Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಬಿಬಿಎಂಪಿ ಕೌನ್ಸಿಲ್...

ಬೆಂಗಳೂರು: ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಜಲಮಂಡಳಿ ವಿರುದ್ಧ ಆರೋಪಗಳ ಸುರಿಮಳೆ

ವಾರ್ತಾಭಾರತಿವಾರ್ತಾಭಾರತಿ27 March 2018 8:08 PM IST
share
ಬೆಂಗಳೂರು: ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಜಲಮಂಡಳಿ ವಿರುದ್ಧ ಆರೋಪಗಳ ಸುರಿಮಳೆ

ಬೆಂಗಳೂರು, ಮಾ. 27: ಬೇಸಿಗೆ ಆರಂಭವಾಗಿದ್ದು ನಗರದಲ್ಲಿ ಕುಡಿಯುವ ನೀರಿಗೆ ಅಭಾವ ಸೃಷ್ಟಿಯಾಗುತ್ತಿದೆ. ಬೆಂಗಳೂರು ಜಲಮಂಡಳಿ ನೀರಿನ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮಕೈಗೊಳ್ಳದಿದ್ದರೆ ನಗರದ ಜನತೆ ಹಾಹಾಕಾರ ಪಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಿಬಿಎಂಪಿ ಸದಸ್ಯರು ಒಕ್ಕೂರಲಿನಿಂದ ಒತ್ತಾಯಿಸಿದ್ದಾರೆ.

ಮಂಗಳವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೌನ್ಸಿಲ್ ಸಭೆಯಲ್ಲಿ ಮಾತನಾಡಿದ ಬಿಬಿಎಂಪಿ ಸದಸ್ಯರು, 'ನಮ್ಮ ವಾರ್ಡ್‌ಗಳಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಇದಕ್ಕೆ ಬೆಂಗಳೂರು ಜಲಮಂಡಳಿಯ ಅಧಿಕಾರಿಗಳ ನಿರ್ಲಕ್ಷವೇ ಕಾರಣ' ಎಂದು ದೂರಿದರು.

ಬಿಬಿಎಂಪಿ ವಿರೋಧ ಪಕ್ಷದ ನಾಯಕ ಎಂ.ಪದ್ಮನಾಭ ರೆಡ್ಡಿ ಮಾತನಾಡಿ, 'ನಗರದಲ್ಲಿ ಕುಡಿಯುವ ನೀರಿನ ಶುಲ್ಕದ ಜೊತೆಗೆ ಒಳಚರಂಡಿ ನಿರ್ವಹಣೆ ಶುಲ್ಕವನ್ನು ಜಲಮಂಡಳಿ ಸಂಗ್ರಹಿಸುತ್ತಿದೆ. ಆದರೆ, ಚರಂಡಿಗಳಲ್ಲಿ ಕೊಳಚೆ ನೀರು ಸೇರುವುದನ್ನು ತಡೆಗಟ್ಟುವಲ್ಲಿ ವಿಫಲವಾಗಿದೆ. ಕೊಳಚೆ ನೀರನ್ನು ರಾಜಕಾಲುವೆಗೆ ಸಂರ್ಕ ಕಲ್ಪಿಸಬೇಕೆಂದು ಹೇಳಿದರು.

ತ್ಯಾಜ್ಯನೀರು ಸಂಸ್ಕರಣ ಘಟಕಗಳಿಂದ ಸಂಸ್ಕರಿಸಿದ ಪ್ರಮಾಣ ಎಷ್ಟು ಎಂಬ ಮಾಹಿತಿಯನ್ನು ಸಭೆಗೆ ಜಲಮಂಡಳಿ ಅಧಿಕಾರಿಗಳು ನೀಡಬೇಕು. ಅಲ್ಲದೇ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಪಾರ್ಕ್‌ಗಳು ನೀರಿಲ್ಲದೆ ಒಣಗುತ್ತಿವೆ. ಸಂಸ್ಕರಿಸಿದ ನೀರನ್ನು ಎಲ್ಲ ಪಾರ್ಕ್‌ಗಳಿಗೂ ಉಚಿತವಾಗಿ ಪೂರೈಸಬೇಕೆಂದು ಪದ್ಮನಾಭರೆಡ್ಡಿ ಒತ್ತಾಯಿಸಿದರು.

ಬಿಬಿಎಂಪಿ ಸದಸ್ಯೆ ನೇತ್ರನಾರಾಯಣ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಒಂದು ಸಾವಿರ ಅಡಿ ಕೊಳವೆ ಬಾವಿ ಕೊರೆದರೂ ನೀರು ಸಿಗುವುದಿಲ್ಲ. ಸಿಕ್ಕರೂ ಕೆಲವೊಮ್ಮೆ ಫ್ಲೋರೈಡ್ ಮಿಶ್ರಿತ ನೀರಾಗಿದ್ದು, ಕುಡಿಯಲು ಯೋಗ್ಯವಾಗಿರುವುದಿಲ್ಲ. ಹೀಗಾಗಿ ನೀರು ಪರೀಕ್ಷಿಸುವ ಯಂತ್ರಗಳನ್ನು ನೀಡಬೇಕೆಂದು ಮನವಿ ಮಾಡಿದ ಅವರು, ನಮ್ಮ ವಾರ್ಡ್‌ನಲ್ಲಿ ಕೊಳವೆ ಭಾವಿಗಳ ನಿರ್ವಹಣೆ ಹದಗೆಟ್ಟಿದೆ. ನೀರು ಬಿಡುವ ವಾಲ್‌ಮೆನ್‌ಗಳು ಹಣ ನೀಡುವವರಿಗೆ ಮಾತ್ರ ಪ್ರತಿನಿತ್ಯ ನೀರು ಬಿಡುತ್ತಿದ್ದಾರೆ. ಇನ್ನುಳಿದವರಿಗೆ ವಾರದಲ್ಲಿ ಎರಡು ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದೆ. ಜಲಮಂಡಳಿ ಅಧಿಕಾರಿಗಳಿಗೆ ಈ ಬಗ್ಗೆ ಮನವಿ ಮಾಡಿದರೂ ಸಹ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ದೂರಿದರು. ಇದಕ್ಕೆ ಪದ್ಮನಾಭ ರೆಡ್ಡಿ ಧ್ವನಿಗೂಡಿಸಿದರು.

ಬಿಬಿಎಂಪಿ ಆಡಳಿತ ಪಕ್ಷದ ಸದಸ್ಯ ಎಂ.ಶಿವರಾಜ್ ಮಾತನಾಡಿ, ನಗರದ ಜನತೆಗೆ ಜಲಮಂಡಳಿ ನೀರು ಪೂರೈಸದಿದ್ದರೆ ಬಿಬಿಎಂಪಿಗೆ ದೂರುತ್ತಾರೆ. ನಗರದಲ್ಲಿ ಸುಮಾರು 9ಸಾವಿರ ಬೋರ್‌ವೆಲ್‌ಗಳಿದ್ದು, ಇವುಗಳಲ್ಲಿ ಎರಡು ಸಾವಿರ ಕೊಳವೆಬಾವಿಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಕೊಳವೆಬಾವಿ ಕೊರೆಸಲು ಹಾಗೂ ನಿರ್ವಹಣೆಗೆ ಬಿಬಿಎಂಪಿ ಹಣ ಒದಗಿಸುತ್ತದೆ. ಜಲಮಂಡಳಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X