Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾ.22ರೊಳಗೆ ಶಾಸಕರ ಅನರ್ಹತೆ ತೀರ್ಪು...

ಮಾ.22ರೊಳಗೆ ಶಾಸಕರ ಅನರ್ಹತೆ ತೀರ್ಪು ಪ್ರಕಟಿಸುವ ಬಗ್ಗೆ ತಿಳಿಸಿ: ಎಜಿಗೆ ಹೈಕೋರ್ಟ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ20 March 2018 9:37 PM IST
share

ಬೆಂಗಳೂರು, ಮಾ.20: ರಾಜ್ಯಸಭೆ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿ ಪಕ್ಷದ ಅಭ್ಯರ್ಥಿ ವಿರುದ್ಧ ಮತ ಚಲಾಯಿಸಿದ್ದ ಜೆಡಿಎಸ್‌ನ 7 ಬಂಡಾಯ ಶಾಸಕರನ್ನು ಅನರ್ಹಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ವಿಧಾನ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಮಾ.22ರ ಮಧ್ಯಾಹ್ನ 12ಗಂಟೆಯೊಳಗೆ ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪನ್ನು ಪ್ರಕಟಿಸಬಹುದೆ ಎಂಬ ಮಾಹಿತಿ ಪಡೆದು ನ್ಯಾಯಾಲಯಕ್ಕೆ ಮಾ.21ರಂದು ತಿಳಿಸಲು ರಾಜ್ಯ ಅಡ್ವೋಕೇಟ್ ಜನರಲ್ ಮಧುಸೂದನ್ ನಾಯಕ್‌ಗೆ ಸೂಚಿಸಿ, ವಿಚಾರಣೆಯನ್ನು ಮುಂದೂಡಿದೆ.

ಜೆಡಿಎಸ್ ಶಾಸಕರಾದ ಸಿ.ಎನ್.ಬಾಲಕೃಷ್ಣ, ಬಿ.ಬಿ.ನಿಂಗಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಘವೇಂದ್ರ ಎಸ್. ಚವ್ಹಾಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಸೂಚನೆ ನೀಡಿ, ವಿಚಾರಣೆಯನ್ನು ಮಾ.21ಕ್ಕೆ ಮುಂದೂಡಿತು.

ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಉದಯ ಹೊಳ್ಳ ಅವರು, ಕಳೆದ ರಾಜ್ಯಸಭೆ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿ ಪಕ್ಷದ ಅಭ್ಯರ್ಥಿ ವಿರುದ್ಧ ಶಾಸಕರಾದ ಜಮೀರ್ ಅಹ್ಮದ್ ಖಾನ್, ಎನ್ ಚಲುವರಾಯಸ್ವಾಮಿ, ಎಚ್.ಸಿ ಬಾಲಕೃಷ್ಣ, ಅಖಂಡ ಶ್ರೀನಿವಾಸ ಮೂರ್ತಿ, ಎ.ಬಿ ರಮೇಶ್ ಬಂಡಿಸಿದ್ದೇಗೌಡ, ಇಕ್ಬಾಲ್ ಅನ್ಸಾರಿ, ಎಸ್ ಭೀಮಾನಾಯಕ್ ಅವರು ಮತ ಚಲಾಯಿಸಿದ್ದಾರೆ. ಹೀಗಾಗಿ, ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರು ಈಗಾಗಲೇ ಬಂಡಾಯ ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದು, ಆದೇಶವನ್ನು ಪ್ರಕಟಿಸಲು ಸೂಚಿಸಬೇಕು. ಹಾಗೂ ಮಾ.23ರಂದು ನಡೆಯುವ ರಾಜ್ಯಸಭೆ ಚುನಾವಣೆಯಲ್ಲಿ ಮತದಾನ ಮಾಡದಂತೆ ನಿರ್ದೇಶನ ನೀಡಬೇಕೆಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಸರಕಾರದ ಪರ ವಾದಿಸಿದ ರಾಜ್ಯ ಅಡ್ವೋಕೇಟ್ ಜನರಲ್ ಮಧುಸೂದನ್ ಆರ್ ನಾಯಕ್ ಅವರು, ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರು ಈಗಾಗಲೇ ಬಂಡಾಯ ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದು, ಮಾ.23ರೊಳಗೆ ತೀರ್ಪನ್ನು ಪ್ರಕಟಿಸಲಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.

ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠವು ಸ್ಪೀಕರ್ ಕೋಳಿವಾಡ ಅವರು ಮಾ.22ರಂದು ತೀರ್ಪನ್ನು ಪ್ರಕಟಿಸುವ ಬಗ್ಗೆ ಮಾ.21ರಂದು ತಿಳಿಸಲು ಎಜಿಗೆ ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X