Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅವಿಶ್ವಾಸ ಸೂಚನೆಗಳನ್ನು ಕೈಗತ್ತಿಕೊಳ್ಳದ...

ಅವಿಶ್ವಾಸ ಸೂಚನೆಗಳನ್ನು ಕೈಗತ್ತಿಕೊಳ್ಳದ ಲೋಕಸಭೆ,ಚರ್ಚೆಗೆ ಸಿದ್ಧವೆಂದ ಸರಕಾರ

ವಾರ್ತಾಭಾರತಿವಾರ್ತಾಭಾರತಿ21 March 2018 8:22 PM IST
share
ಅವಿಶ್ವಾಸ ಸೂಚನೆಗಳನ್ನು ಕೈಗತ್ತಿಕೊಳ್ಳದ ಲೋಕಸಭೆ,ಚರ್ಚೆಗೆ ಸಿದ್ಧವೆಂದ ಸರಕಾರ

ಹೊಸದಿಲ್ಲಿ,ಮಾ.21: ವಿವಿಧ ಪಕ್ಷಗಳ ಸದಸ್ಯರಿಂದ ಕೋಲಾಹಲ ಪೂರ್ಣ ಪ್ರತಿಭಟನೆಗಳಿಂದಾಗಿ ಬುಧವಾರ ಕಲಾಪದಲ್ಲಿ ವ್ಯತ್ಯಯ ದಿಂದಾಗಿ ಲೋಕಸಭೆಯು ಮುಂದೂಡಲ್ಪಟ್ಟಿದ್ದರಿಂದ ಸರಕಾರದ ವಿರುದ್ಧ ಮಂಡಿಸಲಾಗಿರುವ ಅವಿಶ್ವಾಸ ಸೂಚನೆಗಳನ್ನು ಸದನವು ಕೈಗೆತ್ತಿಕೊಳ್ಳಲಿಲ್ಲ.

ಗದ್ದಲದ ನಡುವೆಯೇ ಗೃಹಸಚಿವ ರಾಜನಾಥ್ ಸಿಂಗ್ ಅವರು, ಅವಿಶ್ವಾಸ ಸೂಚನೆ ಸೇರಿದಂತೆ ಯಾವುದೇ ವಿಷಯದ ಮೇಲೆ ಚರ್ಚೆಗೆ ಸರಕಾರವು ಸಿದ್ಧವಿದೆ ಎಂದು ತಿಳಿಸಿದರು.

ಪ್ರಶ್ನೆವೇಳೆಯು ವ್ಯರ್ಥಗೊಂಡ ಬಳಿಕ ಶೂನ್ಯಕಾಲದ ಕಲಾಪಗಳಿಗಾಗಿ ಸದನವು ಸೇರಿದ ಬೆನ್ನಲ್ಲೇ ಟಿಆರ್‌ಎಸ್ ಮತ್ತು ಎಐಎಡಿಎಂಕೆ ಸದಸ್ಯರು ಭಿತ್ತಿಪತ್ರಗಳನ್ನು ಹಿಡಿದುಕೊಂಡು ಸದನದ ಅಂಗಳಕ್ಕೆ ನುಗ್ಗಿದರು. ಟಿಆರ್‌ಎಸ್ ಕೋಟಾ ಹೆಚ್ಚಳಕ್ಕಾಗಿ ಆಗ್ರಹಿಸುತ್ತಿದ್ದರೆ, ಕಾವೇರಿ ನದಿ ನಿರ್ವಹಣೆ ಮಂಡಳಿಯ ರಚನೆಗಾಗಿ ಎಐಎಡಿಎಂಕೆ ಪಟ್ಟು ಹಿಡಿದಿತ್ತು.

ಚರ್ಚೆಗೆ ಸರಕಾರವು ಸಿದ್ಧವಿದೆ ಎಂದು ಹೇಳಿದ ಸಿಂಗ್, ಚರ್ಚೆಯನ್ನು ಕೈಗೆತ್ತಿಕೊಳ್ಳಲು ಸಹಕರಿಸುವಂತೆ ಎಲ್ಲ ಪಕ್ಷಗಳನ್ನು ಕೋರಿಕೊಂಡರು.

ತಮ್ಮ ಆಸನಗಳಿಗೆ ಮರಳುವಂತೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಪ್ರತಿಭಟನಾನಿರತ ಸದಸ್ಯರಿಗೆ ಪದೇಪದೇ ಮಾಡಿಕೊಂಡ ಮನವಿಗಳು ವಿಫಲಗೊಂಡವು.

ಕೋಲಾಹಲ ಮುಂದುವರಿಯುತ್ತಿದ್ದಂತೆ ಮಹಾಜನ ಅವರು, ಅವಿಶ್ವಾಸ ನಿರ್ಣಯವನ್ನು ಕೈಗೆತ್ತಿಕೊಳ್ಳಲು ತಾನು ಕರ್ತವ್ಯ ಬದ್ಧವಾಗಿದ್ದೇನೆ, ಆದರೆ ಕಲಾಪ ವ್ಯತ್ಯಯದಿಂದಾಗಿ ಹಾಗೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ವಿಷಾದಿಸಿ, ದಿನದ ಮಟ್ಟಗೆ ಸದನವನ್ನು ಮುಂದೂಡಿದರು.

ವೈಎಸ್‌ಆರ್ ಕಾಂಗ್ರೆಸ್ ಸದಸ್ಯ ವೈ.ವಿ.ಸುಬ್ಬಾರೆಡ್ಡಿ ಮತ್ತು ಟಿಡಿಪಿ ಸದಸ್ಯರಾದ ಥೋಟ ನರಸಿಂಹಂ ಮತ್ತು ಜಯದೇವ ಗಲ್ಲಾ ಅವರು ಅವಿಶ್ವಾಸ ಸೂಚನೆಗಳನ್ನು ಮಂಡಿಸಿದ್ದಾರೆ. ಉಭಯ ಪಕ್ಷಗಳು ಆಂಧ್ರಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಒತ್ತಾಯಿಸುತ್ತಿವೆ. ಇದರೊಂದಿಗೆ ಸತತ 11ನೇ ದಿನವೂ ಸದನದ ಕಲಾಪಗಳು ವ್ಯರ್ಥವಾಗಿದ್ದು, ಎರಡನೇ ದಿನವೂ ಅವಿಶ್ವಾಸ ಸೂನೆಗಳನ್ನು ಕೈಗೆತ್ತಿಕೊಳ್ಳಲು ಸ್ಪೀಕರ್‌ಗೆ ಸಾಧ್ಯವಾಗಲಿಲ್ಲ. ಇದಕ್ಕೂ ಮುನ್ನ ಪ್ರಶ್ನೆವೇಳೆಯಲ್ಲಿ ಬ್ಯಾಂಕಿಂಗ್ ಹಗರಣ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಟಿಡಿಪಿ, ವೈಎಸ್‌ಆರ್ ಕಾಂಗ್ರೆಸ್, ಟಿಆರ್‌ಎಸ್ ಮತ್ತು ಎಐಎಡಿಎಂಕೆ ಸದಸ್ಯರ ಪ್ರತಿಭಟನೆ ಗಳಿಂದಾಗಿ ಸದನವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X