Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ: ಮಾಹೆಯ ಸಿಲ್ವರ್ ಉತ್ಸವ್‌ದಲ್ಲಿ...

ಮಣಿಪಾಲ: ಮಾಹೆಯ ಸಿಲ್ವರ್ ಉತ್ಸವ್‌ದಲ್ಲಿ ‘ಮಾಸ್ಟರ್ ಚೆಫ್’

ವಾರ್ತಾಭಾರತಿವಾರ್ತಾಭಾರತಿ27 March 2018 10:48 PM IST
share
ಮಣಿಪಾಲ: ಮಾಹೆಯ ಸಿಲ್ವರ್ ಉತ್ಸವ್‌ದಲ್ಲಿ ‘ಮಾಸ್ಟರ್ ಚೆಫ್’

ಮಣಿಪಾಲ, ಮಾ.27: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ತನ್ನ ಸಿಲ್ವರ್ ಉತ್ಸವ್-2018ರ ಅಂಗವಾಗಿ ಶನಿವಾರ ತನ್ನದೇ ಆದ ‘ಮಾಸ್ಟರ್ ಚೆಫ್’ ಸ್ಪರ್ಧೆಯನ್ನು ಹಮ್ಮಿಕೊಳ್ಳಲಿದೆ.

ಮಣಿಪಾಲದ ವೆಲ್‌ಕಮ್ ಗ್ರೂಪ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಹೊಟೇಲ್ ಅಡ್ಮಿನಿಸ್ಟ್ರೇಷನ್‌ನ ನೂತನ ಕಟ್ಟಡದ ಅತ್ಯಾಧುನಿಕ ಅಡುಗೆಕೋಣೆ (ಕಿಚನ್) ಯಲ್ಲಿ ಸ್ಪರ್ದಾಳುಗಳು ಹೊಸ ಹೊಸ ಬಗೆಯ ಸಸ್ಯಾಹಾರಿ, ಮಾಂಸಾಹಾರಿ ಹಾಗೂ ಇತರ ಪಾಕ ವೈವಿಧ್ಯತೆಯನ್ನು ತಯಾರಿಸಿ ಪ್ರದರ್ಶಿಸಲಿದ್ದಾರೆ.

ಉತ್ಸವ್-2018, ಮಾಹೆಯ ಸಿಬ್ಬಂದಿಗಳಿಗೆ ನಡೆಸುವ ಈ ಅಡುಗೆ ಸ್ಪರ್ಧೆ ಯೊಂದಿಗೆ ಉದ್ಘಾಟನೆಗೊಳ್ಳಲಿದೆ. ಬಳಿಕ ಹೂಜೋಡಣೆ ಸ್ಪರ್ಧೆ ಹಾಗೂ ವೈವಿದ್ಯಮಯ ಮನರಂಜನಾ ಸ್ಪರ್ಧೆಗಳು ನಡೆಯಲಿವೆ. ಇದು ಎ.2ರಂದು ನಡೆಯಲಿದೆ. ಮಾಹೆಯ ವಿದ್ಯಾರ್ಥಿಗಳಿಗಾಗಿ ಸ್ಪರ್ಧೆಗಳು ಎ.3ರಂದು ಪ್ರಾರಂಭಗೊಳ್ಳಲಿವೆ ಎಂದು ಮಾಹೆಯ ಸಾಂಸ್ಕೃತಿಕ ಸಮನ್ವಯ ಸಮಿತಿಯ ಅಧ್ಯಕ್ಷೆ ಡಾ.ಶೋಭಾ ಯು.ಕಾಮತ್ ತಿಳಿಸಿದ್ದಾರೆ.

ಮಾಹೆಗೆ 25 ವರ್ಷಗಳು ಪೂರ್ಣಗೊಂಡ ಪ್ರಯುಕ್ತ ಸಿಲ್ವರ್ ಉತ್ಸವ್- 2018 ನಡೆಯುತ್ತಿದೆ. ಇದರಲ್ಲಿ ಕೇವಲ ಮಣಿಪಾಲದ ಮಾತ್ರವಲ್ಲದೇ ಮಾಹೆಗೆ ಸೇರಿದ ಮಂಗಳೂರು, ಬೆಂಗಳೂರು, ಸಿಕ್ಕಿಂ, ದುಬಾಯಿ ಹಾಗೂ ಜೈಪುರ ಕ್ಯಾಂಪಸ್‌ಗಳ ವಿದ್ಯಾರ್ಥಿಗಳೂ ಪಾಲ್ಗೊಳ್ಳಲಿದ್ದಾರೆ. ಇದು ನಾಲ್ಕು ದಿನಗಳ ಉತ್ಸವವಾಗಿರುತ್ತದೆ. ವಸಂತಿ ಆರ್. ಪೈ ಅವರು ಈ ಉತ್ಸವ್‌ವನ್ನು ಉದ್ಘಾಟಿಸಲಿದ್ದಾರೆ ಎಂದರು.

ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ, ಕಾರ್ಟೂನಿಂಗ್, ಚರ್ಚಾ ಸ್ಪರ್ಧೆ, ಭಾಷಣ ಸ್ಪರ್ಧೆ, ಸಂಗೀತ ಸ್ಪರ್ಧೆ ಹಾಗೂ ಜಾನಪದ ನೃತ್ಯ ಸ್ಪರ್ಧೆಗಳೂ ನಡೆಯಲಿವೆ. ಆವೆಮಣ್ಣಿನ ಶಿಲ್ಪ, ಮೈಮ್, ಬೀದಿ ನಾಟಕ, ಜಾಹೀರಾತು ಹಾಗೂ ಫ್ಯಾಶನ್ ಶೋಗಳೊಂದಿಗೆ ಎ.6ರಂದು ಇದು ಮುಕ್ತಾಯಗೊಳ್ಳಲಿದೆ ಎಂದು ಡಾ.ಶೋಭಾ ಕಾಮತ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X