದ್ದಾರೆ. ಅವರು ಕರಿಂಜೆ ಶ್ರೀಗಳವರಿಗೆ ಅವಮಾನಿಸಿ ಮಾತನಾಡಿದ್ದ ಹಿಂದೂ ವಿರೋಧಿ ಶಾಸಕರ ವಿರುದ್ಧ  ವಿಶ್ವ ಹಿಂದೂ ಪರಿಷತ್ ಮೂಡುಬಿದಿರೆ ಪ್ರಖಂಡದ ವತಿಯಿಂದ ಸೋಮವಾರ ಸಂಜೆ ಸ್ವರಾಜ್ಯ ಮೈದಾನದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. 

ಶಾಸಕರು ಕರಿಂಜೆ ಶ್ರೀಗಳವರನ್ನು ಅಪಮಾನಿಸಿದ್ದಾಗಿದೆ. ಇನ್ನೀಗ ಕಾಲು ಮುಟ್ಟಿ ಕ್ಷಮೆಯಾಚಿಸಿದರೂ ಅವರು ಸೋಲುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಅವರೇನಿದ್ದರೂ ಸನ್ಯಾಸ ದೀಕ್ಷೆ ಪಡೆದು ಮಠ ಕಟ್ಟಿಕೊಳ್ಳಲು ಸಿದ್ಧರಾಗಿ ಎಂದವರು ಹೇಳಿದರು. 

ಕರಿಂಜೆಯ ಶ್ರೀ ಮುಕ್ತಾನಂದ ಸ್ವಾಮೀಜಿಯವರು ಮಾತನಾಡಿ ಹಿಂದುತ್ವದ ಬಗ್ಗೆ ಗಟ್ಟಿ ಧ್ವನಿ ಎತ್ತಲು ವಜ್ರದೇಹಿ ಶ್ರೀಗಳವರೇ ಸ್ಫೂರ್ತಿಯಾಗಿದ್ದಾರೆ. ಶಾಸಕರು ಜೇನುಗೂಡಿಗೆ ಕಲ್ಲು ಎಸೆದು ಸಮಸ್ಯೆಯನ್ನು ಎದುರು ಹಾಕಿಕೊಂಡಂತಾಗಿದೆ ಎಂದರು. 

ವಿಹಿಂಪ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಗೋಪಾಲ್‍ಜೀ ಮಾತನಾಡಿ ಕರ್ನಾಟಕದಲ್ಲಿ ಈಗ ಇರುವುದು ಹಿಂದೂ ವಿರೋಧಿ ಟಿಪ್ಪು ಜಯಂತಿ ಆಚರಿಸಿದ, ಗೋಹಂತಕರನ್ನು ಬೆಂಬಲಿಸುವ ರಾವಣ ರಾಜ್ಯ ಎಂದವರು ಹೇಳಿದರು. ಗಾಂಧೀ ತತ್ವ ಪಾಲಿಸುವವರಲ್ಲ. ಹೆಡ್ಗೇವಾರ್ ತತ್ವ ಪಾಲಕರು. ಹಿಂದೂ ಸ್ವಾಮೀಜಿಯವರನ್ನು ನಿಂದಿಸಿ ಮೂಡುಬಿದಿರೆ ಶಾಸಕರು ತಪ್ಪೆಸಗಿದ್ದಾರೆ. ಅವರಿಗೆ ಶಿಕ್ಷೆ ಗ್ಯಾರಂಟಿ. ನಮಗೆ ಅವರ ರಾಜೀನಾಮೆ ಬೇಡ, ಜನರೇ ಅವರ ರಾಜೀನಾಮೆ ಕೊಡಿಸ್ತಾರೆ ಎಂದವರು ಹೇಳಿದರು. 

ಸ್ವಾಮೀಜಿಯವರು ಭೂ ಅತಿಕ್ರಮಣ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿರುವ ಶಾಸಕರು ತಮ್ಮ ಬೆಂಬಲಿಗರು ಮಾಡಿರುವ ಅಕ್ರಮಗಳ ಬಗ್ಗೆ ಏಕೆ ಮಾತನಾಡುತ್ತಿಲ್ಲ? ಓಲೈಕೆಯ ರಾಜಕಾರಣದಿಂದ ಹಿಂದೂಗಳಿಗೆ ಇಲ್ಲಿ ಅಪಮಾನವಾಗಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಆರೋಪಿಸಿದರು. ವಿಹಿಂಪ ಉಪಾಧ್ಯಕ್ಷ ಸೋಮನಾಥ ಕೋಟ್ಯಾನ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ವಿಹಿಂಪ ಪ್ರಾಂತ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್, ವಿಹಿಂಪ ಜಿಲ್ಲಾಧ್ಯಕ್ಷ ಜಗದೀಶ ಶೇಣವ,ಭಜರಂಗದಳ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್ ಉಪಸ್ಥಿತರಿದ್ದರು. ಭಜರಂಗದಳ ತಾಲೂಕು ಸಂಚಾಲಕ ಸುಚೇತನ್ ಜೈನ್ ಸ್ವಾಗತಿಸಿದರು. ವಿಹಿಂಪ ಕಾರ್ಯಾಧ್ಯಕ್ಷ ಶ್ಯಾಮ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಸಭೆಗೂ ಮೊದಲು ಪೇಟೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X