Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂದುವರಿದ ಗದ್ದಲ: ಉಭಯ ಸದನಗಳೂ...

ಮುಂದುವರಿದ ಗದ್ದಲ: ಉಭಯ ಸದನಗಳೂ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ20 March 2018 10:25 PM IST
share
ಮುಂದುವರಿದ ಗದ್ದಲ: ಉಭಯ ಸದನಗಳೂ ಮುಂದೂಡಿಕೆ

ಹೊಸದಿಲ್ಲಿ, ಮಾ.20: ಸಂಸತ್‌ನ ಉಭಯ ಸದನಗಳ ಕಲಾಪವನ್ನು ಸತತ 12ನೇ ದಿನವೂ ಮುಂದೂಡಲಾಗಿದ್ದು ಗದ್ದಲದ ಕಾರಣ ಅವಿಶ್ವಾಸ ಗೊತ್ತುವಳಿಯನ್ನು ಚರ್ಚೆಗೆ ಎತ್ತಿಕೊಳ್ಳಲು ಸ್ಪೀಕರ್ ನಿರಾಕರಿಸಿದ್ದಾರೆ. ಇರಾಕ್‌ನಲ್ಲಿ ಅಪಹೃತಗೊಂಡು ಬಳಿಕ ಹತರಾಗಿದ್ದ 39 ಭಾರತೀಯರಿಗೆ ರಾಜ್ಯಸಭೆಯಲ್ಲಿ ಸದಸ್ಯರು ಶೃದ್ಧಾಂಜಲಿ ಸಲ್ಲಿಸಿದರು. ಬಳಿಕ ಸದನದ ಕಲಾಪ ಆರಂಭವಾಗುತ್ತಿದ್ದಂತೆಯೇ ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಪಕ್ಷಗಳು ಪ್ರತಿಭಟನೆಗೆ ಮುಂದಾದಾಗ ಸತತ 12ನೇ ದಿನವೂ ಸದನ ಗದ್ದಲದಲ್ಲಿ ಮುಳುಗಿತು. ಬಳಿಕ ಎರಡೂ ಸದನದ ಕಲಾಪವನ್ನು ಮುಂದೂಡಲಾಯಿತು.

ಇರಾಕ್‌ನಲ್ಲಿ ಮೃತಪಟ್ಟ 39 ಭಾರತೀಯರ ಕುರಿತು ವಿದೇಶ ವ್ಯವಹಾರ ಇಲಾಖೆಯ ಸಚಿವೆ ಸುಷ್ಮಾಸ್ವರಾಜ್ ಹೇಳಿಕೆ ನೀಡುತ್ತಿರುವಂತೆ ಗದ್ದಲ ಆರಂಭವಾಯಿತು. ಗದ್ದಲದ ಮಧ್ಯೆಯೇ ಅಕ್ರಮ ಚಿಟ್ ಫಂಡ್ ಯೋಜನೆಗಳನ್ನು ನಿಷೇಧಿಸುವ ಮಸೂದೆಯನ್ನು ಮಂಡಿಸಲಾಯಿತು. ಸದನದಲ್ಲಿ ಗದ್ದಲದ ವಾತಾವರಣ ಇರುವ ಕಾರಣ ಅವಿಶ್ವಾಸ ಗೊತ್ತುವಳಿಯನ್ನು ಚರ್ಚೆಗೆ ಸ್ವೀಕರಿಸಲು ಆಗದು ಎಂದು ಸ್ಪೀಕರ್ ಸುಮಿತ್ರಾ ಮಹಾಜನ್ ಹೇಳಿ ಮಧ್ಯಾಹ್ನದ ವರೆಗೆ ಕಲಾಪವನ್ನು ಮುಂದೂಡಿದರು. ಈ ವೇಳೆ ವಿರೋಧ ಪಕ್ಷದ ಸದಸ್ಯರು ಏರು ಧ್ವನಿಯಲ್ಲಿ ಘೋಷಣೆ ಕೂಗಿದರು. ಮಧ್ಯಾಹ್ನ ಸದನ ಮರು ಸಮಾವೇಶಗೊಂಡಾಗ ಕಲಾಪಪಟ್ಟಿಯಲ್ಲಿ ಇರುವ ಪೇಪರ್‌ಗಳನ್ನು ಮಂಡಿಸುವಂತೆ ಸ್ಪೀಕರ್ ಆದೇಶಿಸಿದರು. ಆದರೆ ಈ ಹಂತದಲ್ಲಿ ಎಐಎಡಿಎಂಕೆ ಮತ್ತು ಟಿಡಿಪಿ ಸದಸ್ಯರು ಸದನದ ಬಾವಿಗೆ ನುಗ್ಗಿ ತಮ್ಮ ಬೇಡಿಕೆಗಳ ಬಗ್ಗೆ ಜೋರಾಗಿ ಘೋಷಣೆ ಕೂಗತೊಡಗಿದರು. ಆದರೆ ಇದಕ್ಕೆ ಆಕ್ಷೇಪ ಸೂಚಿಸಿದ ಕಾಂಗ್ರೆಸ್ ಸದಸ್ಯರು, ಹೀಗೆ ಮಾಡಿದರೆ ಅವಿಶ್ವಾಸ ಗೊತ್ತುವಳಿ ಚರ್ಚೆಗೆ ಬರಲು ಅಡ್ಡಿಯಾಗುತ್ತದೆ ಎಂದರು. ಶಾಂತಿ ಕಾಪಾಡುವಂತೆ ಸದಸ್ಯರನ್ನು ಕೋರಿದ ಸ್ಪೀಕರ್, ವಿದೇಶಾಂಗ ಸಚಿವರು ಗಂಭೀರವಾದ ವಿಷಯದ ಬಗ್ಗೆ ಹೇಳಿಕೆ ನೀಡಲಿದ್ದಾರೆ ಎಂದರು. ಆದರೆ ಇದಕ್ಕೆ ಕಾಂಗ್ರೆಸ್ ಹಾಗೂ ಎಡಪಕ್ಷಗಳ ಸದಸ್ಯರು ಒಪ್ಪದೆ ಹೇಳಿಕೆ ಬೇಡ ಎಂದು ಘೋಷಣೆ ಕೂಗಿದರು.

 ಗದ್ದಲದ ಮಧ್ಯೆಯೇ ಹೇಳಿಕೆ ನೀಡಿದ ಸಚಿವೆ ಸ್ವರಾಜ್, ಮೃತಪಟ್ಟ ವ್ಯಕ್ತಿಗಳ ಡಿಎನ್‌ಎ ನಾಪತ್ತೆಯಾಗಿದ್ದ ವ್ಯಕ್ತಿಗಳ ಡಿಎನ್‌ಎಗೆ ಶೇ.100ರಷ್ಟು ಸರಿಯಾಗಿದೆ ಎಂದು ಹೇಳಿದರು. ಈ ಹಂತದಲ್ಲಿ ಕಾಂಗ್ರೆಸ್, ‘ಆಪ್’ ಸದಸ್ಯರು ಘೋಷಣೆ ತೀವ್ರಗೊಳಿಸಿದಾಗ ಸದಸ್ಯರ ವರ್ತನೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಸ್ಪೀಕರ್, ಸಂಸದರು ದೇಶದ ಜನರ ಬಗ್ಗೆ ಸಂವೇದನೆ, ಸಹಾನುಭೂತಿಯನ್ನೇ ಹೊಂದಿಲ್ಲವೇ ಎಂದು ಪ್ರಶ್ನಿಸಿದರು. ಇಂತಹ ವಿಷಯದಲ್ಲೂ ರಾಜಕೀಯ ಮಾಡಬೇಡಿ. ಈ ಹಿಂದೆ ಈ ರೀತಿಯ ಘಟನೆ ನಡೆದಿಲ್ಲ ಎಂದು ಸ್ಪೀಕರ್ ಹೇಳಿದರು. ಸುಷ್ಮಾ ಸ್ವರಾಜ್ ತಮ್ಮ ಹೇಳಿಕೆ ಮುಗಿಸಿ ಆಸೀನರಾದ ಬಳಿಕ ಮಾತನಾಡಿದ ಸ್ಪೀಕರ್, ಅವಿಶ್ವಾಸ ನಿರ್ಣಯ ಗೊತ್ತುವಳಿಯನ್ನು ಚರ್ಚೆಗೆ ಎತ್ತಿಕೊಳ್ಳುವುದು ತನ್ನ ಕರ್ತವ್ಯವಾಗಿದೆ. ಆದರೆ ಸದನದಲ್ಲಿ ಇರುವ ಪರಿಸ್ಥಿತಿ ಇದಕ್ಕೆ ಪೂರಕವಾಗಿಲ್ಲ ಎಂದರು. ಈ ಹಂತದಲ್ಲಿ ಎಐಎಡಿಎಂಕೆ ಹಾಗೂ ಟಿಡಿಪಿ ಸದಸ್ಯರು ಮತ್ತೆ ಘೋಷಣೆ ಕೂಗಲಾರಂಭಿಸಿದರು. ಈ ಹಂತದಲ್ಲಿ ಸ್ಪೀಕರ್ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಿದರು. ಅವಿಶ್ವಾಸ ಗೊತ್ತುವಳಿ ಮಂಡಿಸಬೇಕಿದ್ದರೆ ಕನಿಷ್ಟ 50 ಸದಸ್ಯರ ಬೆಂಬಲ ಬೇಕು. ಆದರೆ ಸದನದಲ್ಲಿ ಹಲವಾರು ಸದಸ್ಯರು ಎದ್ದುನಿಂತು ಗದ್ದಲ ನಡೆಸುತ್ತಿರುವ ಕಾರಣ ಸದಸ್ಯರ ತಲೆ ಎಣಿಕೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಲೋಕಸಭೆಯ ಅಧಿಕಾರಿಗಳು ತಿಳಿಸಿದ್ದಾರೆ.

 ರಾಜ್ಯಸಭೆಯಲ್ಲಿ ಕಲಾಪ ಆರಂಭವಾದ ಅರ್ಧ ಗಂಟೆಯ ಬಳಿಕ ಕಲಾಪ ಮುಂದೂಡಲಾಯಿತು. ಇರಾಕ್‌ನಲ್ಲಿ ಮೃತಪಟ್ಟ ಭಾರತೀಯರ ಬಗ್ಗೆ ಸಚಿವೆ ಸ್ವರಾಜ್ ಸ್ವಯಂಪ್ರೇರಿತ ಹೇಳಿಕೆ ನೀಡಿದರು. ಸಹಾಯಕ ವಿದೇಶ ವ್ಯವಹಾರ ಸಚಿವ ವಿ.ಕೆ.ಸಿಂಗ್ ವಿಶೇಷ ವಿಮಾನದಲ್ಲಿ ಇರಾಕ್‌ಗೆ ತೆರಳಿ ಪಾರ್ಥಿವ ಶರೀರಗಳನ್ನು ಭಾರತಕ್ಕೆ ತರಲಿದ್ದಾರೆ ಎಂದು ಹೇಳಿದರು. ಬಳಿಕ ಸದನದ ಸದಸ್ಯರು ಮೌನವಾಗಿ ಎದ್ದು ನಿಂತು ಶೃದ್ಧಾಂಜಲಿ ಸಲ್ಲಿಸಿದರು. ಸಾವಿನ ಬಗ್ಗೆ ತೀವ್ರ ಸಂತಾಪ ಸೂಚಿಸಿದ ವಿಪಕ್ಷ ನಾಯಕ ಗುಲಾಂನಬಿ ಆಝಾದ್, ಅಪಹೃತ ಭಾರತೀಯರನ್ನು ಜೀವಂತವಾಗಿ ಕರೆತರಲಾಗುತ್ತದೆ ಎಂದು ಕಳೆದ ವರ್ಷ ಸರಕಾರ ಭರವಸೆ ನೀಡಿತ್ತು ಎಂದು ನೆನಪಿಸಿದರು. ಈ ಹಂತದಲ್ಲಿ ತಮಿಳುನಾಡು ಮತ್ತು ಆಂಧ್ರಪ್ರದೇಶದ ಸಂಸದರು ಗದ್ದಲ ಆರಂಭಿಸಿದಾಗ ಸಭಾಧ್ಯಕ್ಷ ವೆಂಕಯ್ಯ ನಾಯ್ಡು ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡುವುದಾಗಿ ಘೋಷಿಸಿದರು.

ಆದರೆ ಇದಕ್ಕೆ ಆಝಾದ್ ತೀವ್ರ ಆಕ್ಷೇಪ ಸೂಚಿಸಿದರು. ಬ್ಯಾಂಕಿಂಗ್ ವಂಚನೆಯಂತಹ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕಿದ್ದು ಇದಕ್ಕೆ ಪೂರಕವಾದ ವಾತಾವರಣ ರೂಪಿಸಲು ಪ್ರಯತ್ನಿಸುವ ಬದಲು ಸರಕಾರ ಕಲಾಪ ಮುಂದೂಡಿ ಪಲಾಯನವಾದಕ್ಕೆ ಮೊರೆ ಹೋಗಿದೆ ಎಂದವರು ಟೀಕಿಸಿದರು. ಆದರೆ ಡಿಎಂಕೆ, ಎಐಎಡಿಎಂಕೆ, ಟಿಡಿಪಿ ಸದಸ್ಯರು ಸದನದ ಬಾವಿಗೆ ನುಗ್ಗಿ ಘೋಷಣೆ ಮುಂದುವರಿಸಿದರು. ಸರಕಾರ ಯಾವುದೇ ಚರ್ಚೆಗೆ ಸಿದ್ಧವಿದೆ ಎಂದು ಕಾನೂನು ಸಚಿವ ರವಿಶಂಕರ್‌ಪ್ರಸಾದ್ ಹಾಗೂ ಸಂಸದೀಯ ವ್ಯವಹಾರಗಳ ಸಹಾಯಕ ಸಚಿವ ವಿಜಯ್ ಗೋಯೆಲ್ ಹೇಳಿದರು. ಆದರೆ ಗದ್ದಲ ಮುಂದುವರಿದಾಗ ವೆಂಕಯ್ಯ ನಾಯ್ಡು ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X