Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೆಎಜಿಯಲ್ಲಿ ವಿವಾಹಿತರ ನೇಮಕ...

ಜೆಎಜಿಯಲ್ಲಿ ವಿವಾಹಿತರ ನೇಮಕ ದುಬಾರಿಯಾಗುತ್ತದೆ: ದಿಲ್ಲಿ ಹೈಕೋರ್ಟ್‌ನಲ್ಲಿ ಕೇಂದ್ರದ ನಿವೇದನೆ

ವಾರ್ತಾಭಾರತಿವಾರ್ತಾಭಾರತಿ27 March 2018 8:55 PM IST
share
ಜೆಎಜಿಯಲ್ಲಿ ವಿವಾಹಿತರ ನೇಮಕ ದುಬಾರಿಯಾಗುತ್ತದೆ: ದಿಲ್ಲಿ ಹೈಕೋರ್ಟ್‌ನಲ್ಲಿ ಕೇಂದ್ರದ ನಿವೇದನೆ

ಹೊಸದಿಲ್ಲಿ,ಮಾ.27: ಭಾರತೀಯ ಸೇನೆಯ ಕಾನೂನು ವಿಭಾಗವಾದ ‘ಜಡ್ಜ್ ಅಡ್ವೋಕೇಟ್ ಜನರಲ್(ಜೆಎಜಿ)’ನಲ್ಲಿ ವಿವಾಹಿತ ಪುರುಷರು ಮತ್ತು ಸ್ತ್ರೀಯರ ನೇಮಕಾತಿಯು ದುಬಾರಿಯಾಗುತ್ತದೆ. ಇಂತಹವರು ತಮ್ಮ ವೈವಾಹಿಕ ಬಾಧ್ಯತೆಗಳಿಂದಾಗಿ ತರಬೇತಿಗೆ ಗೈರುಹಾಜರಾದರೆ ಅವರಿಗೆ ಬದಲಿ ಅಭ್ಯರ್ಥಿಗಳನ್ನು ಹುಡುಕುವುದು ಭಾರೀ ವೆಚ್ಚದಾಯಕವಾಗುತ್ತದೆ ಎಂದು ಕೇಂದ್ರವು ದಿಲ್ಲಿ ಉಚ್ಚ ನ್ಯಾಯಾಲಯಕ್ಕೆ ತಿಳಿಸಿದೆ.

ವಿವಾಹಿತ ಮಹಿಳೆಯರನ್ನು ಜೆಎಜಿಗೆ ನೇಮಕ ಮಾಡಿಕೊಳ್ಳದಿರುವ ಮೂಲಕ ಅವರ ವಿರುದ್ಧ ‘ಸಾಂಸ್ಥಿಕ ತಾರತಮ್ಯ’ವನ್ನು ಎಸಗಲಾಗುತ್ತಿದೆ ಎಂದು ಆರೋಪಿಸಿ ನ್ಯಾಯವಾದಿ ಕುಶ ಕಾಲ್ರಾ ಅವರು ಮೇ,2016ಲ್ಲಿ ದಾಖಲಿಸಿ ರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿರುವ ಪೀಠದೆದುರು ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಕೇಂದ್ರವು ಈ ವಿಷಯವನ್ನು ನಿವೇದಿಸಿಕೊಂಡಿದೆ.

ಕಾಲ್ರಾ ಅರ್ಜಿಯನ್ನು ಸಲ್ಲಿಸಿದ ಬಳಿಕ 2017, ಆಗಸ್ಟ್‌ನಲ್ಲಿ ತಿದ್ದುಪಡಿಯೊಂದನ್ನು ಹೊರಡಿಸಿದ್ದ ಸೇನೆಯು, ಜೆಎಜಿ ಸೇವೆಗೆ ವಿವಾಹಿತ ಪುರುಷರ ನೇಮಕವನ್ನೂ ನಿಷೇಧಿಸಲಾಗಿದೆ ಎಂದು ತಿಳಿಸಿತ್ತು.

ಪಿಐಎಲ್ ಸಲ್ಲಿಕೆಯಾಗುವವರೆಗೆ ವಿವಾಹಿತ ಪುರುಷರನ್ನು ಜೆಎಜಿಗೆ ಏಕೆ ನೇಮಕ ಮಾಡಿಕೊಳ್ಳಲಾಗುತ್ತಿತ್ತು ಎಂಬ ಕುರಿತು, ತನ್ನ ನೇಮಕಾತಿ ನಿಯಮಗಳು 1960-70ರ ಕಾಲದ್ದಾಗಿವೆ. ಆಗ ಯುವಕರು ಬೇಗನೆ ಮದುವೆ ಮಾಡಿಕೊಳ್ಳುತ್ತಿದ್ದರು ಮತ್ತು ಅವರು ಅರ್ಜಿ ಸಲ್ಲಿಸುವುದನ್ನು ತಡೆದರೆ ಅರ್ಹ ಅಭ್ಯರ್ಥಿಗಳ ಸಂಖ್ಯೆ ಅರ್ಧಕ್ಕೆ ಇಳಿಯುತ್ತಿತ್ತು ಎಂಬ ವಿವರಣೆ ಸೇನೆಯದ್ದಾ ಗಿದೆ.

ಇದನ್ನು ತನ್ನ ಪ್ರಮಾಣತ್ರದಲ್ಲಿ ಉಲ್ಲೇಖಿಸಿರುವ ಕೇಂದ್ರವು, ಕಾಲಕ್ರಮೇಣ ಸಾಮಾಜಿಕ-ಆರ್ಥಿಕ ವಾಸ್ತವಗಳು ಬದಲಾವಣೆ ಗೊಂಡು ಮತ್ತು ಮದುವೆಯಾಗುವ ಮುನ್ನ ವೃತ್ತಿಯೊಂದನ್ನು ಹೊಂದಬೇಕೆಂದು ಸ್ತ್ರೀ-ಪುರುಷರು ಇಚ್ಛಿಸತೊಡಗಿದಾಗ 1992 ರಿಂದ ಸೇನೆಯಲ್ಲಿ ಮಹಿಳೆಯರ ನೇಮಕಾತಿಯನ್ನು ಆರಂಭಿಸ ಲಾಗಿತ್ತು ಎಂದು ಪ್ರಮಾಣಪತ್ರದಲ್ಲಿ ತಿಳಿಸಿದೆ.

ಹೀಗಾಗಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಕೊರತೆಯುಂಟಾಗಿಲ್ಲ ಎಂದಿರುವ ಅದು, ಸೇನೆಯಲ್ಲಿ ನೇಮಕಗೊಂಡ ಬಳಿಕ ಪುರುಷ ಮತ್ತು ಮಹಿಳಾ ಅಧಿಕಾರಿಗಳು ಮದುವೆಯಾಗಲು ನಿಷೇಧ ವಿಲ್ಲ. ತರಬೇತಿ ಅವಧಿ ಮತ್ತು ಸೇವೆಯ ಮೊದಲ ವರ್ಷದಲ್ಲಿ ಮಾತ್ರ ನಿಷೇಧ ಅಸ್ತಿತ್ವಲ್ಲಿದೆ ಎಂದಿದೆ. 25 ವರ್ಷದೊಳಗಿನ ಅಧಿಕಾರಿಗಳು ಕುಟುಂಬ ವಸತಿಯನ್ನು ಪಡೆಯಲು ಅನರ್ಹ ರಾಗಿರುವುದು ಇದಕ್ಕೆ ಕಾರಣವಾಗಿದೆ ಎಂದು ಅದು ಬೆಟ್ಟು ಮಾಡಿದೆ.

ಮೇ 21ರಂದು ಅರ್ಜಿಯು ವಿಚಾರಣೆಗೆ ಬರುವ ನಿರೀಕ್ಷೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X