Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಥುವಾ: ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ;...

ಕಥುವಾ: ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ; ಪೊಲೀಸರಿಗೆ ಶರಣಾದ ಮಾಜಿ ಸರಕಾರಿ ಅಧಿಕಾರಿ

ವಾರ್ತಾಭಾರತಿವಾರ್ತಾಭಾರತಿ21 March 2018 4:18 PM IST
share
ಕಥುವಾ: ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ; ಪೊಲೀಸರಿಗೆ ಶರಣಾದ ಮಾಜಿ ಸರಕಾರಿ ಅಧಿಕಾರಿ

ಶ್ರೀನಗರ,ಮಾ.21 : ಜಮ್ಮು ಕಾಶ್ಮೀರದ ಕಥುವ ಎಂಬಲ್ಲಿ ನಡೆದ ಎಂಟು ವರ್ಷದ ಬಾಲಕಿಯೊಬ್ಬಳ ಅಪಹರಣ, ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಸಂಚು ಹೂಡಿದ್ದ ಆರೋಪ ಎದುರಿಸುತ್ತಿದ್ದ ನಿವೃತ್ತ ಸರಕಾರಿ ಅಧಿಕಾರಿ, 60 ವರ್ಷದ ಸಂಜಿ ರಾಮ್ ಇಂದು ಪೊಲೀಸರಿಗೆ ಶರಣಾಗತನಾಗಿದ್ದಾನೆ. ಘಟನೆ ಜನವರಿಯಲ್ಲಿ ನಡೆದಿತ್ತು. ಆತನನ್ನು ಬಂಧಿಸುವಂತೆ ಕ್ರೈಂ ಬ್ರ್ಯಾಂಚ್ ಪೊಲೀಸರಿಗೆ ಹೈಕೋರ್ಟ್ ಆದೇಶಿಸಿದಂದಿನಿಂದ ಆತ ಬಂಧನವನ್ನು ತಪ್ಪಿಸುತ್ತಿದ್ದ.

ಬಾಲಕಿ  ಬಖರ್ವಾಲ್ ಅಲೆಮಾರಿ ಜನಾಂಗಕ್ಕೆ ಸೇರಿದವಳಾಗಿದ್ದುದರಿಂದ ಅವಳಿಗೆ ತೊಂದರೆಯುಂಟು ಮಾಡಿ ಆ ಜನಾಂಗದ ಜನರನ್ನು ಕಥುವಾ ಪ್ರದೇಶದಿಂದ ಹೊರಗೋಡಿಸುವ ಉದ್ದೇಶ ಆರೋಪಿಗಿತ್ತು. ಆತನ ಪುತ್ರ ವಿಶಾಲ್ ನನ್ನು ಉತ್ತರ ಪ್ರದೇಶದ ಮೀರತ್ ನಗರದ ಕಾಲೇಜೊಂದರಿಂದ  ಬಂಧಿಸಿದ ನಂತರ ಆರೋಪಿ ಶರಣಾಗಿದ್ದ.

ಈ ಪ್ರಕರಣದ ದೋಷಾರೋಪ ಪಟ್ಟಿ ದಾಖಲಿಸಲು ಪೊಲೀಸರು  ಫೊರೆನ್ಸಿಕ್ ವರದಿಗಾಗಿ ಕಾಯುತ್ತಿದ್ದಾರೆ. ರಸಾನ ಗ್ರಾಮದ ದೇವಸ್ಥಾನ್ ಎಂಬ ಧಾರ್ಮಿಕ ಸ್ಥಳದಲ್ಲಿ  ಬಾಲಕಿಯನ್ನು ಬಂಧನದಲ್ಲಿರಿಸಿ ಆಕೆಗೆ ಅಮಲು ಪದಾರ್ಥ ನೀಡಿ ಸತತವಾಗಿ ಅತ್ಯಾಚಾರ ನಡೆಸಿ ಹತ್ಯೆಗೈಯ್ಯಲಾಗಿತ್ತು. ಆಕೆಯ ಮೃತದೇಹ ಜನವರಿ 17ರಂದು ಕಾಡಿನ ಮಧ್ಯ ಪತ್ತೆಯಾಗಿತ್ತು.  ಆಕೆಯ ಮೇಲೆ ಅತ್ಯಾಚಾರ ನಡೆಸಲಾದ ಧಾರ್ಮಿಕ ಸ್ಥಳವನ್ನು ಸಂಜಿ ರಾಮ್ ನೋಡಿಕೊಳ್ಳುತ್ತಿದ್ದ. ಇಲ್ಲಿ ಬಾಲಕಿಯನ್ನು ಒಂದು ವಾರ ಇರಿಸಲಾಗಿತ್ತು. ತನ್ನೊಬ್ಬನ ಬಳಿಯೇ ಈ ಸ್ಥಳದ ಕೀಲಿಕೈಗಳಿಲ್ಲ ಎಂದು ಆತ ಈ ಹಿಂದೆ ಹೇಳಿಕೊಂಡಿದ್ದ.

ಪ್ರಕರಣದ ಸಂಬಂಧ ವಿಶೇಷ ಪೊಲೀಸ್ ಅಧಿಕಾರಿ ದೀಪಕ್ ಖಜುರಿಯಾ ಹಾಗೂ ಸಂಜಿ ರಾಮ್ ನ ಸಂಬಂಧಿಯೆನ್ನಲಾದ 19 ವರ್ಷದ ಯುವಕನನ್ನು ಬಂಧಿಸಲಾಗಿದೆ. ಸಾಕ್ಷ್ಯ ನಾಶ ಪಡಿಸಿದ ಆರೋಪದ ಮೇಲೆ ಒಬ್ಬ ಎಸ್ಸೈ ಸೇರಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನೂ ಬಂಧಿಸಲಾಗಿದೆ. ಬಾಲಕಿಯ ರಕ್ತಸಿಕ್ತ ಬಟ್ಟೆಗಳನ್ನು  ತೊಳೆದು ನಂತರ ಅದನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದ ಆರೋಪ ಅವರ ಮೇಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X