Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದ ಮತದಾರರ ಸಂಖ್ಯೆಯಲ್ಲಿ ಶೇ.9...

ರಾಜ್ಯದ ಮತದಾರರ ಸಂಖ್ಯೆಯಲ್ಲಿ ಶೇ.9 ರಷ್ಟು ಹೆಚ್ಚಳ: ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ27 March 2018 9:13 PM IST
share
ರಾಜ್ಯದ ಮತದಾರರ ಸಂಖ್ಯೆಯಲ್ಲಿ ಶೇ.9 ರಷ್ಟು ಹೆಚ್ಚಳ: ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್

ಬೆಂಗಳೂರು, ಮಾ.27: 2018ನೆ ಸಾಲಿನ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 4,96,82,351 ಮತದಾರರಿದ್ದು, ಇದರಲ್ಲಿ 2,52,05,820 ಪುರುಷರು ಹಾಗೂ 2,44,71,979 ಮಹಿಳೆಯರು ಮತ್ತು 4,552 ತೃತೀಯ ಲಿಂಗಿಗಳು ಒಳಗೊಂಡಿರುತ್ತಾರೆ. ಕಳೆದ ರಾಜ್ಯ ವಿಧಾನಸಭೆ ಚುನಾವಣೆಗೆ ಹೋಲಿಸಿದ್ದಲ್ಲಿ ಶೇ.9ರಷ್ಟು ಮತದಾರರು ಹೆಚ್ಚಾಗಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್ ತಿಳಿಸಿದರು.

2013ರ ಚುನಾವಣೆಯಲ್ಲಿ 7,18,000 ಹೊಸ ಯುವ ಮತದಾರರು ಮತ ಚಲಾಯಿಸುವ ಹಕ್ಕನ್ನು ಪಡೆದಿದ್ದರು. ಅದೇ ರೀತಿ ಪ್ರಸ್ತುತ 2018ರ ಚುನಾವಣೆಗಾಗಿ 15,42,000 ಹೊಸ ಯುವ ಮತದಾರರು ನೋಂದಣಿಯಾಗಿದ್ದಾರೆ. ಕಳೆದ ಚುನಾವಣೆ ಹೋಲಿಸಿಕೊಂಡಲ್ಲಿ ಶೇ.1.16 ರಿಂದ 2.20 ಏರಿಕೆ ಕಂಡಿದ್ದು, ಇದರಲ್ಲಿ ಲಿಂಗಾನುಪಾತ ಸಾವಿರ ಪುರುಷರಿಗೆ 958 ರಿಂದ 972 ಏರಿಕೆ ಕಂಡು ಬಂದಿದೆ.

ಮತಗಟ್ಟೆಗಳ ವಿವರ: ರಾಜ್ಯದಲ್ಲಿ ಕಳೆದ ವಿಧಾನಸಭಾ ಚುನಾವಣಾ ಸಮಯದಲ್ಲಿ ಒಟ್ಟು 52,034 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಪ್ರಸ್ತುತ ಚುನಾವಣೆಗಾಗಿ 56,696 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು ಇದೇ ಸಂಖ್ಯೆಯ ಮತಗಟ್ಟೆ ಅಧಿಕಾರಿಗಳನ್ನು ಸಹ ನೇಮಿಸಲಾಗುತ್ತದೆ. ಒಟ್ಟು 1,850 ಕ್ಕೂ ಹೆಚ್ಚು ಮತಗಟ್ಟೆಗಳನ್ನು ಈ ಚುನಾವಣೆಯಲ್ಲಿ ಸ್ಥಾಪಿಸಲಾಗುತ್ತಿದೆ.

ಚುನಾವಣೆಗಾಗಿ ಪೂರ್ವಸಿದ್ಧತೆ: ಪ್ರಸ್ತುತ ಚುನಾವಣೆ ರಾಜ್ಯದಲ್ಲಿ ಒಂದೇ ಹಂತದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಕಾರ್ಯಕ್ಕಾಗಿ 3,56,552 ಅಧಿಕಾರಿ/ಸಿಬ್ಬಂದಿಗಳ ಅವಶ್ಯಕವಿರುತ್ತದೆ. ನೀತಿ ಸಂಹಿತೆ ಉಲ್ಲಂಘನೆ ನಿಗಾವಹಿಸಲು 1361 ತಂಡಗಳನ್ನು ರಚಿಸಲಾಗುವುದು. ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ನಿಗಾವಹಿಸಲು 1,503 ತಂಡಗಳು ಹಾಗೂ 1,542 ಸಂಚಾರಿ ನಿಗಾ ತಂಡಗಳು ಮತ್ತು 2018 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

-ಸಂಚಾರಿ ನಿಗಾ ತಂಡಗಳ ವಾಹನಗಳ ಜಿಪಿಎಸ್ ಆಧಾರಿತ ಟ್ರ್ಯಾಕಿಂಗ್ ವ್ಯವಸ್ಥೆ.
-ಮತಗಟ್ಟೆಗಳ ಜಿಐಎಸ್ ಆಧಾರಿತ ದತ್ತಾಂಶ ಹಾಗೂ ಡಿಜಿಟಲ್ ಮ್ಯಾಪ್‌ಗಳ ಲಭ್ಯತೆ.
-ಮತಗಟ್ಟೆಗಳ ಪ್ರದೇಶ ಹಾಗೂ ವಿಧಾನಸಭಾ ಕ್ಷೇತ್ರಗಳ ಡಿಜಿಟಲ್ ಅಟ್ಲಾಸ್
-ವಿಕಲಚೇತನರನ್ನು ಗುರುತಿಸಿ ಅವರಿಗೆ ಅಗತ್ಯ ಸೌಲಭ್ಯ ಒದಗಿಸಲು ಕ್ರಮ
-ಮತಗಟ್ಟೆಗಳನ್ನು ಗುರುತಿಸಲು ಎಸ್‌ಎಂಎಸ್ ಆಧಾರಿತ ಸೇವೆ.
-ಮತಗಟ್ಟೆಗಳನ್ನು ಗುರುತಿಸಲು ಆ್ಯಪ್ ಸೇವೆ.
-ಲಭ್ಯ ಸೌಲಭ್ಯವನ್ನು ಆಧರಿಸಿ 3000 ದಿಂದ 6000 ಮತಗಟ್ಟೆಗಳ ಮತದಾನ ಪ್ರಕ್ರಿಯೆಯ ವೆಬ್ಕಾಸ್ಟಿಂಗ್ ವ್ಯವಸ್ಥೆ
-ಗಂಭೀರ ಸ್ವರೂಪದ ದೂರುಗಳ ತ್ವರಿತ ಪರಿಶೀಲನೆಗೆ ಜಿಐಎಸ್ ಆಧಾರಿತ ಟ್ರಾಕಿಂಗ್ ವ್ಯವಸ್ಥೆ
-ಮುಖ್ಯವಾಹಿನಿಯಿಂದ ಹೊರಗೆ ಉಳಿದಿರುವ ಆದಿವಾಸಿ ಬುಡಕಟ್ಟು ಜನಾಂಗದವರು, ಅಲೆಮಾರಿ ಜನಾಂಗದವರ ನೋಂದಣಿಗೆ ವಿಶೇಷ ಅಭಿಯಾನ.
-ಪ್ರಾಯೋಗಿಕವಾಗಿ ಬುಡಕಟ್ಟು ಜನಾಂಗದವರ ಸಾಂಪ್ರದಾಯಿಕ ಶೈಲಿಯ ಮತಗಟ್ಟೆಗಳ ಸ್ಥಾಪನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X