ಬಾಗೇಪಲ್ಲಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
![ಬಾಗೇಪಲ್ಲಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ ಬಾಗೇಪಲ್ಲಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ](https://www.varthabharati.in/sites/default/files/images/articles/2018/03/26/suicid.jpg)
ಬಾಗೇಪಲ್ಲಿ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ ನಡೆದಿದೆ.
ನೇಣಿಗೆ ಶರಣಾಗಿರುವ ವ್ಯಕ್ತಿಯನ್ನು ತಾಲೂಕಿನ ಯಲ್ಲಂಪಲ್ಲಿ ಗ್ರಾಮದ ನಿವಾಸಿ ಮಂಜುನಾಥಚಾರಿ(35) ಎಂದು ಗುರುತಿಸಲಾಗಿದೆ.
ಮೃತ ಮಂಜುನಾಥಚಾರಿ ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಲಳುತ್ತಿದ್ದರು ಎನ್ನಲಾಗಿದೆ. ಇವರು ಮಾನಸಿಕ ಅಸ್ವಸ್ಥರಾಗಿದ್ದ ಪರಿಣಾಮ ಜೀವನದಲ್ಲಿ ಬೇಸರಗೊಂಡು ಭಾನುವಾರ ರಾತ್ರಿ ಬಾಗೇಪಲ್ಲಿ-ಚಿಂತಾಮಣಿ ಮಾರ್ಗದಲ್ಲಿರುವಂತಹ ಅರಣ್ಯ ವಲಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಬಾಗೇಪಲ್ಲಿ ಪೊಲೀಸರು ಘಟನಾ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
Next Story