ಕಾರ್ತಿ ಚಿದಂಬರಂಗೆ ಮಧ್ಯಂತರ ಜಾಮೀನು
ಹೊಸದಿಲ್ಲಿ, ಮಾ.24: ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ದಿಲ್ಲಿಯ ನ್ಯಾಯಾಲಯವೊಂದು ಕಾರ್ತಿ ಚಿದಂಬರಂಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿದೆ. ನ್ಯಾಯಾಲಯದ ಅನುಮತಿ ಪಡೆಯದೆ ದೇಶಬಿಟ್ಟು ತೆರಳದಂತೆ ಹಾಗೂ ಹಾಗೂ ಸಮನ್ಸ್ ಕಳಿಸಿದಾಗ ವಿಚಾರಣೆಗೆ ಹಾಜರಾಗುವಂತೆ ಕಾರ್ತಿ ಚಿದಂಬರಂಗೆ ಷರತ್ತು ವಿಧಿಸಲಾಗಿದೆ. ಅಲ್ಲದೆ ಎಪ್ರಿಲ್ 16ರವರೆಗೆ ಕಾರ್ತಿ ಚಿದಂಬರಂರನ್ನು ಬಂಧಿಸಬಾರದು ಎಂದು ಸೂಚಿಸಿರುವ ವಿಶೇಷ ನ್ಯಾಯಾಧೀಶ ಒ.ಪಿ.ಸೈನಿ, ಕಾರ್ತಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ಬಗ್ಗೆ ಮೂರು ವಾರದೊಳಗೆ ಉತ್ತರಿಸುವಂತೆ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದ್ದಾರೆ.
Next Story