Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ನೀತಿ ಸಂಹಿತೆ ಜಾರಿ...

ಶಿವಮೊಗ್ಗ: ನೀತಿ ಸಂಹಿತೆ ಜಾರಿ ಬೆನ್ನಲ್ಲೆ ರಾಜಕೀಯ ಪಕ್ಷಗಳ ಫ್ಲೆಕ್ಸ್ ತೆರವು; ಚುನಾಯಿತ ಪ್ರತಿನಿಧಿಗಳ ವಾಹನ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ27 March 2018 10:34 PM IST
share
ಶಿವಮೊಗ್ಗ: ನೀತಿ ಸಂಹಿತೆ ಜಾರಿ ಬೆನ್ನಲ್ಲೆ ರಾಜಕೀಯ ಪಕ್ಷಗಳ ಫ್ಲೆಕ್ಸ್ ತೆರವು; ಚುನಾಯಿತ ಪ್ರತಿನಿಧಿಗಳ ವಾಹನ ವಶಕ್ಕೆ

ಶಿವಮೊಗ್ಗ, ಮಾ. 27: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಘೋಷಣೆ ಬೆನ್ನಲ್ಲೆ ನಗರಾದ್ಯಂತ ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದ ಫ್ಲೆಕ್ಸ್, ಬಂಟಿಂಗ್ಸ್, ಪೋಸ್ಟರ್ ಗಳ ತೆರವು ಕಾರ್ಯಾಚರಣೆಯನ್ನು ಮಂಗಳವಾರ ಮಹಾನಗರ ಪಾಲಿಕೆ ಆಡಳಿತ ಸಮರೋಪಾದಿಯಲ್ಲಿ ನಡೆಸಿತು. 

ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ತುಂಬಿ ತುಳುಕುತ್ತಿದ್ದ ರಾಜಕೀಯ ಪಕ್ಷಗಳ ಫ್ಲೆಕ್ಸ್-ಬಂಟಿಂಗ್ಸ್, ಪೋಸ್ಟರ್ ಗಳನ್ನು ಪಾಲಿಕೆ ಆಡಳಿತ ತೆರವುಗೊಳಿಸಿತು. ಚುನಾವಣಾ ನೀತಿ-ಸಂಹಿತೆ ಪೂರ್ಣಗೊಳ್ಳುವವರೆಗೂ ಚುನಾವಣಾ ಆಯೋಗದ ಅನುಮತಿಯಿಲ್ಲದೆ ಯಾವುದೇ ಫ್ಲೆಕ್ಸ್-ಬಂಟಿಂಗ್ಸ್ ಅಳವಡಿಕೆ ಮಾಡುವಂತಿಲ್ಲ. ಅಳವಡಿಕೆಗೆ ಆಯೋಗದ ಅನುಮತಿ ಕಡ್ಡಾಯವಾಗಿದೆ. 

ವಾಹನ ವಶಕ್ಕೆ: ವಿವಿಧ ಅಧಿಕಾರಸ್ಥ ಚುನಾಯಿತ ಪ್ರತಿನಿಧಿಗಳು ಮತ್ತು ನಾಮನಿರ್ದೇಶಿತ ಸದಸ್ಯರಿಗೆ ನೀಡಲಾಗಿದ್ದ ಸರ್ಕಾರಿ ವಾಹನಗಳನ್ನು ಜಿಲ್ಲಾಡಳಿತ ತತ್‍ಕ್ಷಣದಿಂದಲೇ ಹಿಂದಕ್ಕೆ ಪಡೆದುಕೊಂಡಿದೆ. ಹಾಗೆಯೇ ಶಾಸಕರು, ಸಂಸದರ ಅನುದಾನದಡಿ ನಿರ್ಮಿಸಲಾಗಿರುವ ಆಟೋ, ಬಸ್, ಟ್ಯಾಕ್ಸಿ ನಿಲ್ದಾಣಗಳ ಬಳಿ ಹಾಕಿರುವ ಫಲಕಗಳು ಮತ್ತು ಸರ್ಕಾರದ ವಿವಿಧ ಯೋಜನೆಗಳ ಫಲಕಗಳಲ್ಲಿರುವ ಜನಪ್ರತಿನಿಧಿಗಳ ಭಾವಚಿತ್ರಗಳನ್ನು ಮರೆಗೊಳಿಸಲು ಜಿಲ್ಲಾಡಳಿತ ಕ್ರಮಕೈಗೊಂಡಿದೆ. 

ಅನುಮತಿ ಕಡ್ಡಾಯ: ಇನ್ನು ಮುಂದೆ ರಾಜಕೀಯ ಪಕ್ಷಗಳು ಆಯೋಜಿಸುವ ಚುನಾವಣಾ ಸಂಬಂಧಿತ ಸಭೆ, ಸಮಾರಂಭಗಳಿಗೆ ಚುನಾವಣಾ ಆಯೋಗದ ಅನುಮತಿ ಅಗತ್ಯವಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಸಂಬಂಧಿಸಿದವರ ವಿರುದ್ದ ಕ್ರಿಮಿನಲ್ ಕೇಸ್ ದಾಖಲಾಗಿದೆ. ಮತದಾರರಿಗೆ ಆಮಿಷವೊಡ್ಡುವುದಕ್ಕೆ ಕಡಿವಾಣ ಹಾಕಲು ಪ್ರತ್ಯೇಕ ಮಾದರಿ ನೀತಿ ಸಂಹಿತೆ ತಂಡಗಳನ್ನು ಕೂಡ ಚುನಾವಣಾ ಆಯೋಗ ರಚಿಸಿದೆ. 

ಸಚಿವರಿಗೆ ತಟ್ಟಿದ ನೀತಿ-ಸಂಹಿತೆ ಎಫೆಕ್ಟ್‍ನ ಬಿಸಿ
ಮಂಗಳವಾರ ನಗರಕ್ಕೆ ಆಗಮಿಸಿದ್ದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ರವರಿಗೂ ಚುನಾವಣಾ ನೀತಿ-ಸಂಹಿತೆ ಎಫೆಕ್ಟ್ ನ ಬಿಸಿ ತಟ್ಟಿತು. ಬೆಂಗಳೂರಿನಿಂದ ಹೆಲಿಕಾಪ್ಟರ್ ನಲ್ಲಿ ಶಿವಮೊಗ್ಗಕ್ಕೆ ಸಚಿವರು ಆಗಮಿಸುವ ವೇಳೆಗಾಗಲೇ ಚುನಾವಣಾ ಆಯೋಗ ನೀತಿ-ಸಂಹಿತೆ ಪ್ರಕಟಿಸಿತ್ತು. ಈ ಕಾರಣದಿಂದ ಸಚಿವರನ್ನು ಬರ ಮಾಡಿಕೊಳ್ಳಲು ಹೆಲಿಪ್ಯಾಡ್‍ಗೆ ಬಂದಿದ್ದ ಸರ್ಕಾರಿ ಅಧಿಕಾರಿಗಳು ವಾಹನ ಸಮೇತ ಹೆಲಿಪ್ಯಾಡ್‍ನಿಂದ ಹಿಂದಿರುಗಿದರು. ಹಾಗೆಯೇ ಸಚಿವರನ್ನು ಆಹ್ವಾನಿಸಲು ಬಂದಿದ್ದ ಜನಪ್ರತಿನಿಧಿಗಳು ಕೂಡ ಸರ್ಕಾರಿ ವಾಹನಗಳನ್ನು ಬಿಟ್ಟು ಖಾಸಗಿ ವಾಹನಗಳಲ್ಲಿ ಹಿಂದಿರುಗುವಂತಾಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X