Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ದುರಂತಗಳಿಗೆ ಆಹ್ವಾನಿಸುತ್ತಿರುವ...

ಉಡುಪಿ: ದುರಂತಗಳಿಗೆ ಆಹ್ವಾನಿಸುತ್ತಿರುವ ಸರಕಾರಿ ತೆರೆದ ಬಾವಿಗಳು

ವಾರ್ತಾಭಾರತಿವಾರ್ತಾಭಾರತಿ27 March 2018 7:38 PM IST
share
ಉಡುಪಿ: ದುರಂತಗಳಿಗೆ ಆಹ್ವಾನಿಸುತ್ತಿರುವ ಸರಕಾರಿ ತೆರೆದ ಬಾವಿಗಳು

ಉಡುಪಿ, ಮಾ.27: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಹಲವಾರು ಸರಕಾರಿ ತೆರೆದ ಬಾವಿಗಳು ದುರಂತಗಳಿಗೆ ಆಹ್ವಾನ ನೀಡುವ ಸ್ಥಿತಿಯಲ್ಲಿರುವುದು ಕಂಡು ಬಂದಿದ್ದು, ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಗಳು ತೆರೆದ ಬಾವಿಗಳಿಗೆ ಸುರಕ್ಷತೆಯ ದೃಷ್ಟಿಯಿಂದ ಕಬ್ಬಿಣದ ಜಾಲರಿ ಅಳವಡಿಸುವಂತೆ ಸಾರ್ವ ಜನಿಕರು ಆಗ್ರಹಿಸಿದ್ದಾರೆ.

ಅಜ್ಜರಕಾಡು ಕಿತ್ತೂರು ಚೆನ್ನಮ್ಮ ರಸ್ತೆಯ ಬದಿಯಲ್ಲಿ ಮತ್ತು ಭುಜಂಗ ಪಾರ್ಕಿನ ಬಯಲು ರಂಗಮಂದಿರದ ಸಮೀಪ, ನಗರದ ಭಗತ್ ಸಿಂಗ್ ಮಾರ್ಗದಲ್ಲಿ ನೀರಿರುವ ತೆರೆದ ಬಾವಿಗಳಿವೆ. ಅದೇ ರೀತಿ ನಗರದ ಹೃದಯ ಭಾಗದಲ್ಲಿ ಇರುವ ನಾರ್ತ್ ಶಾಲೆಯ ಆವರಣದಲ್ಲಿ ಕುಸಿದಿರುವ ಸ್ಥಿತಿಯಲ್ಲಿ ಪಾಳುಬಿದ್ದ ಅಪಾಯಕಾರಿ ಬಾವಿಯೊಂದಿದೆ. ಇವುಗಳಿಗೆ ಯಾವುದೇ ಭದ್ರತೆಗಳಿಲ್ಲ. ಶಾಲಾ ಮಕ್ಕಳ ಕೂಡ ಈ ಪ್ರದೇಶದಲ್ಲಿ ಸಂಚರಿಸುತ್ತಿರುತ್ತಾರೆ.

ದೊಡ್ಡಣಗುಡ್ಡೆ ಪೊಲೀಸ್ ಮೈದಾನದಲ್ಲಿಯೂ ತೆರೆದ ಬಾವಿ ಇರುವುದು ಕಂಡು ಬಂದಿದೆ. ಹೀಗೆ ಉಡುಪಿ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಲವು ಅಪಾಯಕಾರಿ ತೆರೆದ ಬಾವಿಗಳಿವೆ. ಸ್ಥಳಿಯ ನಾಗರಿಕರು ಅಪಾಯಕಾರಿ ಬಾವಿಗಳ ಗುರುತಿಸಿ ಸ್ಥಳಿಯಾಡಳಿಗಳ ಗಮನಕ್ಕೆ ತರುವಂತೆ ಸಾಮಾಜಿಕ ಕಾರ್ಯಕರ್ತರಾದ ತಾರಾನಾಥ್ ಮೇಸ್ತ ಶಿರೂರು ಹಾಗೂ ನಿತ್ಯಾನಂದ ಒಳ ಕಾಡು ತಿಳಿಸಿದ್ದಾರೆ.

ಅನಿರೀಕ್ಷಿತ ದುರಂತಗಳು ಸಂಭವಿಸಿದ ನಂತರ ಏಚ್ಚೆತ್ತು ಕೊಳ್ಳುವ ಮೊದಲೇ ಜಾಗ್ರತೆ ವಹಿಸುವುದು ಸೂಕ್ತ. ಆದುದರಿಂದ ಜಿಲ್ಲಾಡಳಿತ ಅಸುರಕ್ಷಿತ ಸರಕಾರಿ ಬಾವಿಗಳನ್ನು ಗುರುತಿಸಿ ಸುವ್ಯವಸ್ಥಿತವಾದ ಜಾಲರಿ ಅಳವಡಿಸಬೇಕಾಗಿದೆ ಎಂದು ತಾರಾನಾಥ್ ಮೇಸ್ತ ಶಿರೂರು ಹಾಗೂ ನಿತ್ಯಾನಂದ ಒಳಕಾಡು ಆಗ್ರಹಿಸಿದ್ದಾರೆ.

ಸರಕಾರಿ ಪಾಳುಬಾವಿ ದುರಸ್ಥಿಗೆ ಆಗ್ರಹ
ಉಡುಪಿ ನಗರದಲ್ಲಿ 1923ರಲ್ಲಿ ಸ್ಥಾಪನೆಗೊಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ(ನಾರ್ತ್ ಶಾಲೆ) ವಠಾರದಲ್ಲಿ ಹಳೆಯ ಬಾವಿ ಇದ್ದು, ಅದು ಬಳಕೆಗೆ ಯೋ್ಯವಾಗಿರದೆ ಪಾಳು ಬಿದ್ದ ಸ್ಥಿತಿಯಲ್ಲಿದೆ.

ಬಾವಿ ದಂಡೆಯ ಸುತ್ತದ ತಳಭಾಗದ ಕಲ್ಲುಗಳು ಕುಸಿದ ಕಾರಣ ಸನಿಹ ಹೋಗಲು ಭಯದ ವಾತಾವರಣ ಎದುರಾಗಿದೆ. ಅದರೊಳಗೆ ಮರವೊಂದು ಬೆಳೆದ ನಿಂತ ಕಾರಣದಿಂದಾಗಿ ಒಣಗಿದ ಏಲೆಗಳು ಬಿದ್ದು ನೀರು ಕಲ್ಮಶ ಗೊಂಡಿದೆ. ಶಾಲಾ ವಠಾರದ ಬಾವಿ ದುರಸ್ಥಿ ಪಡಿಸಿದ್ದಲ್ಲಿ ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿ ಊಟದ ತಯಾರಿಕೆಗೆ ಪಾತ್ರೆ ಪಗಡೆಗಳ ತೊಳೆಯಲು, ಶಾಲೆಯ ಹೂ ತೋಟದ ಗಿಡಗಳಿಗೆ ನೀರು ಉಣಿಸಲು ಉಪಯೋಗವಾಗುತ್ತದೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಾವಿಯೊಳಗಿರುವ ಮರವನ್ನು ಕಡಿದು, ಶಿಥಿಲಗೊಂಡ ಬಾವಿಯ ದಂಡೆ ಯನ್ನು ದುರಸ್ಥಿ ಪಡಿಸಬೇಕು. ಕಶ್ಮಲಗೊಂಡ ನೀರನ್ನು ಖಾಲಿ ಮಾಡಿ, ಅದರ ಒಳಗೆ ಸಂಗ್ರಹಗೊಂಡ ಹೂಳನ್ನು ತೆಗೆಯಬೇಕು. ಆ ಮೂಲಕ ಜಲ ಮೂಲಗಳ ರಕ್ಷಣೆಯನ್ನು ಜಿಲ್ಲಾಡಳಿತ ಮಾಡಬೇಕಾಗಿದೆ ಎಂದು ತಾರಾನಾಥ್ ಮೇಸ್ತ ಶಿರೂರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X