Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದ್ರಾವಿಡ ಭಾಷೆಗಳು 4,500 ವರ್ಷಗಳಷ್ಟು...

ದ್ರಾವಿಡ ಭಾಷೆಗಳು 4,500 ವರ್ಷಗಳಷ್ಟು ಹಳೆಯವು:ಅಧ್ಯಯನ

ವಾರ್ತಾಭಾರತಿವಾರ್ತಾಭಾರತಿ22 March 2018 10:50 PM IST
share
ದ್ರಾವಿಡ ಭಾಷೆಗಳು 4,500 ವರ್ಷಗಳಷ್ಟು ಹಳೆಯವು:ಅಧ್ಯಯನ

ಬರ್ಲಿನ್,ಮಾ.22: ದ್ರಾವಿಡ ಭಾಷಾ ಸಮೂಹದ ನಾಲ್ಕು ದೊಡ್ಡ ಭಾಷೆಗಳಾದ ಕನ್ನಡ, ಮಲಯಾಳಂ, ತಮಿಳು ಮತ್ತು ತೆಲುಗು ಶತಮಾನಗಳಷ್ಟು ಹಳೆಯದಾಗಿದ್ದು, ಈ ಪೈಕಿ ತಮಿಳು ಅತ್ಯಂತ ಪುರಾತನ ಭಾಷೆಯಾಗಿದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ.

ದಕ್ಷಿಣ ಮತ್ತು ಮಧ್ಯಭಾರತದಲ್ಲಿ ಸುಮಾರು 22 ಕೋಟಿ ಜನರು ಮಾತನಾಡುವ 80 ವಿವಿಧ ಭಾಷಾವೈವಿಧ್ಯ ಗಳನ್ನೊಳಗೊಂಡಿರುವ ದ್ರಾವಿಡ ಭಾಷೆಗಳ ಸಮೂಹವು ಸುಮಾರು 4,500 ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿತ್ತು ಎಂದು ಅದು ಹೇಳಿದೆ.

 ಈ ಅಂದಾಜು ಜರ್ಮನಿಯ ಮ್ಯಾಕ್ಸ್ ಪ್ಲಾಂಕ್ ಮಾನವ ಇತಿಹಾಸ ವಿಜ್ಞಾನ ಸಂಸ್ಥೆ ಮತ್ತು ಡೆಹ್ರಾಡೂನ್‌ನ ಭಾರತೀಯ ವನ್ಯಜೀವಿ ಸಂಸ್ಥೆಗಳ ಸಂಶೋಧಕರನ್ನೊಳಗೊಂಡ ಅಂತಾರಾಷ್ಟ್ರೀಯ ತಂಡದ ನೂತನ ಭಾಷಾವ್ಯಾಸಂಗ ವಿಶ್ಲೇಷಣೆಯನ್ನು ಆಧರಿಸಿದೆ.

ಪಶ್ಚಿಮದಲ್ಲಿ ಅಫಘಾನಿಸ್ತಾನದಿಂದ ಪೂರ್ವಕ್ಕೆ ಬಾಂಗ್ಲಾದೇಶ ವರೆಗಿನ ದಕ್ಷಿಣ ಏಷ್ಯಾವು ದ್ರಾವಿಡ, ಭಾರತೀಯ-ಐರೋಪ್ಯ ಮತ್ತು ಚೀನಿ-ಟಿಬೆಟನ್ ಸೇರಿದಂತೆ ಆರು ದೊಡ್ಡ ಭಾಷಾ ಕುಟುಂಬಗಳಿಗೆ ಸೇರಿದ ಕನಿಷ್ಠ 600 ಭಾಷೆಗಳಿಗೆ ತವರಾಗಿದೆ.

 ಸಂಸ್ಕೃತದಂತೆ ತಮಿಳು ಕೂಡ ವಿಶ್ವದ ಶಾಸ್ತ್ರೀಯ ಭಾಷೆ ಗಳಲ್ಲೊಂದಾಗಿದೆ. ಆದರೆ ಸಂಸ್ಕೃತ ನಿಂತ ನೀರಾಗಿದ್ದರೆ ತಮಿಳು ಭಾಷೆಯು ಶಾಸನಗಳು, ಕವಿತೆಗಳು, ಜಾತ್ಯತೀತ ಮತ್ತು ಧಾರ್ಮಿಕ ಪುಸ್ತಕಗಳು ಮತ್ತು ಹಾಡುಗಳಲ್ಲಿ ದಾಖಲಾಗಿರುವ ತನ್ನ ಶಾಸ್ತ್ರೀಯ ಮತ್ತು ಆಧುನಿಕ ರೂಪಗಳಲ್ಲಿ ನಿರಂತರತೆೆಯನ್ನು ಕಾಯ್ದುಕೊಂಡು ಬಂದಿದೆ ಎಂದು ಅಧ್ಯಯನ ವರದಿಯು ಹೇಳಿದೆ.

ದ್ರಾವಿಡರು ಭಾರತೀಯ ಉಪಖಂಡದ ಮೂಲನಿವಾಸಿ ಗಳಾಗಿದ್ದು, ಸುಮಾರು 3,500 ವರ್ಷಗಳ ಹಿಂದೆ ಆರ್ಯರು ಭಾರತಕ್ಕೆ ಬರುವ ಮುನ್ನವೇ ಇದ್ದರು ಎಂದು ಸಂಶೋಧಕರು ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X