ರಾಜ್ಯ ಸರಕಾರದಿಂದಲೇ ಶ್ರೀ ಹಡಪದ ಅಪ್ಪಣ್ಣ ಜಯಂತಿ: ಸಚಿವೆ ಉಮಾಶ್ರೀ
ಬೆಂಗಳೂರು, ಮಾ. 20: ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿಯನ್ನು ಪ್ರತಿ ವರ್ಷ ಜುಲೈ 27ರಂದು ರಾಜ್ಯ ಸರಕಾರದ ವತಿಯಿಂದಲೇ ಆಚರಣೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.
ನಾಡಿನ ಶ್ರೀಮಂತ ಪರಂಪರೆಗೆ ಕಾರಣರಾದ ಅನೇಕ ಮಹಾನೀಯರ ಜಯಂತಿಯನ್ನು ಆಚರಣೆ ಮಾಡಲು ಸರಕಾರ ಉದ್ದೇಶಿಸಿದ್ದು, ಈ ನಿಟ್ಟಿನಲ್ಲಿ ತಮ್ಮ ವೈಚಾರಿಕತೆ ಮತ್ತು ಸಾಮಾಜಿಕ ಕ್ರಾಂತಿಗಾಗಿ ಹೆಸರಾದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿಯನ್ನು ಆಚರಣೆ ಮಾಡಲು ಉದ್ದೇಶಿಸಲಾಗಿದೆ.
ಈ ಸಂಬಂಧ ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು, ಎಲ್ಲ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆಗಾಗಿ 69 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸಚಿವೆ ಉಮಾಶ್ರೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story