Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶ್ರೀನಿವಾಸ ಪ್ರಸಾದ್ ರಂತವರು ಸಕ್ರಿಯ...

ಶ್ರೀನಿವಾಸ ಪ್ರಸಾದ್ ರಂತವರು ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯಬೇಕು: ​ನ್ಯಾ.ಸಂತೋಷ್ ಹೆಗಡೆ

ವಾರ್ತಾಭಾರತಿವಾರ್ತಾಭಾರತಿ21 March 2018 9:58 PM IST
share
ಶ್ರೀನಿವಾಸ ಪ್ರಸಾದ್ ರಂತವರು ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯಬೇಕು: ​ನ್ಯಾ.ಸಂತೋಷ್ ಹೆಗಡೆ

ಮೈಸೂರು,ಮಾ.21: ಪ್ರಸ್ತುತ ರಾಜಕಾರಣದಲ್ಲಿ ಬದಲಾವಣೆಗಳು ಆಗಬೇಕಿದ್ದು. ಆ ಬದಲಾವಣೆ ತರುವ ನಿಟ್ಟಿನಲ್ಲಿ ವಿ.ಶ್ರೀನಿವಾಸಪ್ರಸಾದ್ ಅಂತಹ ರಾಜಕಾರಣಿ ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯಬೇಕು ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗಡೆ ಅಭಿಪ್ರಾಯಿಸಿದರು.

ನಗರದ ಕಲಾಮಂದಿರದಲ್ಲಿ ಬುಧವಾರ ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್ ಅವರು ಬರೆದಿರುವ ;ಸ್ವಾಭಿಮಾನಿ ರಾಜಕಾರಣದ ಹಿನ್ನಲೆ ನಂಜನಗೂಡು ಉಪಚುನಾವಣೆ ವಿಶ್ಲೇಷಣೆ; ಪುಸ್ತಕವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ನಾನು ಹಲವಾರು ರಾಜಕಾರಣಿಗಳನ್ನು ಕಂಡಿದ್ದೇನೆ. ಅವರ ಬಗ್ಗೆ ತಿಳಿದುಕೊಂಡಿದ್ದೇನೆ. ಅದರಲ್ಲಿ ಪ್ರಾಮಾಣಿಕವಾಗಿ ಹಾಗೂ ತಮ್ಮ ತತ್ವ ಸಿದ್ಧಾಂತಗಳನ್ನು ಉಳಿಸಿಕೊಂಡು ಬಂದಿರುವ ರಾಜಕಾರಣಿಗಳು ಕೆಲವರು ಮಾತ್ರ. ಅಂತಹ ರಾಜಕಾರಣಿಗಳಲ್ಲಿ ಶ್ರೀನಿವಾಸಪ್ರಸಾದ್ ಒಬ್ಬರು ಎಂದು ಹೇಳಿದರು.

ಪ್ರಸ್ತುತ ರಾಜಕಾರಣ ಬೇಸರ ಮೂಡಿಸಿದೆ. ಕಳೆದ ಚಳಿಗಾಲದ ಲೋಕಸಭಾ ಅಧಿವೇಶನ 14 ದಿನಗಳವರೆಗೆ ನಡೆಯಿತು. ಆದರೆ ಯಾವುದೇ ವಿಚಾರವೂ ಜನರಿಗಾಗಿ ಚರ್ಚೆಯಾಗಲಿಲ್ಲ. ಅಷ್ಟೂ ದಿನದ ಕಲಾಪವು ಗದ್ದಲ, ಸಭಾತ್ಯಾಗದಿಂದ ಕೂಡಿತ್ತು. ಒಂದು ದಿನ ಲೋಕಸಭಾ ಅಧಿವೇಶನದ ಖರ್ಚು 10ಕೋಟಿ ರೂ.. ಹಾಗಾದರೆ ಇಂತಹ ರಾಜಕಾರಣಿಗಳು ನಮಗೆ ಬೇಕೆ ? ಹಾಗೆಯೇ ವಿಧಾನಸಭಾ ಅಧಿವೇಶನದಲ್ಲಿ ನಾಲ್ಕು ಕರಡು ಸೂಚನೆಯನ್ನು ಮಂಡಿಸಲಾಯಿತು. ಆದರೆ ಅದರ ಚರ್ಚೆಯಲ್ಲಿ ಭಾಗವಹಿಸಿದ್ದು 22 ಮಂದಿ ಶಾಸಕರು ಎಂದು ಬೇಸರ ವ್ಯಕ್ತಪಡಿಸಿದರು.

ನಾನು ಲೋಕಾಯುಕ್ತ ನಾಗಿ ಕೆಲಸ ನಿರ್ವಹಿಸಿದ ಸಂದರ್ಭದಲ್ಲಿ ಗಣಿ ಹಗರಣದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷದ ಮೂವರು ಮುಖ್ಯಮಂತ್ರಿಗಳು, 8 ಜನ ಮಂತ್ರಿಗಳು, 50ಕ್ಕೂ ಹೆಚ್ಚು ಐಎಎಸ್, ಐಪಿಎಸ್ ನಂತಹ ಅಧಿಕಾರಿಗಳು, ಬಹಳಷ್ಟು ಶಾಸಕರ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು. ಇದರಿಂದ ಶ್ರೀನಿವಾಸಪ್ರಸಾದ್ ದೂರ ಇದ್ದರು. ಹಾಗಾಗಿ ಅಂತವರು ಯೋಗ್ಯರು ಎಂದು ಭಾವಿಸಿರುವುದಾಗಿ ಹೇಳಿದರು.

ರಾಜನೀತಿ ಹೋಗಿ ಪ್ರಜಾಪ್ರಭುತ್ವ ಬಂದು ರಾಜಕಾರಣ ಜನರಿಂದ ಜನರಿಗಾಗಿ ಜನರ ಸರಕಾರ ಎಂದು ನಾವುಗಳು ಭಾವಿಸಿದ್ದೇವೆ. ಆದರೆ ಕೆಲವು ರಾಜಕಾರಣಿಗಳು ಕೆಲವರಿಂದ ಕೆಲವರಿಗಾಗಿ ಕೆಲವರ ಸರಕಾರ ಎಂದು ತಿಳಿದುಕೊಂಡಿದ್ದಾರೆ. ಪ್ರಜಾಪ್ರತಿನಿದಿಗಳನ್ನು ನಾಯಕರನ್ನಾಗಿ ಕಳುಹಿಸಿದ್ದೇವೆ ಹೊರತು ಮಾಲಿಕರನ್ನಾಗಿ ಕಳುಹಿಸಿಲ್ಲ ಎಂದು ಎಚ್ಚರಿಸಿದರು.

ಇದಕ್ಕೂ ಮೊದಲು ವಿ.ಶ್ರೀನಿವಾಸಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜಕಾರಣ ನಮ್ಮ ಕುಟುಂಬಕ್ಕೆ ವಿರುದ್ಧವಾಗಿ ಇತ್ತು. ಕೆಲವು ಪರಿಸ್ಥಿತಿಗಳು ನನ್ನನ್ನು ರಾಜಕಾರಣಕ್ಕೆ ಬರುವಂತೆ ಮಾಡಿತು ಎಂದು ಅವರು ರಾಜಕಾರಣಕ್ಕೆ ಬಂದ ರೀತಿ ಮತ್ತು ನಂಜನೂಡು ಉಪಚುನಾವಣೆ ಯಾವ ರೀತಿ ನಡೆಯಿತು ಎಂದು ಸಂಕ್ಷಿಪ್ತವಾಗಿ ವಿವರಿಸಿದರು.

ಕಾರ್ಯಕ್ರಮದಲ್ಲಿ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್, ಪತ್ರಿಕೋದ್ಯಮಿ ಕೆ.ಬಿ.ಗಣಪತಿ, ಮುಡಾ ಮಾಜಿ ಅಧ್ಯಕ್ಷ ಕೆ.ಆರ್.ಮೋಹನ್‍ಕುಮಾರ್ ಡಾ.ನಂಜುಂಡಸ್ವಾಮಿ, ಪ್ರೊ.ನೀಲಗಿರಿ ತಳವಾರ್. ಡಾ.ಸಿ.ನಾಗಣ್ಣ, ನಂದಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X