Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸಚಿವ ಗಡ್ಕರಿಗೆ ಪತ್ರ ಬರೆದ...

ಕೇಂದ್ರ ಸಚಿವ ಗಡ್ಕರಿಗೆ ಪತ್ರ ಬರೆದ ಸಚಿನ್ ತೆಂಡೂಲ್ಕರ್

ವಾರ್ತಾಭಾರತಿವಾರ್ತಾಭಾರತಿ20 March 2018 9:35 PM IST
share
ಕೇಂದ್ರ ಸಚಿವ ಗಡ್ಕರಿಗೆ ಪತ್ರ ಬರೆದ ಸಚಿನ್ ತೆಂಡೂಲ್ಕರ್

ಹೊಸದಿಲ್ಲಿ,ಮಾ.20: ಸುರಕ್ಷಿತ ದ್ವಿಚಕ್ರ ವಾಹನ ಚಾಲನೆಗಾಗಿ ತನ್ನ ಅಭಿಯಾನವನ್ನು ಮುಂದುವರಿಸಿರುವ ಕ್ರಿಕೆಟ್ ದಂತಕಥೆ ಹಾಗೂ ರಾಜ್ಯಸಭಾ ಸದಸ್ಯ ಸಚಿನ್ ತೆಂಡೂಲ್ಕರ್ ಅವರು ಕಳಪೆ ಗುಣಮಟ್ಟದ ಹೆಲ್ಮೆಟ್ ತಯಾರಕರ ವಿರುದ್ಧ ಕ್ರಮವನ್ನು ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ದ್ವಿಚಕ್ರ ವಾಹನಗಳ ಸವಾರರನ್ನೊಳಗೊಂಡ ಅಪಘಾತಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಭವಿಸುತ್ತಿದ್ದು, ಅವರಿಗೆ ಅತ್ಯುನ್ನತ ಗುಣಮಟ್ಟದ ಸುರಕ್ಷತಾ ಉಪಕರಣಗಳು ಮುಖ್ಯವಾಗಿವೆ ಎಂದು ಕೇಂದ್ರಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಬರೆದಿರುವ ಪತ್ರದಲ್ಲಿ ತೆಂಡೂಲ್ಕರ್ ಹೇಳಿದ್ದಾರೆ.

ಕಳಪೆಗುಣಮಟ್ಟದ ಹೆಲ್ಮೆಟ್‌ಗಳನ್ನು ತಯಾರಿಸಿ ನಕಲಿ ಐಎಸ್‌ಐ ಗುರುತಿನೊಂದಿಗೆ ಮಾರಾಟ ಮಾಡುತ್ತಿರುವ ತಯಾರಕರ ವಿರುದ್ಧ ನಿಮ್ಮ ಸಚಿವಾಲಯವು ಕ್ರಮವನ್ನು ಕೈಗೊಳ್ಳಬೇಕು ಎಂದು ಕೋರಿ ತಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ಓರ್ವ ಕ್ರೀಡಾಪಟುವಾಗಿ ಮೈದಾನದಲ್ಲಿ ಆಟಕ್ಕೆ ತೆರಳುವಾಗ ಅತ್ಯುನ್ನತ ಗುಣಮಟ್ಟದ ಅಸಲಿ ಸುರಕ್ಷತಾ ಉಪಕರಣಗಳ ಬಳಕೆಯ ಮಹತ್ವ ತನಗೆ ತಿಳಿದಿದೆ. ಇದೇ ಗುಣಮಟ್ಟವನ್ನು ದೇಶದಲ್ಲಿಯ ದ್ವಿಚಕ್ರ ವಾಹನ ಸವಾರರು ಬಳಸುತ್ತಿರುವ ಹೆಲ್ಮೆಟ್‌ಗಳಲ್ಲಿಯೂ ಕಾಯ್ದುಕೊಳ್ಳಬೇಕು ಎಂದು ತೆಂಡೂಲ್ಕರ್ ಒತ್ತಿ ಹೇಳಿದ್ದಾರೆ.

ರಸ್ತೆ ಸುರಕ್ಷತೆ ಅಭಿಯಾನದಲ್ಲಿ ಮುಂಚೂಣಿಯಲ್ಲಿರುವ ತೆಂಡೂಲ್ಕರ್ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಟ್ರಾಫಿಕ್ ಸಿಗ್ನಲ್‌ಗಳಲ್ಲಿ ನಿಂತಾಗ ಹೆಲ್ಮೆಟ್‌ಗಳನ್ನು ಧರಿಸಿಕೊಳ್ಳುವಂತೆ ಜನರನ್ನು ಆಗ್ರಹಿಸುತ್ತಲೇ ಇರುತ್ತಾರೆ.

ಭಾರತದಲ್ಲಿ ಶೇ.70ರಷ್ಟು ದ್ವಿಚಕ್ರ ವಾಹನ ಸವಾರರು ನಕಲಿ ಹೆಲ್ಮೆಟ್‌ಗಳನ್ನು ಖರೀದಿಸುತ್ತಿದ್ದಾರೆ ಎಂದು ಮಾಧ್ಯಮವರದಿಗಳನ್ನು ಉಲ್ಲೇಖಿಸಿ ಹೇಳಿರುವ ಅವರು, 2016ರಲ್ಲಿ ಅತ್ಯಂತಹೆಚ್ಚಿನ ಅಂದರೆ ಶೇ.30ಕ್ಕೂ ಅಧಿಕ ಅಪಘಾತಗಳಿಗೆ ದ್ವಿಚಕ್ರವಾಹನಗಳು ಕಾರಣವಾಗಿರುವುದನ್ನು ಪರಿಗಣಿಸಿದರೆ ಇದು ಅತ್ಯಂತ ಅಪಾಯದ ಸ್ಥಿತಿಯಾಗಿದೆ. ಸೂಕ್ತ ಹೆಲ್ಮೆಟ್ ಧಾರಣೆಯಿಂದ ಸವಾರರ ಬದುಕುಳಿಯುವ ಸಾಧ್ಯತೆ ಶೇ.42ರಷ್ಟು ಹೆಚ್ಚುವುದರಿಂದ ನಕಲಿ ಹೆಲ್ಮೆಟ್‌ಗಳ ಲಭ್ಯತೆ ದ್ವಿಚಕ್ರ ವಾಹನ ಸವಾರರ ಪಾಲಿಗೆ ಅಪಾಯಕಾರಿಯಾಗಿದೆ ಎಂದಿದ್ದಾರೆ.

ಐಎಸ್‌ಐ ಗುರುತು ಇಲ್ಲದ ಅಥವಾ ನಕಲಿ ಐಎಸ್‌ಐ ಗುರುತಿನಹೆಲ್ಮೆಟ್‌ಗಳ ತಯಾರಕರಿಗೆ ದಂಡನೆಯ ಬಗ್ಗೆ ಸರಕಾರವು ಚಿಂತನೆ ನಡೆಸಿದೆ ಎಂಬ ವರದಿಗಳಿವೆಯಾದರೂ ಆ ನಿಟ್ಟಿನಲ್ಲಿ ಈವರೆಗೆ ಯಾವುದೇ ದೃಢವಾದ ಕ್ರಮವನ್ನು ಕೈಗೊಳ್ಳಲಾಗಿಲ್ಲ.

 ಈ ಹಿನ್ನೆಲೆಯಲ್ಲಿ ನಕಲಿ ಹೆಲ್ಮೆಟ್ ತಯಾರಕರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳುವಂತೆ ಆಗ್ರಹಿಸಿರುವ ತೆಂಡೂಲ್ಕರ್, ದ್ವಿಚಕ್ರ ವಾಹನ ಸವಾರರು ಅಗ್ಗದ ಹೆಲ್ಮೆಟ್‌ಗಳನ್ನು ಖರೀದಿಸುವುದನ್ನು ತಡೆಯಲು ಉತ್ತಮಗುಣಮಟ್ಟದ ಹೆಲ್ಮೆಟ್‌ಗಳು ಕಡಿಮೆ ಬೆಲೆಗಳಲ್ಲಿ ಲಭ್ಯವಾಗಬೇಕು ಎಂದೂ ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X